ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ ನಾಯಕ ದಿನಕರನ್ – Kannada News | Big Blow To Vijay AMMK Leader Dhinakaran Supports AIADMK leader Palaniswami To Form Government In Tamil Nadu

ಚೆನ್ನೈ, ಮೇ 8: ತಮಿಳುನಾಡು ರಾಜಕೀಯದಲ್ಲಿ ಕುತೂಹಲ ಇನ್ನೂ ಮುಗಿದಿಲ್ಲ. ನಟ-ರಾಜಕಾರಣಿ ವಿಜಯ್ ದಳಪತಿ (Vijay) ಒಂದೆಡೆ ನಾಳೆ ಪ್ರಮಾಣವಚನ ಸ್ವೀಕರಿಸಲು ಮುಂದಾಗಿದ್ದಾರೆ. ಇನ್ನೊಂದೆಡೆ ಅವರಿಗೆ ಸರಿಯಾಗಿ 118 ಸ್ಥಾನಗಳ ಬೆಂಬಲವಿದ್ದು, ಯಾವುದಾದರೂ ಒಂದು ಪಕ್ಷ ಹಿಂದೆ ಸರಿದರೂ ಸರ್ಕಾರ ರಚನೆ ಅತಂತ್ರವಾಗುವ ಸ್ಥಿತಿಯಿದೆ. ಇನ್ನೊಂದೆಡೆ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ)ನ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್) ಅವರಿಗೆ ಸರ್ಕಾರ ರಚಿಸಲು ಬೆಂಬಲ ನೀಡಿದ್ದಾರೆ. ಈ ಹಿಂದೆ, ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವ ಪ್ರಯತ್ನಕ್ಕೆ ಎಎಂಎಂಕೆ ಬೆಂಬಲ ನೀಡಬಹುದು ಎಂಬ ವರದಿಗಳಿದ್ದವು.

ಈ ಬಗ್ಗೆ ಎಎಂಎಂಕೆ ಪ್ರಧಾನ ಕಾರ್ಯದರ್ಶಿ ಟಿ.ಟಿ.ವಿ. ದಿನಕರನ್ ಪ್ರತಿಕ್ರಿಯೆ ನೀಡಿದ್ದು, “ನಾನು ಎಐಎಡಿಎಂಕೆಯನ್ನು ಬೆಂಬಲಿಸುತ್ತಿದ್ದೇನೆ. ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಬೆಂಬಲಿಸಿ ಸರ್ಕಾರ ರಚಿಸಲು ನಾನು ಪತ್ರವನ್ನು ಸಲ್ಲಿಸಿದ್ದೇನೆ. ನಮ್ಮ ಶಾಸಕ ಕಾಮರಾಜ್ ಕೂಡ ಅದಕ್ಕೆ ಸಹಿ ಹಾಕಿ ನನ್ನ ಕಾರ್ಯದರ್ಶಿ ಮೂಲಕ ಕಳುಹಿಸಿದ್ದಾರೆ. ಟಿವಿಕೆಗೆ ನಮ್ಮ ಪಕ್ಷ ಬೆಂಬಲ ನೀಡಲಿದೆ ಎಂಬ ವರದಿ ನೋಡಿದಾಗ ನಾನು ಆಘಾತಕ್ಕೊಳಗಾಗಿದ್ದೆ. ನಮ್ಮ ಪಕ್ಷವು ವಿಜಯ್‌ಗೆ ಬೆಂಬಲ ನೀಡಿದೆ ಎಂದು ಟಿವಿಯಲ್ಲಿ ನೋಡಿದಾಗ, ನಾನು ಆಘಾತಕ್ಕೊಳಗಾಗಿದ್ದೆ. ಹಾಗಾಗಿ, ನಾನು ರಾಜ್ಯಪಾಲರೊಂದಿಗೆ ಅಪಾಯಿಂಟ್‌ಮೆಂಟ್ ಪಡೆದುಕೊಂಡು ಪತ್ರ ಸಲ್ಲಿಸಿದ್ದೇನೆ. ಅದನ್ನು ತನಿಖೆ ಮಾಡುವಂತೆ ಕೇಳಿಕೊಂಡು ಪತ್ರವನ್ನು ಅವರಿಗೆ ಸಲ್ಲಿಸಿದ್ದೇನೆ.” ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *