ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು – Kannada News | Karnataka Food Department Revokes 14,000 BPL Cards in Tumkur District

ತುಮಕೂರು, ಆ.8: ಜಿಲ್ಲೆಯಲ್ಲಿ ಪಡಿತರ ಚೀಟಿದಾರರಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯ ಭಾಗವಾಗಿ, ಜಿಲ್ಲೆಯಲ್ಲಿ ಸುಮಾರು 14 ಸಾವಿರ ಬಿಪಿಎಲ್ ಕಾರ್ಡ್‌ಗಳನ್ನು ಆಹಾರ ಇಲಾಖೆ ರದ್ದುಪಡಿಸಿದೆ. ರಾಜ್ಯ ಸರ್ಕಾರದ ಬದ್ಧತೆಗಳ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ತುಮಕೂರು ಜಿಲ್ಲೆಯು ಒಟ್ಟಾರೆ 6 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿದಾರರನ್ನು ಹೊಂದಿದೆ. ಈ ಪೈಕಿ 14 ಸಾವಿರ ಬಿಪಿಎಲ್ ಕಾರ್ಡ್‌ದಾರರು ಅನರ್ಹರು ಎಂದು ಗುರುತಿಸಲಾಗಿದೆ. ಆಹಾರ ಇಲಾಖೆಯು ನಡೆಸಿದ ಪರಿಶೀಲನೆಯಲ್ಲಿ, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವವರು ಮತ್ತು ಖಾಸಗಿ ವಾಹನಗಳಾದ ಕಾರುಗಳನ್ನು ಹೊಂದಿರುವವರೂ ಸಹ ಬಿಪಿಎಲ್ ಕಾರ್ಡ್‌ಗಳನ್ನು ಪಡೆದಿರುವುದು ಬೆಳಕಿಗೆ ಬಂದಿದೆ. ಈ ರೀತಿಯ ನಕಲಿ ಅಥವಾ ಅನರ್ಹ ಕಾರ್ಡುದಾರರನ್ನು ಪತ್ತೆ ಹಚ್ಚಿ, ಅವರ ಕಾರ್ಡ್‌ಗಳನ್ನು ರದ್ದುಪಡಿಸುವ ಮೂಲಕ ಯೋಜನೆಯ ಸೌಲಭ್ಯಗಳು ನಿಜವಾದ ಫಲಾನುಭವಿಗಳಿಗೆ ತಲುಪುವಂತೆ ಮಾಡಲು ಸರ್ಕಾರ ಮುಂದಾಗಿದೆ. ಈ ಕ್ರಮವು ಪಡಿತರ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ಮತ್ತು ದುರುಪಯೋಗವನ್ನು ತಡೆಯುವ ಸರ್ಕಾರದ ಪ್ರಯತ್ನದ ಭಾಗವಾಗಿದೆ. ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ, ಅವುಗಳನ್ನು ಅರ್ಹರಿಗೆ ವಿತರಿಸುವ ಅಥವಾ ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *