ಮಂಡ್ಯ, ಏಪ್ರಿಲ್ 22: ಪ್ರೀತಿಸಿ ಮದುವೆಯಾದ ಆಟೋ ಚಾಲಕ ಸಾಗರ್ ಎಂಬವರ ಪತ್ನಿ ಗಂಡನ ಸ್ನೇಹಿತನ ಜತೆ ಓಡಿಹೋಗಿ ಮದುವೆಯಾದ ವಿಲಕ್ಷಣ ಘಟನೆ ಮಂಡ್ಯದ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಆಟೋ ಚಾಲಕ ಸಾಗರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ‘ಪ್ರೀತಿಸಿ ಮದುವೆಯಾದ ರಕ್ಷಿತಾ, ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿದ್ದಾಳೆ’ ಎಂದು ಸಾಗರ್ ಆರೋಪಿಸಿದ್ದಾರೆ. ರಕ್ಷಿತಾ 22 ಗ್ರಾಂ ಚಿನ್ನ ಮತ್ತು 1 ಲಕ್ಷ ರೂಪಾಯಿ ನಗದು ತೆಗೆದುಕೊಂಡು ಹೋಗಿದ್ದಾರೆಂದು ಸಾಗರ್ ಆರೋಪಿಸಿದ್ದಾರೆ. ಪತ್ನಿಯ ಬಗ್ಗೆ ಸಾಗರ್ ಮಾಡಿರುವ ಆರೋಪಗಳು ಈ ವಿಡಿಯೋದಲ್ಲಿದೆ.
ವಿವರಗಳಿಗೆ ಓದಿ: ಮದುವೆಯಾದ ಎರಡೇ ವರ್ಷಕ್ಕೆ ಪತಿಯ ಸ್ನೇಹಿತನ ಜತೆ ಮಹಿಳೆ ಪರಾರಿ! ದೇಗುಲದಲ್ಲಿ ಮದುವೆಯಾಗಿ ಫೋಟೋ ಸ್ಟೇಟಸ್ ಹಾಕಿದ ಕಿಲಾಡಿ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
