ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿ, ನಟ ದರ್ಶನ್ ಅವರಿಗೆ ನಿರಾಸೆ ಆಗಿದೆ. ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇಂದು (ಮೇ 15) ನ್ಯಾಯಾಲಯದಲ್ಲಿ ವಿಚಾರಣೆ ಹೇಗೆ ನಡೆಯಿತು ಎಂಬುದನ್ನು ಲಾಯರ್ ಸಾಕೇತ್ ಅವರು ವಿವರಿಸಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ. ‘ದರ್ಶನ್ (Darshan Thoogudeepa) ಓರ್ವ ವಿಚಾರಣಾಧೀನ ಕೈದಿ. ಜೈಲಿನಲ್ಲಿ ಬೇರೆ ಕೈದಿಗಳಿಗೆ ಸಿಗುತ್ತಿರುವ ಸವಲತ್ತುಗಳು ತಮಗೆ ಸಿಗುತ್ತಿಲ್ಲ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದರು. ಒಟ್ಟು 272 ಸಾಕ್ಷಿಗಳಿವೆ. ಇನ್ನೂ 150 ಸಾಕ್ಷಿಗಳ ವಿಚಾರಣೆ ಆಗಬೇಕಿದೆ. ಅದರಲ್ಲಿ 60 ಸಾಕ್ಷಿಗಳು ಮುಖ್ಯವಾಗಿವೆ. ಅವುಗಳ ವಿಚಾರಣೆ ನಡೆಯುವ ತನಕ ದರ್ಶನ್ ಅವರಿಗೆ ಜಾಮೀನು ನೀಡಬಾರದು ಎಂದು ರಾಜ್ಯ ಸರ್ಕಾರ ಕೇಳಿಕೊಂಡಿದೆ. ಒಂದು ವರ್ಷದಲ್ಲಿ 60 ಮುಖ್ಯ ಸಾಕ್ಷಿಗಳ ವಿಚಾರಣೆ ಮಾಡಬೇಕು ಎಂದು ಗಡುವು ನೀಡಲಾಗಿದೆ. ಆ ಸಾಕ್ಷಿಗಳ ವಿಚಾರಣೆ ಮುಗಿದ ಬಳಿಕ ಜಾಮೀನು (Bail) ನೀಡಬೇಕೋ ಅಥವಾ ಬೇಡವೋ ಎಂಬುದನ್ನು ಪರಿಗಣಿಸಲಾಗುವುದು ಅಂತ ನ್ಯಾಯಾಲಯ ತಿಳಿಸಿದೆ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
