Headlines

ತಿರುಪತಿ ಲಡ್ಡು ತಯಾರಿಸಲು ಬಳಸಿದ್ರಾ ಬಾತ್​ರೂಮ್ ಸ್ವಚ್ಛಗೊಳಿಸುವ ರಾಸಾಯನಿಕ? ಹಿಂದಿನ ಸರ್ಕಾರದ ವಿರುದ್ಧ ನಾಯ್ಡು ಸ್ಫೋಟಕ ಆರೋಪ – Kannada News | Tirupati Laddu Controversy: CM Chandrababu Naidu Alleges Adulterated Ghee With Cleaning Chemicals Under Jagan Govt

ತಿರುಪತಿ ಲಡ್ಡು (ಸಾಂದರ್ಭಿಕ ಚಿತ್ರ)Image Credit source: TV9 Network

ಹೈದರಾಬಾದ್, ಫೆಬ್ರವರಿ 7: ಜಗತ್​ಪ್ರಸಿದ್ಧ ತಿರುಪತಿ ತಿಮ್ಮಪ್ಪನ ಲಡ್ಡು  (Tirupati Laddu) ಲಡಾಯಿ ಮುಂದುವರಿದಿದೆ. ಸ್ನಾನಗೃಹ, ಶೌಚಗೃಹ ಸ್ವಚ್ಛಗೊಳಿಸಲು ಬಳಸುವ ರಾಸಾನಿಕ ಕಲಬೆರಕೆ ಮಾಡಿರುವ ತುಪ್ಪದಿಂದ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಗಂಭೀರ ಆರೋಪ ಮಾಡಿದ್ದಾರೆ. ಯಮ್ಮಿಗನೂರು ವಿಧಾನಸಭಾ ಕ್ಷೇತ್ರದಲ್ಲಿ ಪಾಸ್​ಬುಕ್ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲಡ್ಡುಗಳಲ್ಲಿ ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್‌ಗಳಿಂದ ತಯಾರಿಸಿದ ತುಪ್ಪ ಬಳಸಿದ್ದಾರೆ. ಆ ಮೂಲಕ ಪವಿತ್ರವಾದ ತಿರುಮಲ ದೇವಸ್ಥಾನದ ಪ್ರಸಾದದ ಪಾವಿತ್ರ್ಯತೆ ಮತ್ತು ಶ್ರೀ ವೆಂಕಟೇಶ್ವರ ಸ್ವಾಮಿಯ ಘನತೆಯನ್ನು ಹಾಳುಮಾಡಿದ್ದಾರೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಸುಮಾರು 5 ವರ್ಷಗಳ ಕಾಲ ಇದೇ ರೀತಿ ಮೋಸ ಮಾಡಿದ್ದಾರೆ. ತುಪ್ಪದ ಕಲಬೆರಕೆಯು ದೇವರ ವಿರುದ್ಧ ಮಾಡಿದ ಮಹಾಪಾಪ. ಈ ಪ್ರಕರಣದಲ್ಲಿ ಶಾಮೀಲಾದ ಯಾರನ್ನೂ ನಾನು ಸುಮ್ಮನೆ ಬಿಡಲ್ಲ ಎಂದು ನಾಯ್ಡು ಗುಡುಗಿದ್ದಾರೆ.

ಲಡ್ಡು ತಯಾರಿಕೆಯಲ್ಲಿ ರಾಸಾಯನಿಕ ಬೆರೆಸಿದ ತುಪ್ಪವನ್ನು ಬಳಸಲಾಗಿದೆ ಎಂದು ಆರೋಪಿಸಿದ್ದಾರೆ. ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಸುಮಾರು ಐದು ವರ್ಷಗಳ ಕಾಲ ಈ ರೀತಿ ಮಾಡಲಾಗಿತ್ತು. ಅದೇ ಅವಧಿಯಲ್ಲಿ ಶ್ರೀಶೈಲಂ ದೇವಸ್ಥಾನಕ್ಕೂ ಇದೇ ರೀತಿಯ ಕಲಬೆರಕೆ ತುಪ್ಪವನ್ನು ಸರಬರಾಜು ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ಲಡ್ಡು ತಯಾರಿಸಲು ಬಳಸುತ್ತಿದ್ದ ತುಪ್ಪದಲ್ಲಿ ವಿವಿಧ ರೀತಿಯ ರಾಸಾಯನಿಕಗಳನ್ನು ಬಳಸಲಾಗುತ್ತಿತ್ತು. ತರಕಾರಿ ಆಧಾರಿತ ಉತ್ಪನ್ನಗಳು ಹೆಚ್ಚು ದುಬಾರಿಯಾಗಿದ್ದು, ಪ್ರಾಣಿಗಳ ಕೊಬ್ಬು ಅಗ್ಗವಾಗಿರುವುದರಿಂದ ಹಾಗೆ ಮಾಡಿರಬಹುದು ಎಂದು ಅವರು ನಾಯ್ಡು ಹೇಳಿದ್ದಾರೆ. ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ ವರದಿಯನ್ನು ಅವರು ಉಲ್ಲೇಖಿಸಿದ ಅವರು, ಪ್ರಾಣಿಗಳ ಕೊಬ್ಬಿನ ಅಂಶ ಇದ್ದುದು ವರದಿಯಿಂದ ತಿಳಿದುಬಂದಿದೆ ಎಂದಿದ್ದಾರೆ.

ತಿರುಪತಿ ಲಡ್ಡು ಬಗ್ಗೆ ಅಪಪ್ರಚಾರ: ಜಗನ್ ತಿರುಗೇಟು

ಚಂದ್ರಬಾಬು ನಾಯ್ಡು ಆರೋಪಗಳಿಗೆ ಪ್ರತಿಕ್ರಿಯಿಸಿರುವ ಜಗನ್ ಮೋಹನ್ ರೆಡ್ಡಿ, ಈಗ ಸಮ್ಮಿಶ್ರ ಸರ್ಕಾರದ ಜಂಗಲ್ ರಾಜ್ ನಡೆಯುತ್ತಿದೆ. ತಿರುಮಲ ಲಡ್ಡು ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇದೆಲ್ಲವನ್ನು ಬಯಲಿಗೆಳೆಯುತ್ತೇವೆ ಎಂದು ಶಪಥಗೈದಿದ್ದಾರೆ.

ಇದನ್ನೂ ಓದಿ: ತಿರುಪತಿ ಲಡ್ಡುವಿನ ಕಲಬೆರಕೆ ಆಗಿದೆ ಎಂಬುದಕ್ಕೆ ಸಾಕ್ಷಿ ನೀಡಿದ ಎಸ್‌ಐಟಿ! ನಾಲ್ವರ ಬಂಧನ

ಇನ್ನು ಜಗನ್ ವಿರುದ್ಧದ ಆರೋಪಕ್ಕೆ ನಟಿ ಮತ್ತು ಮಾಜಿ ಸಚಿವೆ ರೋಜಾ ಕೆರಳಿದ್ದಾರೆ. ಜಗನ್ ಅಣ್ಣ ಬಾಹುಬಲಿಯಂತೆ. ಎಷ್ಟೇ ಪಿತೂರಿ ಮಾಡಿದರೂ ಅವರಿಗೆ ಏನೂ ಆಗಲಾರದು. ಅವರನ್ನು ಗುರಿಯಾಗಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಒಟ್ಟಿನಲ್ಲಿ ತಿರುಪತಿ ಲಡ್ಡು ವಿಚಾರ ಆಂಧ್ರದಲ್ಲಿ ತೀವ್ರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *