‘ಚಾಲೆಂಜಿಂಗ್ ಸ್ಟಾರ್’ ದರ್ಶನ್ (Darshan) ಅವರು ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇಂದು (ಫೆಬ್ರವರಿ 16) ಅವರ ಜನ್ಮದಿನ. ಅವರನ್ನು ನೋಡಲು ಕುಟುಂಬದವರು ಮತ್ತು ಆಪ್ತರು ಬಂದಿದ್ದರು. ಪತ್ನಿ ವಿಜಯಲಕ್ಷ್ಮಿ ದರ್ಶನ್, ಮಗ ವಿನೀಶ್, ಸಹೋದರ ದಿನಕರ್ ತೂಗುದೀಪ್, ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ನಟ ಧನ್ವೀರ್ ಅವರು ಪರಪ್ಪನ ಅಗ್ರಹಾರ ಜೈಲಿಯಲ್ಲಿ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ವಾಪಸ್ ತೆರಳುವಾಗಿ ವಿಜಯಲಕ್ಷ್ಮಿ (Vijayalakshmi Darshan) ಅವರ ಮುಖದಲ್ಲಿ ನಗು ಕಾಣಿಸಿದೆ. ಅದನ್ನು ಕಂಡು ಅಭಿಮಾನಿಗಳಿಗೆ ಸಮಾಧಾನ ಆಗಿದೆ. ಆದಷ್ಟು ಬೇಗ ದರ್ಶನ್ ಹೊರಗೆ ಬರಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ. ಹುಟ್ಟುಹಬ್ಬದ ಸಲುವಾಗಿ ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
