
ದಾವಣಗೆರೆ, ಮಾರ್ಚ್ 28: ಸಚಿವ ಜಮೀರ್ ಅಹ್ಮದ್ರನ್ನು ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದೇನೆ. ಇದೀಗ ಅವರು ಕೇರಳ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬರದಿದ್ದರೂ ಒಳ್ಳೆಯದೇ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆ ಇಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಗರದ ವೆಂಕಾಭೋವಿ ಕಾಲೋನಿಯಲ್ಲಿರುವ ಸಾದಿಕ್ ಪೈಲ್ವಾನ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸರಿ ಹೋಗಿದೆ, ನಾವು ಸಾದಿಕ್ ಪೈಲ್ವಾನ್ ಎಲ್ಲಾ ಒಂದೇ. ಎಲ್ಲಾ ಒಂದಾಗಿ ಚುನಾವಣೆ ಮಾಡುತ್ತೇವೆ. ಯಾರು ಕೂಡ ಇಲ್ಲ ಸಲ್ಲದ ಹೇಳಿಕೆಯನ್ನು ಕೊಡುವುದು ಬೇಡ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸಹ ಪರಿಚಯಸ್ಥರೇ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.