ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ – Kannada News | Indira Canteens and Bengaluru Parks Face Neglect: A TV9 Reality Check Reveals GBAs Failures

ಬೆಂಗಳೂರು, ಫೆಬ್ರವರಿ 22: ಜಿಬಿಎ ನಿರ್ಲಕ್ಷ್ಯದಿಂದ ಕಾಂಗ್ರೆಸ್‌ನ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗಳ ಅವ್ಯವಸ್ಥೆ ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಬಹಿರಂಗಗೊಂಡಿದೆ. ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್‌ಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಬೆಂಗಳೂರಿನ ಸಂಪಂಗಿರಾಮನಗರದ ಇಂದಿರಾ ಕ್ಯಾಂಟೀನ್‌ನಲ್ಲಿ ಮೆನು ಪ್ರಕಾರ ತಿಂಡಿ ನೀಡಲಾಗುತ್ತಿಲ್ಲ. ಶನಿವಾರ ವಾಂಗೀಬಾತ್ ಮತ್ತು ಇಡ್ಲಿ ನೀಡಬೇಕಿದ್ದರೂ, ಕೇವಲ ಇಡ್ಲಿ ಮತ್ತು ಸಾಂಬಾರ್ ಮಾತ್ರ ಒದಗಿಸಲಾಗುತ್ತಿದೆ. ಚಟ್ನಿ ನೀಡದೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬೆಲ್ಲಾ ಆರೋಪಗಳು ಕೇಳಿಬಂದಿದ್ದು, ಗ್ರಾಹಕರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಹಿಂದಿನ ಉತ್ತಮ ಆಹಾರ ಆಯ್ಕೆಗಳು ಈಗ ಲಭ್ಯವಿಲ್ಲ ಎಂದು ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಗ್ರಾಹಕರ ಸಂಖ್ಯೆ ಇಳಿಕೆಗೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *