ದಾವಣಗೆರೆ ದಕ್ಷಿಣ ಗೆಲುವಿನ ಕ್ರೆಡಿಟ್ ಯಾರಿಗೆ? ಸಲೀಂ ಅಹ್ಮದ್ ಹೇಳಿದ್ದಿಷ್ಟು – Kannada News | MLC salim ahmed Talks about Congress Candidate Samarth Shamanur Won In Davanagere South By Poll

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಟಿಕೆಟ್ ವಿಚಾರದಲ್ಲಿ ನಡೆದ ಮುಸುಕಿನ ಗುದ್ದಾಟದಿಂದ ಕಾಂಗ್ರೆಸ್​​ ಲೀಡ್ ಕಡಿಮೆಯಾಗಿದೆ, ಯಾಕಂದ್ರೆ, ಟಿಕೆಟ್ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಮುಸ್ಲಿಮರು ಎಸ್​ಡಿಪಿಐಗೆ ಬೆಂಬಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್​ ಮತ ಬ್ಯಾಂಕ್​​​ ಗೆ ಡಿಮ್ಯಾಜ್ ಆಗಿದೆ. ಸಮರ್ಥ್ ಗೆಲುವು ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಬಣಕ್ಕೆ ಪ್ಲಸ್ ಪಾಯಿಂಟ್ ಅದರೆ ಸಚಿವ ಜಮೀರ್‌ ಅಹ್ಮದ್ ಖಾನ್ ಅವರಿಗೆ ಇದು ಹಿನ್ನಡೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ. ಇನ್ನು ಬಗ್ಗೆ ಸ್ವತಃ ಸಲೀಂ ಅಹ್ಮದ್ ಮಾತನಾಡಿದ್ದು, ಏನು ಹೇಳಿದ್ದಾರೆ ಕೇಳಿ.

ಇದನ್ನೂ ಓದಿ: ಸಮರ್ಥ್ ಶಾಮನೂರು ಜಸ್ಟ್‌ ಪಾಸ್: ಕಾಂಗ್ರೆಸ್​​ಗೆ ಶಾಕ್ ಕೊಟ್ಟ ದಾವಣಗೆರೆ ದಕ್ಷಿಣ ರಿಸಲ್ಟ್

Source link

Leave a Reply

Your email address will not be published. Required fields are marked *