Headlines

ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆ ಶಿವಕುಮಾರ್, ಕಾರಣವೇನು? – Kannada News | Cauvery water Dispute: Karnataka CM DK Shivakumar asks his Tamil Nadu counterpart Vijay to defer his visit to Bengaluru

ಬೆಂಗಳೂರು, (ಜುಲೈ 31): ಮಳೆ ಕೊರತೆ ಮಧ್ಯೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ (Tamil Nadu) ನೀರು ಬಿಡುವಂತೆ ಕರ್ನಾಟಕಕ್ಕೆ (Karnataka) ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಕನ್ನಡಿಗರು ಸಿಡಿದೆದ್ದಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೇ  ಆಗಸ್ಟ್ 13ರಂದು ಕರ್ನಾಟಕ ಬಂದ್​​​ಗೆ (Karnataka Bandh) ಕರೆ ನೀಡಲಾಗಿದೆ. ಇನ್ನೊಂದೆಡೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಯಾವುದೇ ಕಾರಣಕ್ಕೂ ಬಂದ್ ಮಾಡಬೇಡಿ. ನಿಮ್ಮ ಪರವಾಗಿ ಇರುತ್ತೇನೆಂದು ಭರವಸೆ ನೀಡಿದ್ದಾರೆ. ಇನ್ನು ಇದೇ ವೇಳೆ ತಮಿಳುನಾಡು ಸಿಎಂ ವಿಜಯ್ ಅವರನ್ನು ಆಗಸ್ಟ್ 3ರಂದು ಕರ್ನಾಟಕಕ್ಕೆ ಬರುವುದು ಬೇಡ ಎಂದು ಹೇಳಿದ್ದಾರೆ. ಯಾಕಂದ್ರೆ, ಕಾವೇರಿ ನೀರಿನ ಸಂಬಂಧ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಮಾತುಕತೆ ಬರುವುದು ಬೇಡ ಎಂದು ಸಲಹೆ ನೀಡಿದ್ದಾರೆ.

ಕಾವೇರಿ ನದಿ ನೀರು ಹಾಗೂ ಮೇಕೆದಾಟು ಸಂಬಂಧ ಮಾತುಕತೆಗೆ ಬರುವಂತೆ ತಮಿಳುನಾಡು ಸಿಎಂ ವಿಜಯ್ ಅವರಿಗೆ ಖುದ್ದು ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದರು. ಹೀಗಾಗಿ ಆಗಸ್ಟ್ 3ರಂದು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಮಾತುಕತೆಗೆ ವಿಧಾನಸೌಧದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದ್ರೆ, ಈ ಪರಿಸ್ಥಿತಿಯಲ್ಲಿ ವಿಜಯ್ ಅವರನ್ನು ಬರುವುದು ಬೇಡ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *