ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ – Kannada News | Tumakuru Road Accident Survivor Breaks Down, Reveals Horror After Losing Daughter on Sabarimala Return

ತುಮಕೂರು, ಜನವರಿ 9: ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿ ಬರುತ್ತಿದ್ದ ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಾಲ್ವರು ನಿವಾಸಿಗಳು ತುಮಕೂರಿನ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಕಾರಣ ಅವಘಡ ಸಂಭವಿಸಿದ್ದು, ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಮೃತಪಟ್ಟಿದ್ದಾರೆ. ಸಾಕ್ಷಿ ತಂದೆ ಉಲಗಪ್ಪ ಅಪಘಾತದಲ್ಲಿ ಗಾಯಗೊಂಡಿದ್ದು, ಇದೀಗ ಮಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಅಪಘಾತದ ಭೀಕರತೆ ಬಗ್ಗೆ ಅವರು ನೀಡಿದ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: ತುಮಕೂರು: ಭೀಕರ ಅಪಘಾತ, ಶಬರಿಮಲೆಗೆ ಹೋಗಿ ಬರುತ್ತಿದ್ದ ಯಲಬುರ್ಗಾ ಮೂಲದ ನಾಲ್ವರು ಸ್ಥಳದಲ್ಲೇ ಸಾವು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *