ದಾವಣಗೆರೆಗೆ ಆ ಸಚಿವರು ಗೋಣಿಚೀಲದಲ್ಲಿ ಹಣ ತರುತ್ತಾರೆ! ಬಿವೈ ವಿಜಯೇಂದ್ರ ಗಂಭೀರ ಆರೋಪ

ದಾವಣಗೆರೆಗೆ ಆ ಸಚಿವರು ಗೋಣಿಚೀಲದಲ್ಲಿ ಹಣ ತರುತ್ತಾರೆ! ಬಿವೈ ವಿಜಯೇಂದ್ರ ಗಂಭೀರ ಆರೋಪ

ಬಾಗಲಕೋಟೆ, ಮಾರ್ಚ್ 23: ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ವಿಜಯೇಂದ್ರ, ದಾವಣಗೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಹಣ ತರುವುದಿಲ್ಲ, ಸಚಿವರೊಬ್ಬರು ಗೋಣಿಚೀಲದಲ್ಲಿ ಹಣ ತಂದು ಕೂರುತ್ತಾರೆ ಎಂದು ಆರೋಪಿಸಿದರು. ಅಲ್ಲಿನ ರಾಜಕೀಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ನನಗೆ ತಿಳಿದಿದೆ ಎಂದು ಹೇಳಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

‘ರಾಜ್ಯದ ಜನ ಕಾಂಗ್ರೆಸ್ ಸರ್ಕಾರದಿಂದ ಬೇಸತ್ತಿದ್ದಾರೆ. ಇದು ಬಡವರು ಮತ್ತು ದೀನದಲಿತರ ವಿರೋಧಿ ಸರ್ಕಾರ’ ಎಂದು ಅವರು ಆರೋಪಿಸಿದರು. ಸದ್ಯದ ರಾಜಕೀಯ ವಾತಾವರಣ ನೋಡಿದರೆ ಬಿಜೆಪಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಕಮಲದ ಹೂವು ಅರಳುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಈ ಹಿಂದೆ ಸಿರಾ ಮತ್ತು ಕೆಆರ್ ಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕುತಂತ್ರ ಮಾಡಿತ್ತು ಎಂದು ಆರೋಪಿಸಿದ ಅವರು, ಮತದಾನ ಕೊನೆಯ ದಿನದವರೆಗೆ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.

ವಿಜಯೇಂದ್ರ ಮಾತಿನ ವಿಡಿಯೋ


ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರ ಆಶೀರ್ವಾದ ಪಡೆದು ಬಂದಿದ್ದಾಗಿ ತಿಳಿಸಿದ ವಿಜಯೇಂದ್ರ, ಅವರೆಂದೂ ಇಟ್ಟ ಹಿಜ್ಜೆಯಿಂದ ಹಿಂದೆ ಸರಿದವರಲ್ಲ. ಪಕ್ಷದ ಗುರಿ ಸಾಧನೆಗೆ ದಿಟ್ಟ ಹೆಜ್ಜೆ ಇಡಲಾಗುತ್ತಿದೆ ಎಂದರು.

ಇದನ್ನೂ ಓದಿ: ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್​ಗೆ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!

ಬಾಗಲಕೋಟೆ ಕ್ಷೇತ್ರದಲ್ಲಿ ಇದ್ದ ಸಣ್ಣಪುಟ್ಟ ಗೊಂದಲಗಳನ್ನು ಬಗೆಹರಿಸಲಾಗುವುದು. ಎಲ್ಲ ನಾಯಕರು ಒಟ್ಟಾಗಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಚರಂತಿಮಠರ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಒಟ್ಟಿನಲ್ಲಿ, ಉಪಚುನಾವಣೆ ಸಮೀಪಿಸುತ್ತಿದ್ದಂತೆ ಆರೋಪ-ಪ್ರತ್ಯಾರೋಪಗಳ ನಡುವೆ ರಾಜ್ಯ ರಾಜಕೀಯ ಕಾವು ಹೆಚ್ಚಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *