ದಾವಣಗೆರೆಯಲ್ಲಿ ಹಳ್ಳ ಹಿಡಿದ ‘ಎಸ್ಐಆರ್’ ಪ್ರಕ್ರಿಯೆ: ಮನೆ ಮನೆಗೆ ಹೋಗದೆ ದೇವಸ್ಥಾನ, ಅಂಗನವಾಡಿಯಲ್ಲೇ ಕುಳಿತ ಬಿಎಲ್‌ಓ – Kannada News | Viral Video: Davangere BLOs Neglect SIR Duties, Forcing Citizens to Anganwadis

ದಾವಣಗೆರೆ, ಜು.4: ಜಿಲ್ಲೆಯಲ್ಲಿ ಎಸ್‌ಐಆರ್ (SIR) ಪ್ರಕ್ರಿಯೆಯು ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ನಿಯಮದ ಪ್ರಕಾರ ಮನೆ ಮನೆಗಳಿಗೆ ತೆರಳಿ ಸಾರ್ವಜನಿಕರಿಂದ ಮಾಹಿತಿ ಹಾಗೂ ಫಾರಂಗಳನ್ನು ಸಂಗ್ರಹಿಸಬೇಕಾದ ಬಿಎಲ್‌ಓಗಳು (BLO – Booth Level Officers), ಬೇಕಾಬಿಟ್ಟಿಯಾಗಿ ಕಾರ್ಯನಿರ್ವಹಿಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಎಲ್‌ಓಗಳು ಮನೆಮನೆಗೆ ತೆರಳದೆ, ಅಂಗನವಾಡಿ ಕೇಂದ್ರ ಹಾಗೂ ದೇವಸ್ಥಾನಗಳಲ್ಲಿ ಕುಳಿತುಕೊಂಡೇ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿರುವ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಾಲಿನಗರದ ಬೂತ್ ನಂಬರ್ 49ರಲ್ಲಿ ಈ ಅವಾಂತರ ಬೆಳಕಿಗೆ ಬಂದಿದೆ. ಇಲ್ಲಿನ ಅಂಗನವಾಡಿ ಕೇಂದ್ರ ಮತ್ತು ಸ್ಥಳೀಯ ಕಾಲಭೈರವ ದೇವಸ್ಥಾನದಲ್ಲಿ ಬಿಎಲ್‌ಓಗಳು ಆರಾಮಾಗಿ ಕುಳಿತುಕೊಂಡಿದ್ದಾರೆ. ಸಾರ್ವಜನಿಕರು ತಾವೇ ಖುದ್ದಾಗಿ ದೇವಸ್ಥಾನ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅಲೆದಾಡಿ ಫಾರಂಗಳನ್ನು ಪಡೆದುಕೊಂಡು ಬರುತ್ತಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕ್ಷೇತ್ರದ ಸಾರ್ವಜನಿಕರು ಬಿಎಲ್‌ಓಗಳಿಗೆ ಫೋನ್ ಮಾಡಿ ನಿಯಮದಂತೆ ಮನೆಗೆ ಬರುವಂತೆ ವಿನಂತಿಸಿದರೆ, ಅದಕ್ಕೆ ಉದ್ಧಟತನದ ಉತ್ತರ ಸಿಗುತ್ತಿದೆ ಎನ್ನಲಾಗಿದೆ. “ನಾವು ಇರುವ ಜಾಗಕ್ಕೇ ಬಂದು ಫಾರಂ ಪಡೆದುಕೊಳ್ಳಿ ಮತ್ತು ಸಬ್ಮಿಟ್ ಮಾಡಿ” ಎಂದು ಬಿಎಲ್‌ಓಗಳು ಸಾರ್ವಜನಿಕರಿಗೆ ಸೂಚಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಇದರಿಂದಾಗಿ ವಯೋವೃದ್ಧರು ಮತ್ತು ಮಹಿಳೆಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *