ತಾಯಿ ಚೆನ್ನಮ್ಮ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ – Kannada News | Thousands Gather in Hassan for Chennammas Final Rites; Leaders Pay Respects

ಹಾಸನ, ಜು.20: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ, ಹೆಚ್.ಡಿ. ಚೆನ್ನಮ್ಮನವರ ಅಂತಿಮ ಸಂಸ್ಕಾರ ಹಾಸನದಲ್ಲಿ ಅಶ್ರುಪೂರಿತ ವಾತಾವರಣದಲ್ಲಿ ನೆರವೇರಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಜನಸಾಗರದ ಮಧ್ಯೆ, ಪುತ್ರ ಹೆಚ್.ಡಿ. ಕುಮಾರಸ್ವಾಮಿ ಅವರು ತಾಯಿಯ ಮುಖವನ್ನು ನೋಡಿ ಭಾವುಕರಾಗಿ ಮುತ್ತಿಟ್ಟು ಅಂತಿಮ ವಿದಾಯ ಹೇಳಿದರು. ಈ ದೃಶ್ಯ ನೆರೆದಿದ್ದವರ ಕಣ್ಣಂಚಲ್ಲಿ ನೀರು ತರಿಸಿತು. ಚೆನ್ನಮ್ಮನವರ ಅಂತಿಮ ದರ್ಶನಕ್ಕಾಗಿ ಹಾಸನದ ಅಂತ್ಯಕ್ರಿಯೆ ಸ್ಥಳಕ್ಕೆ ಸಾರ್ವಜನಿಕರು ದಂಡು ದಂಡಾಗಿ ಆಗಮಿಸಿದ್ದರು. ರಾಷ್ಟ್ರೀಯ ಹೆದ್ದಾರಿ 373ರ ಮಾರ್ಗದಲ್ಲಿ ಸಾರ್ವಜನಿಕರು ಸುಗಮವಾಗಿ ಬರಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿತ್ತು ಮತ್ತು ದರ್ಶನಕ್ಕಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಅಂತ್ಯಕ್ರಿಯೆ ಸ್ಥಳದಲ್ಲೇ ಸಾರ್ವಜನಿಕ ದರ್ಶನಕ್ಕೂ ಅವಕಾಶ ಕಲ್ಪಿಸಲಾಗಿತ್ತು.

ಅಂತಿಮ ಸಂಸ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ರಾಜಕೀಯ ನಾಯಕರು ಭಾಗವಹಿಸಿದ್ದರು. ಇದೇ ವೇಳೆ, ನಿರ್ಮಲಾನಂದನಾಥ ಶ್ರೀಗಳು ಮತ್ತು ಶಂಭುನಾಥ ಸ್ವಾಮೀಜಿ ಸೇರಿದಂತೆ ಧಾರ್ಮಿಕ ಮುಖಂಡರು ಸಹ ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಗಣ್ಯರಿಗಾಗಿ ಮೀಸಲಾದ ಆಸನಗಳಲ್ಲಿ ಕುಳಿತಿದ್ದ ಹಲವು ನಾಯಕರು, ಚೆನ್ನಮ್ಮನವರ ಅಗಲಿಕೆಗೆ ಸಂತಾಪ ಸೂಚಿಸಿದರು. ಈ ಸಂದರ್ಭದಲ್ಲಿ ಜನರ ದಟ್ಟಣೆಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದರು, ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡುತ್ತಿದ್ದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *