Headlines

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ! – Kannada News | Chikkodis Naralagudda Villagers Walk 2km Daily Amidst Severe Water Crisis

ಬೆಳಗಾವಿ, ಏಪ್ರಿಲ್ 22: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನರಲಗುಡ್ಡ ಗ್ರಾಮದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೀವಜಲಕ್ಕಾಗಿ ಹಾಹಾಕಾರ ಸೃಷ್ಟಿಯಾಗಿದ್ದು, ನರಲಗುಡ್ಡ ಗ್ರಾಮವೂ ಇದಕ್ಕ ಹೊರತಾಗಿಲ್ಲ. ಇಲ್ಲಿನ ನಿವಾಸಿಗಳು ಪ್ರತಿದಿನ ಎರಡು ಕಿಲೋಮೀಟರ್ ದೂರ ನಡೆದುಕೊಂಡು ಹೋಗಿ ನೀರನ್ನು ತರುವ ಸಂಕಷ್ಟ ಎದುರಿಸುತ್ತಿದ್ದಾರೆ.

ಗ್ರಾಮದಲ್ಲಿನ ಬೋರ್‌ವೆಲ್ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣವೆಂದು ಸ್ಥಳೀಯರು ಹೇಳುತ್ತಾರೆ. ಬಿಸಿಲಿನಲ್ಲಿ ದಿನಕ್ಕೆ ಹಲವಾರು ಬಾರಿ ನಡೆದುಕೊಂಡು ಹೋಗಿ ನೀರು ತರುವುದು ಮಕ್ಕಳು ಮತ್ತು ವೃದ್ಧರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅಧಿಕಾರಿಗಳಿಗೆ ಈ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ನೀರಿನ ಕೊರತೆಯಿಂದಾಗಿ ಮನೆಗೆ ಅಡುಗೆ ಮಾಡುವುದು ಸೇರಿದಂತೆ ದೈನಂದಿನ ಚಟುವಟಿಕೆಗಳೂ ಸವಾಲಾಗಿ ಪರಿಣಮಿಸಿವೆ. ಕುಡಿಯುವ ನೀರಿಗಾಗಿ ಗ್ರಾಮಸ್ಥರು ಕಷ್ಟಪಡುತ್ತಿದ್ದು, ಅಧಿಕಾರಿಗಳು ತಕ್ಷಣ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *