Headlines

ಜೈಲಿನಿಂದ ಆಚೆ ಬರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಶಾಕ್ ​ – Kannada News | Dharwad Yogesh Gowda Murder Case: Karnataka High Court Rejects Congress MLA Vinay Kulkarni Bail Plea

ಬೆಂಗಳೂರು, (ಜನವರಿ 27): ಧಾರವಾಡ ಬಿಜೆಪಿ ಮುಖಂಡ ಯೋಗೀಶ್‌ ಗೌಡ  ಕೊಲೆ ಪ್ರಕರಣದಲ್ಲಿ((Yogesh Gowda Murder Case)) 15ನೇ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ (Vinay Kulkarni) ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಸಿದೆ. ಸುಪ್ರೀಂಕೋರ್ಟ್​ಗೇ ಅರ್ಜಿ ಸಲ್ಲಿಸುವುದು ಸೂಕ್ತವೆಂದು ಹೇಳಿ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ (Karnataka High Court) ಪೀಠ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿಯಾಗಿದೆ.

ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದ 15ನೇ ಆರೋಪಿಯಾಗಿದ್ದು, ಈ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿಗೆ 2021ರಲ್ಲೇ ಕೋರ್ಟ್​​ನಿಂದ ಜಾಮೀನು ಸಿಕ್ಕಿತ್ತು. ಆದ್ರೆ, ಇತ್ತೀಚೆಗೆ ಸಾಕ್ಷಗಳಿಗೆ ಬೆದರಿಕೆ ಹಾಕುವ ಮೂಲಕ ಜಾಮೀನು ಷರತ್ತುಗಳನ್ನು ವಿನಯ್ ಕುಲಕರ್ಣಿ ಉಲ್ಲಂಘಿಸಿದ್ದು, ಜಾಮೀನು ರದ್ದುಪಡಿಸುವಂತೆ ಸಿಬಿಐ ಸುಪ್ರೀಂಕೋರ್ಟ್​ ಮೊರೆ ಹೋಗಿತ್ತು. ಬಳಿಕ ಸುಪ್ರೀಂಕೋರ್ಟ್​ ಸಿಬಿಐನ ಸಾಕ್ಷಿಗಳನ್ನ ಪರಿಶೀಲಿಸಿ ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ ಹೋಗಬೇಕಾಯ್ತು. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಇದೀಗ ಹೈಕೋರ್ಟ್​ ಹೇಳಿದಂತೆ ವಿನಯ್ ಕುಲಕರ್ಣಿ ಜಾಮೀನುಗಾಗಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು.

Published On – 5:12 pm, Tue, 27 January 26

Source link

Leave a Reply

Your email address will not be published. Required fields are marked *