ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಬೆಂಗಳೂರು, ಮೇ 29: ರಾಜಗುರು ದ್ವಾರಕಾನಾಥ್ ಗುರೂಜಿ ಅವರು ಡಿಕೆ ಶಿವಕುಮಾರ್ ಅವರ ರಾಜಕೀಯ ಜೀವನದ ಬಗ್ಗೆ ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಗುರೂಜಿ ಪ್ರಕಾರ, ಡಿಕೆ ಶಿವಕುಮಾರ್ ಅವರ ಜಾತಕದಲ್ಲಿ ಬುಧಾದಿತ್ಯ ಯೋಗವಿದ್ದು, ಇದು ಅವರಿಗೆ ಉನ್ನತ ಸ್ಥಾನಗಳನ್ನು ತಂದುಕೊಡುತ್ತದೆ. ಬಂಗಾರಪ್ಪನವರ ಕಾಲದಿಂದಲೂ ಶಿವಕುಮಾರ್ ಅವರೊಂದಿಗೆ ಸಂಪರ್ಕದಲ್ಲಿರುವ ಗುರೂಜಿ, 40 ವರ್ಷಗಳ ಹಿಂದೆಯೇ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾಗಿ ತಿಳಿಸಿದ್ದಾರೆ. ಡಿಕೆ ಶಿವಕುಮಾರ್​ಗೆ ಅಧಿಕಾರ ಸ್ವಲ್ಪ ತಡವಾಗಿ ಸಿಕ್ಕಿದ್ದು, ಈ ಹಾದಿಯು ಸವಾಲುಗಳಿಂದ ಕೂಡಿದೆ ಎಂದು ಗುರೂಜಿ ಹೇಳಿದ್ದಾರೆ. ಪಕ್ಷವನ್ನು ನಿರ್ವಹಿಸುವುದು, ಬೆಂಗಳೂರು ಸಮಸ್ಯೆಗಳನ್ನು ನಿಭಾಯಿಸುವುದು, ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುವುದು ಮತ್ತು ಮಹಿಳಾ ಮೀಸಲಾತಿ ಮಸೂದೆಯಂತಹ ವಿಷಯಗಳನ್ನು ಎದುರಿಸಬೇಕಾಗಿದೆ. ಡಿಕೆ ಶಿವಕುಮಾರ್ ಚಂಡಿಹೋಮ ಮಾಡಿದ ನಂತರ ಮಂತ್ರಿಯಾದ ಘಟನೆಯನ್ನೂ ನೆನಪಿಸಿಕೊಂಡಿದ್ದಾರೆ. ತಮ್ಮ ಆರಾಧ್ಯ ದೇವರುಗಳಾದ ಸುಬ್ರಹ್ಮಣ್ಯ, ದತ್ತಾತ್ರೇಯ ಮತ್ತು ಶೃಂಗೇರಿ ಜಗದ್ಗುರು ಭಾರತೀ ಮಹಾಸ್ವಾಮಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *