Headlines

ಜಾರ್ಖಂಡ್ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ಗೆ ಮುಖಭಂಗ, ಕ್ರಾಸ್ ವೋಟಿಂಗ್​ನಿಂದ ಗೆದ್ದು ಬೀಗಿದ ಪರಿಮಳ್ ನತ್ವಾಣಿ – Kannada News | BJP backed candidate Parimal Nathwani wins Jharkhand Rajya Sabha polls after cross voting big jolt to Congress

ರಾಂಚಿ, ಜೂನ್ 18: ಜಾರ್ಖಂಡ್‌ನಲ್ಲಿ ನಡೆದ 2 ರಾಜ್ಯಸಭಾ ಚುನಾವಣೆಗಳ (Rajya Sabha Election Results) ಫಲಿತಾಂಶ ಪ್ರಕಟವಾಗಿದೆ. ಎನ್‌ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನತ್ವಾಣಿ ಒಂದು ಸ್ಥಾನವನ್ನು ಗೆದ್ದಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಅಭ್ಯರ್ಥಿ ಬೈದ್ಯನಾಥ್ ರಾಮ್ ಇನ್ನೊಂದು ಸ್ಥಾನವನ್ನು ಗೆದ್ದರು. ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಸೋತಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ 3 ಮತಗಳು ತಿರಸ್ಕೃತಗೊಂಡವು. ಪರಿಮಳ್ ನತ್ವಾಣಿ ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾಗುತ್ತಿರುವುದು ಇದು ನಾಲ್ಕನೇ ಬಾರಿ. ಅವರು 28 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಕೇವಲ 20 ಮತಗಳನ್ನು ಪಡೆದರು.

2 ಸ್ಥಾನಗಳಿಗೆ ನಡೆದ ಈ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳು ಕಣದಲ್ಲಿದ್ದರು. ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಅಭ್ಯರ್ಥಿ ಬೈದ್ಯನಾಥ್ ರಾಮ್ ಮತ್ತು ಬಿಜೆಪಿಯ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ್ ನತ್ವಾಣಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಹೀನಾಯ ಸೋಲು ಅನುಭವಿಸಿದ್ದಾರೆ. ಜಾರ್ಖಂಡ್‌ನಿಂದ ರಾಜ್ಯಸಭೆ ಪ್ರವೇಶಿಸಲು ಒಬ್ಬ ಅಭ್ಯರ್ಥಿಗೆ ಕನಿಷ್ಠ 28 ಮತಗಳ ಅಗತ್ಯವಿತ್ತು. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನವು ಎನ್‌ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನತ್ವಾಣಿ ಅವರ ಗೆಲುವಿಗೆ ದಾರಿ ಮಾಡಿಕೊಟ್ಟಿತು.

ಇದನ್ನೂ ಓದಿ: ಕಾಂಗ್ರೆಸ್​ ಎಡವಟ್ಟಿನಿಂದ ಮಧ್ಯಪ್ರದೇಶದ ಎಲ್ಲ ರಾಜ್ಯಸಭಾ ಸ್ಥಾನಗಳೂ ಬಿಜೆಪಿ ತೆಕ್ಕೆಗೆ

ಬಿಜೆಪಿ ಬೆಂಬಲಿತ ಪರಿಮಳ್ ನತ್ವಾಣಿ ಒಟ್ಟು 30 ಮತಗಳನ್ನು ಪಡೆದಿದ್ದರು. ಆದರೆ ಅವರಲ್ಲಿ 2 ಮತಗಳು ಅಸಿಂಧು ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಅವರ ಅಧಿಕೃತ ಮತಗಳ ಸಂಖ್ಯೆ 28ಕ್ಕೆ ತಲುಪಿತು. ಇದು ಗೆಲುವಿಗೆ ಬೇಕಾದ ನಿಖರ ಸಂಖ್ಯೆಯಾಗಿದ್ದರಿಂದ ಅವರು ಜಯಶಾಲಿ ಎಂದು ಘೋಷಿಸಲ್ಪಟ್ಟರು.

ಜೆಎಂಎಂ ಅಭ್ಯರ್ಥಿ ಬೈದ್ಯನಾಥ್ ರಾಮ್ ಅವರು 1 ಮತ ತಿರಸ್ಕೃತಗೊಂಡ ನಂತರ ಒಟ್ಟು 30 ಮತಗಳನ್ನು ಪಡೆದು ಸುಲಭವಾಗಿ ಆಯ್ಕೆಯಾದರು. ಮೈತ್ರಿಯಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಅವರು ಕೇವಲ 20 ಮತಗಳನ್ನು ಪಡೆದರು. ಆಡಳಿತಾರೂಢ ಮೈತ್ರಿಕೂಟದ ಶಾಸಕರೇ ಕಾಂಗ್ರೆಸ್ ವಿರುದ್ಧ ಕ್ರಾಸ್ ವೋಟಿಂಗ್ ಮಾಡಿರುವುದು ಈ ಸೋಲಿಗೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಈ ಗೆಲುವಿನೊಂದಿಗೆ 245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಅದರ ಮಿತ್ರಪಕ್ಷಗಳ ಒಟ್ಟು ಸಂಖ್ಯಾಬಲ 153ಕ್ಕೆ ಏರಿಕೆಯಾಗಿದೆ. ಪಶ್ಚಿಮ ಬಂಗಾಳದ ಟಿಎಂಸಿ ಪಕ್ಷದ ಸುಖೇಂದು ಶೇಖರ್ ರಾಯ್, ಸುಶ್ಮಿತಾ ದೇವ್ ಸೇರಿದಂತೆ 4 ಸಂಸದರ ರಾಜೀನಾಮೆಯಿಂದಾಗಿ ಸದ್ಯ 4 ಸ್ಥಾನಗಳು ಖಾಲಿಯಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *