ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ: ದೇವಸ್ಥಾನದಿಂದ ಎತ್ತಿ ಹೊರಹಾಕಿದ ಟ್ರಸ್ಟಿಗಳು

ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ: ದೇವಸ್ಥಾನದಿಂದ ಎತ್ತಿ ಹೊರಹಾಕಿದ ಟ್ರಸ್ಟಿಗಳು

ಕಲಬುರಗಿ, ಏಪ್ರಿಲ್​ 06: ದಲಿತ ಎಂಬ ಕಾರಣಕ್ಕೆ ಸ್ವಾಮೀಜಿ ಮೇಲೆ ಹಲ್ಲೆ ಮಾಡಿ, ದೇಗುಲದಿಂದ ಹೊರಗೆ ಹಾಕಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯಲ್ಲಿ ನಡೆದಿದೆ. ಮಾತಾ ಮಾಣಿಕೇಶ್ವರಿ ದೇವಸ್ಥಾನದಲ್ಲಿ ಟ್ರಸ್ಟಿಗಳಿಂದ ತೆಲಂಗಾಣ ಮೂಲದ ಬಂಡಿ ಬಾಲಕೃಷ್ಣ ಎಂಬುವರನ್ನು ಎಳೆದಾಡಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ವಾಮೀಜಿ ಕಳೆದ 7-8 ವರ್ಷಗಳಿಂದ ದೇವಸ್ಥಾನದಲ್ಲಿ ನೆಲೆಸಿ ಸೇವೆ ಸಲ್ಲಿಸುತ್ತಿದ್ದರು. ಕೆಳಜಾತಿಯವರು ದೇವಸ್ಥಾನ ಪ್ರವೇಶಿಸಬಾರದು ಎಂದು ನಿಂದಿಸಿ ಹಲವು ಬಾರಿ ಹಲ್ಲೆ ಮಾಡಿದ್ದಾರೆ. ಟ್ರಸ್ಟ್​ನ ಕಾರ್ಯದರ್ಶಿ ಶಿವಯ್ಯ ಮತ್ತು ಪುತ್ರ ಸುಮನ್ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *