ಬೆಂಗಳೂರು, ಜನವರಿ 19: ಚುನಾವಣಾ ಆಯೋಗವು ಜಿಬಿಎ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ಗಳ ಮೂಲಕ ನಡೆಸಲು ನಿರ್ಧರಿಸಿದೆ. ಮೇ 25ರ ನಂತರ ನಡೆಯಲಿರುವ ಈ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಗೆ ಚುನಾವಣಾ ಆಯೋಗವು ತನ್ನದೇ ಆದ ಕಾರಣಗಳನ್ನು ನೀಡಿದ್ದು, ಬ್ಯಾಲೆಟ್ ಪೇಪರ್ಗಳನ್ನು ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಎಲ್ಲಿಯೂ ಹೇಳಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಅಲ್ಲದೆ, ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಮತಪತ್ರಗಳ ಬಳಕೆ ತಮ್ಮ ನಿರ್ಧಾರ ಎಂದು ತಿಳಿಸಿದೆ. ಆದಾಗ್ಯೂ ಈ ಕ್ರಮವು ಹೊಸ ಚರ್ಚೆಗೆ ಕಾರಣವಾಗಿದೆ. ಇವಿಎಂ ವ್ಯವಸ್ಥೆಯ ಮೇಲೆ ಸಾರ್ವಜನಿಕರಲ್ಲಿ ಮೂಡಿರುವ ನಂಬಿಕೆಗೆ ಇದು ಧಕ್ಕೆ ತರುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ. ಕಾಂಗ್ರೆಸ್ ಪಕ್ಷವು ಇವಿಎಂ ಕುರಿತು ನಿರಂತರವಾಗಿ ಆರೋಪಗಳನ್ನು ಮಾಡುತ್ತಿದ್ದು, ಈ ನಿರ್ಧಾರವು ಅದಕ್ಕೆ ಪುಷ್ಟಿ ನೀಡಿದಂತಾಗಬಹುದು ಎಂಬ ಚರ್ಚೆ ನಡೆಯುತ್ತಿದೆ. ಹಿಂದಿನ ಬಿಬಿಎಂಪಿ ಚುನಾವಣೆಗಳಲ್ಲಿ ಇವಿಎಂ ಬಳಸಲಾಗಿತ್ತು ಎಂಬ ಅಂಶವೂ ಇಲ್ಲಿ ಗಮನಾರ್ಹ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
