ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಿಕ್ಕಟ್ಟು; ಎಡಪಕ್ಷಗಳ ಬೆಂಬಲ ಕೋರಿದ ಟಿವಿಕೆ – Kannada News | TVK chief Vijay reaches out to Left parties and seeks support in government formation

ಚೆನ್ನೈ, ಮೇ 7: ತಮಿಳುನಾಡಿನಲ್ಲಿ ಅತ್ಯಧಿಕ ಸ್ಥಾನಗಳನ್ನು ಪಡೆದಿದ್ದರೂ ಟಿವಿಕೆ ಇನ್ನೂ ಬಹುಮತ ಪಡೆದಿಲ್ಲ. ಹೀಗಾಗಿ, ತಮಿಳುನಾಡಿನಲ್ಲಿ (Tamil Nadu Politics) ಇನ್ನೂ ಸರ್ಕಾರ ರಚನೆಯ ಬಿಕ್ಕಟ್ಟು ಬಗೆಹರಿದಿಲ್ಲ. ಈಗಾಗಲೇ ಕಾಂಗ್ರೆಸ್ ಜೊತೆ ಕೈ ಜೋಡಿಸಿರುವ ಟಿವಿಕೆ ಉಳಿದ 5 ಸ್ಥಾನಗಳಿಗಾಗಿ ಎಡಪಕ್ಷಗಳ ಬೆಂಬಲ ಕೋರಿದೆ. ಟಿವಿಕೆ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ಇಂದು ಸಿಪಿಐ ರಾಜ್ಯ ಕಾರ್ಯದರ್ಶಿ ಎಂ ವೀರಪಾಂಡ್ಯನ್ ಮತ್ತು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ ಷಣ್ಮುಗಂ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವಲ್ಲಿ ಅವರ ಬೆಂಬಲ ಕೋರಿದ್ದಾರೆ. ಟಿವಿಕೆ ಪತ್ರ ಮತ್ತು ಇ-ಮೇಲ್ ಮೂಲಕವೂ ಎಡಪಕ್ಷಗಳ ಬೆಂಬಲ ಕೋರಿದೆ.

“ಟಿವಿಕೆ ಪಕ್ಷವು ವಿದುತಲೈ ಚಿರುತೈಗಲ್ ಕಚ್ಚಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸೇರಿದಂತೆ ಪಕ್ಷಗಳನ್ನು ಇಮೇಲ್‌ಗಳು ಮತ್ತು ನೇರ ಸಂವಹನದ ಮೂಲಕ ಸಂಪರ್ಕಿಸಿದೆ” ಎಂದು ಟಿವಿಕೆ ಜಂಟಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ಆರ್. ನಿರ್ಮಲ್ ಕುಮಾರ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಲ್ಲಿ ಸರ್ಕಾರ ರಚನೆಗೆ ಟಿವಿಕೆಗೆ ಸಂಖ್ಯಾಬಲದ ಹೋರಾಟ, ಅತ್ತ ಬಿಹಾರ ರಾಜಕಾರಣದಲ್ಲಿ ಹೊಸ ಚದುರಂಗದಾಟ!

“ತಮ್ಮ ನಿರ್ಧಾರಗಳನ್ನು ಪ್ರಕಟಿಸುವ ಮೊದಲು ಪಕ್ಷಗಳು ತಮ್ಮ ಕಾರ್ಯಕಾರಿಣಿ ಮತ್ತು ಸಾಮಾನ್ಯ ಮಂಡಳಿ ಸಭೆಗಳಲ್ಲಿ ಈ ವಿಷಯವನ್ನು ಚರ್ಚಿಸುತ್ತವೆ. ಟಿವಿಕೆ ನಾಯಕರು ಬೆಂಬಲ ಪಡೆಯಲು ಮತ್ತೆ ಅವರನ್ನು ವೈಯಕ್ತಿಕವಾಗಿ ಭೇಟಿಯಾಗುತ್ತಾರೆ. ತಮಿಳುನಾಡಿನಾದ್ಯಂತ ಜನರು ನಮ್ಮ ನಾಯಕ ವಿಜಯ್ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿದ್ದಾರೆ. ಅದಕ್ಕಾಗಿಯೇ ಅವರು ನಮಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ರಾಜ್ಯಪಾಲರು ಇದನ್ನು ಪರಿಗಣಿಸಿ ಟಿವಿಕೆಯನ್ನು ಸರ್ಕಾರ ರಚಿಸಲು ಆಹ್ವಾನಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ. ರಾಜ್ಯಪಾಲರು ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತಾರೆ ಎಂದು ನಾವು ನಂಬುತ್ತೇವೆ. ಇಲ್ಲದಿದ್ದರೆ, ಮುಂದುವರಿಯಲು ನಾವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ” ಎಂದು ನಿರ್ಮಲ್ ಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *