ದಾವಣಗೆರೆಯಲ್ಲಿ ಕಾಂಗ್ರೆಸ್​​ ಗೆಲುವಿಗೆ ಕಾರಣ ಯಾರು? ಜಬ್ಬಾರ್​ ಸ್ಫೋಟಕ ಹೇಳಿಕೆ – Kannada News | Davangere By election: Who Led Congress to Victory; Jabbar Makes Explosive Statement

ಬೆಂಗಳೂರು, ಮೇ 06: ನಾನು ರಿಸಲ್ಟ್ ಬರುವ ಮುಂಚೆಯೇ ಕಾಂಗ್ರೆಸ್ ಗೆಲ್ಲುತ್ತದೆ ಅಂತಾ ಹೇಳಿದ್ದೆ. ಮುಖ್ಯಮಂತ್ರಿಗಳ ಐದು ಗ್ಯಾರಂಟಿ ಯೋಜನೆಗಳು ಮತ್ತು ಸಚಿವ ಜಮೀರ್ ಅಹ್ಮದ್ ಅವರ ಭೇಟಿ ಕೂಡ ಕಾಂಗ್ರೆಸ್ ಗೆಲ್ಲುವುದಕ್ಕೆ ಪ್ರಮುಖ ಕಾರಣ ಎಂದು ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಾರೆ. ಆ ಮೂಲಕ  ಕಾಂಗ್ರೆಸ್​ನಲ್ಲಿ ಈಗ ಕ್ರೆಡಿಟ್ ವಾರ್ ಶುರುವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಡಬಾರದು ಅಂತ ಜನ ತೀರ್ಮಾನ ಮಾಡಿದ್ರೆ ಕೊಡಲ್ಲ. ಜಮೀರ್ ಬಂದು ಹೋದ ಕಾರಣ ಅಸಮಾಧಾನ ಸರಿ ಹೋಗಿತ್ತು ಎಂದಿದ್ದಾರೆ. ಸಿಎಂ ಜೊತೆಗೆ ನಸೀರ್ ಅಹ್ಮದ್ ಹೋಗಿ ಪ್ರಚಾರ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಹೆಂಗೋ ಗೆದ್ದಿದ್ದೇವೆ, ಈಗಾಗಲೇ ಸಿಎಂ ನೂರು ಕೋಟಿ ಕೊಟ್ಟಿದ್ದಾರೆ. ಶಾಸಕರು ದಾವಣಗೆರೆ ದಕ್ಷಿಣ ಅಭಿವೃದ್ಧಿ ಮಾಡಲಿ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *