
ಇಂದು (ಜೂನ್ 03) ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಹಲವು ಕಾಂಗ್ರೆಸ್ ಮುಖಂಡರು, ಸ್ವಾಮೀಜಿಗಳು, ಕೆಲ ಸಾಹಿತಿಗಳು, ಜೊತೆಗೆ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಹ ಭಾಗಿ ಆಗಿದ್ದರು. ನಟಿ ರಮ್ಯಾ, ನಟ ಪ್ರೇಮ್, ಶಿವರಾಜ್ ಕುಮಾರ್ ಇನ್ನೂ ಹಲವರು ಪದಗ್ರಹಣಕ್ಕೆ ಸಾಕ್ಷಿಯಾದರು. ಕಾರ್ಯಕ್ರಮದ ಬಳಿಕ ಟಿವಿ9 ಜೊತೆಗೆ ಮಾತನಾಡಿದ ನಟ ಶಿವರಾಜ್ ಕುಮಾರ್, ಡಿಕೆ ಶಿವಕುಮಾರ್ ಅವರು ಸಿಎಂ ಆಗಿರುವುದು ಸಂತಸ, ಹೊಸ ಸಿಎಂ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಅವರಿಗೆ ಒಳಿತಾಗಲಿ ಎಂದರು. ಶಿವರಾಜ್ ಕುಮಾರ್ ಹೇಳಿದ್ದೇನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ