ದಾವಣಗೆರೆಯಲ್ಲಿ ಬಿಜೆಪಿಗೆ ಮುಸ್ಲಿಂ ಸಾಥ್! ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮಹಿಳೆಯರು

ದಾವಣಗೆರೆಯಲ್ಲಿ ಬಿಜೆಪಿಗೆ ಮುಸ್ಲಿಂ ಸಾಥ್! ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮಹಿಳೆಯರು

ದಾವಣಗೆರೆ, ಮಾ.24: ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಕುಟುಂಬದವರು ಪ್ರಚಾರ ನಡೆಸುತ್ತಿದ್ದಾರೆ. ಮತ ಯಾಚಿಸಲು ತೆರಳಿದಾಗ ಮುಸ್ಲಿಂ ಸಮುದಾಯದವರು ಅಭ್ಯರ್ಥಿ ಪತ್ನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸಾಂಪ್ರದಾಯಿಕವಾಗಿ ಉಡಿ ತುಂಬುವ ಮೂಲಕ ತಮ್ಮ ಬೆಂಬಲ ಸೂಚಿಸಿದರು. ಪ್ರಚಾರದ ವೇಳೆ ಮಾತನಾಡಿದ ಅಭ್ಯರ್ಥಿಯ ಪ್ರತಿನಿಧಿಗಳು, ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ನಿಮ್ಮ ಮನೆಯ ಮಗ ಎಂದು ಪರಿಚಯಿಸಿದರು. ನೀರಿನ ವ್ಯವಸ್ಥೆ, ಚರಂಡಿ, ಮನೆ ಇಲ್ಲದವರಿಗೆ ಸೂರಿನ ವ್ಯವಸ್ಥೆ ಮತ್ತು ಆಸ್ಪತ್ರೆಗಳ ನಿರ್ಮಾಣ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ ಎಂದು ಭರವಸೆ ನೀಡಿದರು. ಅಧಿಕಾರ ಸಿಕ್ಕರೆ ಈ ಕೆಲಸಗಳನ್ನು ನೆರವೇರಿಸುವುದಾಗಿ ಹೇಳಿದರು. ಈ ಬಾರಿಯ ಉಪಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸಿ, ಅಭಿವೃದ್ಧಿಗೆ ಅವಕಾಶ ನೀಡುವಂತೆ ಸಮುದಾಯದವರಲ್ಲಿ ಮನವಿ ಮಾಡಿಕೊಂಡರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *