ಡಿವೈಡರ್​​ಗೆ ಗುದ್ದಿದ ಸಾರಿಗೆ ಬಸ್​​: ಅಪಘಾತದ ತೀವ್ರತೆಗೆ ಕಿತ್ತು ಬಂದ ಎಂಜಿನ್​​, ಮುಂಬದಿ ಚಕ್ರಗಳು!

ಡಿವೈಡರ್​​ಗೆ ಗುದ್ದಿದ ಸಾರಿಗೆ ಬಸ್​​: ಅಪಘಾತದ ತೀವ್ರತೆಗೆ ಕಿತ್ತು ಬಂದ ಎಂಜಿನ್​​, ಮುಂಬದಿ ಚಕ್ರಗಳು!

ಬೆಂಗಳೂರು, ಏಪ್ರಿಲ್​​ 02: ವೇಗವಾಗಿ ಬಂದ ಆಂಧ್ರ ಸಾರಿಗೆ ಬಸ್ (Bus) ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ (Bengaluru) ಶಿವಾನಂದ ಸರ್ಕಲ್ ಬಳಿ ಇಂದು ಮುಂಜಾನೆ ನಡೆದಿದೆ. ಅಧೋನಿಯಿಂದ ಅನಂತಪುರ ಮೂಲಕ ಬೆಂಗಳೂರಿಗೆ ಬರ್ತಿದ್ದ ಬಸ್​​ ಡಿವೈಡರ್​ಗೆ ಡಿಕ್ಕಿಯಾದ ರಭಸಕ್ಕೆ ಮುಂಭಾಗದ ಚಕ್ರ ಮತ್ತು ಇಂಜಿನ್ ಕಿತ್ತು ಬಂದಿದೆ. ಬಸ್​​ನಲ್ಲಿರುವ ಪ್ರಯಾಣಿಕರೆಲ್ಲವೂ ಸುರಕ್ಷಿತವಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

 

 

Source link

Leave a Reply

Your email address will not be published. Required fields are marked *