ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಸಚಿವ ಯತೀಂದ್ರ – Kannada News | Demand for Janakamma Memorial: Minister Yathindra Says Decision Will Be Taken Soon

ಮೈಸೂರು, ಜುಲೈ 12: ಸ್ವರ ಸರಸ್ವತಿ ಎಸ್ ಜಾನಕಿಯವರಿಗೂ ಮೈಸೂರಿಗೂ ಅವಿನಾಭಾವ ಸಂಬಂಧವಿದೆ. 2008ರಿಂದ ತಮ್ಮ ಇಳಿವಯಸ್ಸಿನವರೆಗೆ ಅಂದರೆ ತಮ್ಮ ಕೊನೆಯ ದಿನಗಳನ್ನು ಕಳೆದಿದ್ದ ಜಾನಕಿಯವರು, ನಾನು ಮೈಸೂರಿನಲ್ಲೇ ಮಣ್ಣಾಗಬೇಕು ಎಂಬ ಮಾತನ್ನ ಹೇಳಿದ್ದರಂತೆ. ಹೀಗಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕರು ಮತ್ತು ಗಣ್ಯರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಂಜೆ 5 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಲಿದೆ. ಸರ್ಕಾರದ ಪ್ರತಿನಿಧಿಯಾಗಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಜಾನಕಿಯಮ್ಮ ಅವರ ಸ್ಮಾರಕ ನಿರ್ಮಿಸಬೇಕೆಂಬ ಸಾರ್ವಜನಿಕರ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಯತೀಂದ್ರ, ಈ ಕುರಿತು ಸಿಎಂ ಗಮನಕ್ಕೆ ತರುವುದಾಗಿ ಹೇಳಿದರು. ಇದು ಸರ್ಕಾರದ ಮಟ್ಟದಲ್ಲಿ ಮುಖ್ಯಮಂತ್ರಿಗಳೇ ತೀರ್ಮಾನಿಸಬೇಕಾದ ವಿಷಯವಾಗಿದ್ದು, ನಾನು ಕೂಡ ಈ ಬಗ್ಗೆ ಮನವಿ ಸಲ್ಲಿಸುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *