ಟಿ20 ವಿಶ್ವಕಪ್ ಗೆಲುವನ್ನು ಇಬ್ಬರಿಗೆ ಅರ್ಪಿಸಿದ ಗೌತಮ್ ಗಂಭೀರ್

ಟಿ20 ವಿಶ್ವಕಪ್ ಗೆಲುವನ್ನು ಇಬ್ಬರಿಗೆ ಅರ್ಪಿಸಿದ ಗೌತಮ್ ಗಂಭೀರ್

T20 World Cup 2026: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಟೀಮ್ ಇಂಡಿಯಾ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದು ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ. ಅದು ಸಹ ಬರೋಬ್ಬರಿ 96 ರನ್​ಗಳ ಅಂತರದಿಂದ.

ಅಹಮದಾಬಾದ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಬೃಹತ್ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 159 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿ ವಿಶ್ವಕಪ್ ತನ್ನದಾಗಿಸಿಕೊಂಡಿದೆ.

ಈ ವಿಶ್ವಕಪ್ ಗೆಲುವಿನ ಬಳಿಕ ಸುದ್ಧಿಗೋಷ್ಠಿಯಲ್ಲಿ ಕಾಣಿಸಿಕೊಂಡ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಈ ಐತಿಹಾಸಿಕ ಜಯವನ್ನು ಭಾರತೀಯ ಕ್ರಿಕೆಟ್‌ನ ದಿಗ್ಗಜರಾದ ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಅವರಿಗೆ ಅರ್ಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಗಂಭೀರ್, “ಭಾರತೀಯ ಕ್ರಿಕೆಟ್ ಅನ್ನು ಇಷ್ಟು ಉತ್ತಮ ಸ್ಥಿತಿಯಲ್ಲಿ ಇರಿಸಿದ್ದಕ್ಕಾಗಿ” ಮಾಜಿ ತರಬೇತುದಾರ ದ್ರಾವಿಡ್ ಅವರಿಗೆ ಈ ಟ್ರೋಪಿಯನ್ನು ನಾನು ಅರ್ಪಿಸುತ್ತೇನೆ.

ಹಾಗೆಯೇ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮುಖ್ಯಸ್ಥರಾಗಿ ಲಕ್ಷ್ಮಣ್ ಅವರು ತೆರೆಯ ಮರೆಯಲ್ಲಿ ಮಾಡುತ್ತಿರುವ “ಬೇಷರತ್ ಕೆಲಸ” ಮತ್ತು ಪ್ರತಿಭೆಗಳನ್ನು ಬೆಳೆಸುವ ಕಾರ್ಯವನ್ನು ಮೆಚ್ಚಲೇಬೇಕು. ಹೀಗಾಗಿ ಈ ಚಾಂಪಿಯನ್ ಪಟ್ಟ ಅವರಿಗೂ ಕೂಡ ಸಲ್ಲುತ್ತದೆ ಎಂದರು.

ಇವರಲ್ಲದೇ, ಟೀಕೆಗಳ ನಡುವೆಯೂ ಪ್ರಾಮಾಣಿಕವಾಗಿ ತಂಡವನ್ನು ಆಯ್ಕೆ ಮಾಡುವ ಮುಖ್ಯ ಆಯ್ಕೆಗಾರ ಅಗರ್ಕರ್ ಅವರಿಗೂ ಈ ಜಯ ಶ್ರೇಯಸ್ಸು ಸಿಗಬೇಕು.

ಹಾಗೆಯೇ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಸಮಯದಲ್ಲಿ ತಮಗೆ ವೈಯಕ್ತಿಕವಾಗಿ ಬೆಂಬಲ ನೀಡಿದ್ದಕ್ಕಾಗಿ ಐಸಿಸಿ ಅಧ್ಯಕ್ಷ ಜೈ ಶಾ ಅವರಿಗೂ ಈ ವೇಳೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ಇದನ್ನೂ ಓದಿ: ಫೈನಲ್ ಮ್ಯಾಚ್​ಗೂ ಮುನ್ನ ನನ್ನ ಸಹೋದರಿ ತೀರಿಕೊಂಡಿದ್ದಾಳೆ, ಇದು ಅವಳಿಗೆ..!

ಈ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಗೆಲುವನ್ನು ಗೌತಮ್ ಗಂಭೀರ್ ತೆರೆಮರೆಯಲ್ಲಿ ಕಾರ್ಯ ನಿರ್ವಹಿಸಿದವರಿಗೆ ಹಾಗೂ ಬಲಿಷ್ಠ ತಂಡ ಕಟ್ಟಲು ಆಡಿಪಾಯ ಹಾಕಿಕೊಟ್ಟ ಮಾಜಿ ಕೋಚ್ ರಾಹುಲ್ ದ್ರಾವಿಡ್ ಹಾಗೂ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ಪ್ರತಿಭೆಗಳನ್ನು ಬೆಳೆಸುವ ಕಾರ್ಯ ಮಾಡುತ್ತಿರುವ ವಿವಿಎಸ್ ಲಕ್ಷ್ಮಣ್ ಅವರಿಗೆ ಅರ್ಪಿಸಿದ್ದಾರೆ.

 

 

Source link

Leave a Reply

Your email address will not be published. Required fields are marked *