ತಾಯಿ ನಮ್ಮನ್ನಗಲಿದ್ದಾರೆ ಎಂಬುವುದನ್ನ ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: ಹೆಚ್​ಡಿ ಕುಮಾರಸ್ವಾಮಿ ಭಾವುಕ ಮಾತು – Kannada News | I Cannot imagin the Thought That Mother Has Left Us: H.D. Kumaraswamy

ಹಾಸನ, ಜುಲೈ 29: ಮಾಜಿ ಪ್ರದಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಕಾರ್ಯ ನಾಳೆ ನಡೆಯಲಿದ್ದು, ಉತ್ತರ ಕ್ರಿಯಾದಿ ಕಾರ್ಯಕ್ಕೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ‘ತಾಯಿ ನಮ್ಮನ್ನಗಲಿದ್ದಾರೆ ಎಂದು ನೆನಸಿಕೊಳ್ಳಲಿಕ್ಕೂ ಸಹ ಸಾಧ್ಯವಿಲ್ಲ, ಅವರು ನಮ್ಮೊಂದಿಗಿ ಓಡಾಡಿಕೊಂಡಿದ್ದಾರೆ ಎಂಬ ಭಾವನೆ ಇದೆ. ತಾಯಿ ಭೂಮಿ ತಾಯಿಯ ಮಡಿಲನ್ನು ಸೇರಿದ್ದರೂ, ಅವರು ತಮ್ಮ ಹೃದಯದಲ್ಲಿ ಸದಾ ಇರುತ್ತಾರೆ. ನನ್ನ ಬಳಿಗೆ ಬರುವ ಸಂಕಷ್ಟದಲ್ಲಿರುವವರಲ್ಲಿ ತಾಯಿಯನ್ನು ಕಾಣುತ್ತೇನೆ ಮತ್ತು ಅವರ ಕಷ್ಟಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆ’ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *