ಚಾಮರಾಜನಗರ, ಆಗಸ್ಟ್ 07: ಗಡಿ ಜಿಲ್ಲೆ ಚಾಮರಾಜನಗರಕ್ಕೆ ಹೊಂದಿಕೊಂಡಂತಿರುವ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗೂಡಲೂರಿನಲ್ಲಿ ಕಾಡಾನೆಗಳ ಹಿಂಡು ರೈತರ ಜಮೀನಿಗೆ ಲಗ್ಗೆ ಇಟ್ಟು ಭಾರಿ ದಾಂಧಲೆ ನಡೆಸಿವೆ. ಆಹಾರ ಅರಸಿ ಬಂದ ಪುಂಡಾನೆಗಳು ತೆಂಗಿನ ಮರಗಳನ್ನೇ ಬುಡಸಮೇತ ಕಿತ್ತು, ಗೋನೆ ಸಮೇತ ಹೊತ್ತೊಯ್ದಿರುವ ಆಘಾತಕಾರಿ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿನಿಮೀಯ ಶೈಲಿಯಲ್ಲಿ ಎಳನೀರನ್ನು ಕಾಲಿನಿಂದ ತುಳಿದು ಕುಡಿದ ಸಲಗಗಳು, ಬಳಿಕ ಮರವನ್ನೇ ಹೊತ್ತು ಸಾಗಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ನಿರಂತರವಾಗಿ ದಾಳಿ ನಡೆಸುತ್ತಿರುವ ಆನೆಗಳ ಉಪಟಳದಿಂದಾಗಿ ಗಡಿ ಭಾಗದ ಬಾಳೆ ಹಾಗೂ ತೆಂಗು ಬೆಳೆಗಾರರು ಕಂಗಾಲಾಗಿದ್ದು, ಶಾಶ್ವತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
