Headlines

ತಮಿಳುನಾಡು ಚುನಾವಣೆಯಲ್ಲಿ ಪಿಎಂ ಮೋದಿಯ ಧುರಂಧರ್ ದಳಪತಿ ವಿಜಯ್? ಶುರುವಾಗಿದೆ ಚರ್ಚೆ – Kannada News | Tamil Nadu Election Results: TVK Leads! Is PM Modi Behind Actor Vijay’s Rise

ತಮಿಳುನಾಡು ಚುನಾವಣಾ ಫಲಿತಾಂಶ ಹೊರ ಬಂದಿದೆ. ಟಿವಿಕೆ ಮುನ್ನಡೆ ಸಾಧಿಸುವ ಮೂಲಕ ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷವನ್ನು ಹಿಂದಿಕ್ಕಿದೆ. ಹೀಗಿರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಒಂದು ದೊಡ್ಡ ಚರ್ಚೆ ಶುರುವಾಗಿದೆ. ‘ತಮಿಳುನಾಡಿನಲ್ಲಿ ದಳಪತಿ ವಿಜಯ್ ಕಣಕ್ಕಿಳಿಸಿದ್ದು ಪ್ರಧಾನಿ ನರೇಂದ್ರ ಮೋದಿಯೇ? ವಿಜಯ್ ಅವರು ಮೋದಿಯ ಧುರಂಧರ್’ ಎಂದೆಲ್ಲ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

‘ಧುರಂಧರ್’ ಸಿನಿಮಾದಲ್ಲಿ ಜಸ್ಕಿರತ್ ಸಿಂಗ್ ಅವರು ಹಮ್ಜಾ ಅಲಿ ಮಜಾರಿ ಎಂಬ ಹೆಸರಿನಲ್ಲಿ ಪಾಕಿಸ್ತಾನಕ್ಕೆ ತೆರಳಿ ಅಲ್ಲಿನ ಉಗ್ರ ಜಾಲವನ್ನು ನಾಶ ಮಾಡುತ್ತಾರೆ. ಅವರನ್ನು ಭಾರತದ ‘ಧುರಂಧರ್’ ಎಂದು ಕರೆಯಲಾಗುತ್ತದೆ. ಅದೇ ರೀತಿ, ತಮಿಳುನಾಡಿನ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ಭೇದಿಸಲು ವಿಜಯ್ ಅವರನ್ನು ಕಣಕ್ಕಿಳಿಸಿದ್ದು ಮೋದಿಯೇ ಎಂಬ ಮಾತುಗಳು ಕೇಳಿಬರುತ್ತಿವೆ.

ಅದು 2014ರ ಸಮಯ. ಆ ವರ್ಷ ಏಪ್ರಿಲ್ 16ರಂದು ಕೊಯಮತ್ತೂರಿನಲ್ಲಿ ನಟ ವಿಜಯ್ ಅವರು ಅಂದಿನ ಗುಜರಾತ್ ಮುಖ್ಯಮಂತ್ರಿ ಮತ್ತು ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಈ ಫೋಟೋವನ್ನು ಮೋದಿ ಹಂಚಿಕೊಂಡಿದ್ದರು. ಈ ಭೇಟಿ ರಾಜಕೀಯೇತರ ಎಂದು ವಿವರಿಸಲಾಗಿತ್ತು. ಇಬ್ಬರೂ ಪರಸ್ಪರ ಲೋಕಾರೂಢ ವಿಷಯಗಳ ಬಗ್ಗೆ ಮಾತನಾಡಿದ್ದರು ಎನ್ನಲಾಗಿದೆ. ಆ ಸಮಯದಲ್ಲಿ ತಮಿಳುನಾಡಿನಲ್ಲಿ ರಜನಿಕಾಂತ್ ಅವರನ್ನೂ ಭೇಟಿ ಮಾಡಿದ್ದ ಮೋದಿ ಅವರು, ರಾಜ್ಯದ ಪ್ರಭಾವಿ ತಾರೆಗಳ ಮೂಲಕ ಮತದಾರರನ್ನು ತಲುಪುವ ಪ್ರಯತ್ನ ಮಾಡಿದ್ದರು. ಆ ಸಮಯದಲ್ಲಿ ಈ ಭೇಟಿ ದೊಡ್ಡ ಸಂಚಲನ ಮೂಡಿಸಿತ್ತಾದರೂ, ವಿಜಯ್ ಅವರು ಆಗ ಯಾವುದೇ ರಾಜಕೀಯ ಪಕ್ಷ ಸೇರದೆ ದೂರ ಉಳಿದಿದ್ದರು. ಅಂದು ಮೋದಿ ಹಂಚಿಕೊಂಡಿದ್ದ ಫೋಟೋವನ್ನು ರೀಟ್ವೀಟ್ ಮಾಡಲಾಗುತ್ತಿದೆ.

ಇದನ್ನೂ ಓದಿ: ‘ಧುರಂಧರ್’ ನಿರ್ದೇಶಕನ ಮೇಲೆ ಕತೆ ಕದ್ದ ಆರೋಪ: ಕರ್ನಾಟಕ ಹೈಕೋರ್ಟ್ ಹೇಳಿದ್ದೇನು?

‘ಸಾಮಾನ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಭೇಟಿ ಮಾಡಲು ಬರುವ ಅತಿಥಿಗಳನ್ನು ಎದುರುಬದುರಿನ ಆಸನಗಳಲ್ಲಿ ಕೂರಿಸುತ್ತಾರೆ. ಆದರೆ 2014ರಲ್ಲಿ ನಟ ವಿಜಯ್ ಅವರನ್ನು ಭೇಟಿ ಮಾಡಿದಾಗ, ಅವರನ್ನು ತಮ್ಮ ಪಕ್ಕದಲ್ಲೇ ಕೂರಿಸಿಕೊಂಡಿದ್ದರು. ಆಗ ಅರ್ಥವಾಗುತ್ತಿರಲಿಲ್ಲ, ಈಗ ಅರ್ಥವಾಗುತ್ತಿದೆ’ ಎಂದು ಕೆಲವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *