ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ರೈತರಿಗೆ ಗುಡ್​ನ್ಯೂಸ್: ಸಚಿವರಿಂದ ಮಹತ್ವದ ಭರವಸೆ

ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ರೈತರಿಗೆ ಗುಡ್​ನ್ಯೂಸ್: ಸಚಿವರಿಂದ ಮಹತ್ವದ ಭರವಸೆ

ಕೊಪ್ಪಳ, ಮಾರ್ಚ್​ 23: ತುಂಗಭದ್ರಾ ಎಡದಂಡೆ ಕಾಲುವೆ (tungabhadra left bank canal) ಒಡೆದ ಘಟನೆಗೆ ಸಂಬಂಧಿಸಿದಂತೆ ಬೆಳೆ ಹಾಗೂ ಜಮೀನು ಹಾಳು ಮಾಡಿಕೊಂಡ ರೈತರಿಗೆ, ಸರ್ಕಾರದಿಂದ ಪರಿಹಾರದ ಭರವಸೆ ನೀಡುವ ಮೂಲಕ ದುರಸ್ಥಿ ಕಾರ್ಯ ಶುರುವಾಗಿದೆ. ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ದುರಸ್ಥಿ ಕಾರ್ಯ ಜೋರಾಗಿದ್ದು, ಎರಡು ದಿನದಲ್ಲಿ ನೀರು ಪೊರೈಕೆ ಮಾಡುವ ಭರವಸೆ ನೀಡಲಾಗಿದೆ.

ಕಳೆದ ವಾರ, ಕೊಪ್ಪಳ ತಾಲೂಕಿನ ಬಸ್ಸಾಪುರ ಗ್ರಾಮದ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಅಪಾರ ಪ್ರಮಾಣ ನಷ್ಟ ಉಂಟಾಗಿತ್ತು. ಜೊತೆಗೆ ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಪೂರೈಕೆ ಸ್ಥಗಿತವಾಗಿತ್ತು. ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಮಾಡಿದ್ದ ನಿರ್ಲಕ್ಷದಿಂದ ಇಡೀ ರಾಯಚೂರು ಜಿಲ್ಲೆಗೆ ಕುಡಿಯುವ ನೀರಿಗೆ ಕಂಟಕ ಬಂದಿದೆ.

ಇಂದಿನಿಂದ ಕಾಮಗಾರಿ ಕೆಲಸ ಆರಂಭ 

ಕೊಪ್ಪಳ ತಾಲೂಕಿನ ಬಸ್ಸಾಪುರ ಗ್ರಾಮದ ರೈತರು ಬೆಳೆದ ಭತ್ತದ ಬೆಳೆ ನಾಶವಾಗಿದೆ. ಜಮೀನಿನ ತುಂಬು ಮರಳು, ಕಲ್ಲು ಸೇರಿಕೊಂಡು ಭತ್ತದ ಗದ್ದೆಗಳೆಲ್ಲಾ ನಾಶವಾಗಿ ಹೋಗಿದೆ. ಇದರಿಂದ ರೊಚ್ಚಿಗೆದ್ದ ರೈತರು, ಕಾಲುವೆ ದುರಸ್ಥಿಗೆ ಬಂದಾಗ ವಾಹನಗಳನ್ನ ತಡೆದು ಕೆಲಸಕ್ಕೆ ಅಡ್ಡಿ ಪಡಿಸಿ ಆಕ್ರೋಶ ಹೊರಹಾಕಿದ್ದರು. ಪರಿಹಾರ ನೀಡದೆ ಕಾಮಗಾರಿ ಮಾಡಲು ಬಿಡಲ್ಲ ಎಂದು ಪಟ್ಟು ಹಿಡಿದಿದ್ದರು. ಆದರೆ ಎರಡು ದಿನಗಳಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಭೆ ನಡೆಸಿ ರೈತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಇಂದಿನಿಂದ ಕಾಮಗಾರಿ ಕೆಲಸ ಆರಂಭ ಮಾಡಿದ್ದಾರೆ. ಸದ್ಯ ತಾತ್ಕಾಲಿಕವಾಗಿ ಸ್ಯಾಂಡ್ ಬ್ಯಾಗ್​ಗಳನ್ನ ಹಾಕಿ ರಿಪೇರಿ ಕಾರ್ಯ ಶುರು ಮಾಡಲಾಗುತ್ತಿದೆ. ಎರಡು ದಿನಗಳಲ್ಲಿ ತಾತ್ಕಾಲಿಕವಾಗಿ ಕಾಲುವೆ ದುರಸ್ತಿ ಮಾಡಿ, 5 ರಿಂದ 6 ಅಡಿಗಳಷ್ಟು ನೀರನ್ನ ಹರಿಸಿ, ಕುಡಿಯುವ ನೀರಿನ ವ್ಯವಸ್ಥೆ ಮಾಡೋದಾಗಿ ಸಣ್ಣ ನೀರಾವರಿ ಸಚಿವ ಎನ್​ಎಸ್ ಬೋಸರಾಜು ತಿಳಿಸಿದ್ದಾರೆ.

ಸಚಿವ ಎನ್​ಎಸ್ ಬೋಸರಾಜು ಹೇಳಿದ್ದಿಷ್ಟು 

ಇಂದು ಬಸ್ಸಾಪುರ ಗ್ರಾಮದ ಬಳ ಕಾಲುವೆ ಒಡೆದ ಸ್ಥಳಕ್ಕೆ ಬಂದು ವೀಕ್ಷಣೆ ಮಾಡಿದ ಸಚಿವ ಬೋಸರಾಜು, ಅಧಿಕಾರಿಗಳು ಹಾಗೂ ರೈತರ ಬಳಿ ಮಾಹಿತಿ ಪಡೆದುಕೊಂಡರು. ಸಚಿವರ ಎದುರು ರೈತರು, ಕಳೆದ ನಾಲ್ಕು ತಿಂಗಳಿನಿಂದ ಗುದ್ದು ಬಿದ್ದಿರೋದನ್ನ ಅಧಿಕಾರಿಗಳ ಗಮನಕ್ಕೆ ತಂದರು. ಸರಿಯಾಗಿ ನಿರ್ವಹಣೆ ಮಾಡದ ಕಾರಣ ದೊಡ್ಡ ದುರಂತ ಸಂಭವಿಸಿದೆ ಎಂದು ಆಕ್ರೋಶ ಹೊರಹಾಕಿದರು. ಬಳಿಕ ಮಾತಮಾಡಿದ ಸಚಿವ, ರೈತರಿಗೆ ಪರಿಹಾರ ನೀಡಬೇಕು. ಈಗಾಗಲೇ ನಾವು ರೈತರ ಜೊತೆ ಮಾತನಾಡಿದ್ದೇವೆ. ಸದ್ಯ ಬೆಳೆ ಕಳೆದುಕೊಂಡ ರೈತರಿಗೆ ಸಣ್ಣ ನೀರಾವರಿ ಇಲಾಖೆಯಿಂದಲೇ ಪರಿಹಾರ ನೀಡಲಾಗತ್ತೆ‌. 92 ರೈತರ ಬೆಳೆಗಳು ಹಾಳಾಗಿವೆ. ಸಚಿವರು ಹಾಗೂ ನಾವು ಎಲ್ಲರೂ ಸೇರಿ ಪರಿಹಾರದ ಪ್ರಮಾಣ ತೀರ್ಮಾನ ಮಾಡಿ ಪರಿಹಾರ ಒದಗಿಸಲಾಗತ್ತುದೆ. ನಿರ್ಲಕ್ಷ ತೋರಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸಚಿವ ಎನ್​ಎಸ್ ಬೋಸರಾಜು ಹೇಳಿದ್ದಾರೆ.

ಇದನ್ನೂ ಓದಿ: ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ಪರಿಹಾರ ನೀಡದೇ ಕೆಲಸ ಮಾಡಲು ಬಿಡಲ್ಲ ಎಂದು ಪಟ್ಟುಹಿಡಿದಿದ್ದ ರೈತರನ್ನ ಮನವೊಲಿಸಿ, ದುರಸ್ಥಿ ಕಾರ್ಯ ಆರಂಭವಾಗಿದೆ. ಸದ್ಯ ತಾತ್ಕಾಲಿಕವಾಗಿ ಸ್ಯಾಂಡ್ ಬ್ಯಾಗ್​ಗಳನ್ನ ಹಾಕಿ, ನೀರು ಪೊರೈಕೆ ಮಾಡಲಾಗತ್ತೆ ಎಂದಿದ್ದಾರೆ. ಎರಡು ಮೂರು ದಿನಗಳ ಅವಧಿಯಲ್ಲಿ 2 ಸಾವಿರ ಕ್ಯೂಸೆಕ್ ನೀರು ಕುಡಿಯುವ ನೀರಿನ ಉದ್ದೇಶಕ್ಕೆ ನೀಡಲಾಗತ್ತೆ. ಬಳಿಕ ಶಾಶ್ವತವಾಗಿ ಕಾಲುವೆ ನಿರ್ಮಾಣ ಮಾಡಲಾಗತ್ತೆ. ಆದರೆ ಈ ಕೆಲಸ ಆದಷ್ಟು ಬೇಗ ಆಗಬೇಕಿದೆ. ಜೊತೆಗೆ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರವು ಬೇಗನೆ ಸಿಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *