ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ ಮುನ್ನವೇ ಕಾಂಗ್ರೆಸ್​​ ಪಾಳೆಯದಲ್ಲಿ ಕೋಲಾಹಲ

ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ ಮುನ್ನವೇ ಕಾಂಗ್ರೆಸ್​​ ಪಾಳೆಯದಲ್ಲಿ ಕೋಲಾಹಲ

ದಾವಣಗೆರೆ, ಮಾರ್ಚ್​ 10: ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ (Davangere By-election)  ಮೊದಲೇ ಕಾಂಗ್ರೆಸ್ (Congress)​ ಪಾಳೆಯದಲ್ಲಿ ವಿಘ್ನ ಶುರುವಾಗಿದೆ. ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿ ಆಗಿದೆ. ಇನ್ನೇನು ಉಪ ಚುನಾವಣೆ ಘೋಷಣೆ ಆಗಲಿದೆ. ಇದು ಕಾಂಗ್ರೆಸ್​​ಗೆ ಪ್ರತಿಷ್ಠೆಯ ಪ್ರಶ್ನೆ. ಹೀಗಾಗಿ 10 ಜನ ಸಚಿವರ ತಂಡ ಕೂಡ ಮಾಡಲಾಗಿದೆ. ಅಖಾಡ ಸಜ್ಜಾಗುವ ಮೊದಲೇ ಜಮೀರ್ ಮತ್ತು ಮಲ್ಲಿಕಾರ್ಜುನ ನಡುವೆ ಪೈಟ್ ಶುರುವಾಗಿದೆ.

ರಾಜ್ಯ ಕಾಂಗ್ರೆಸ್​ನಲ್ಲಿ ಹತ್ತಾರು ಕಿತ್ತಾಟಗಳ ಮಧ್ಯೆ ಉಪಚುನಾವಣೆ ಸಹ ಬಂದಿದೆ. ಇದರಲ್ಲಿ ಇದೀಗ ದಾವಣಗೆರೆ ದಂಗಲ್​​ ಗಮನ ಸೆಳೆಯುತ್ತಿದೆ. ಶಾಮನೂರು ಸತತ ಶಾಸಕರಾಗುತ್ತಿದ್ದರು. ಶಾನನೂರ ನಿಧನದ ಬಳಿಕ ಮುಸ್ಲಿಂ ಸಮಾಜ ನಮಗೆ ಟಿಕೆಟ್ ಕೊಡಿ ಎಂದು ಕೇಳುತ್ತಿದೆ. ಇದು ಶಾಮನೂರು ಪುತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್​ಎಸ್ ಮಲ್ಲಿಕಾರ್ಜುನ ಕಣ್ಣು ಕೆಂಪಗಾಗಿಸಿದೆ. ಇನ್ನೊಂದು ವಿಚಾರ ಅಂದರೆ ಕ್ಷೇತ್ರದ ಉಸ್ತುವಾರಿಗಳನ್ನ ಜಮೀರ್ ಅಹ್ಮದ್ ಖಾನ್, ಈಶ್ವರ ಖಂಡ್ರೆ ಸೇರಿ ಹತ್ತು ಜನ ಸಚಿವರನ್ನ ಕೆಪಿಸಿಸಿ ನೇಮಕ ಮಾಡಿದೆ. ಆದರೆ ಸಚಿವ ಮಲ್ಲಿಕಾರ್ಜುನ ಜಮೀರ್ ವಿರುದ್ಧ ವಾಗ್ದಾಳಿ ನಡೆಸಿದ್ದು ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಉಪ ಚುನಾವಣೆಗೂ ಮುನ್ನ ವಿಘ್ನ ಶುರುವಾಗಿದೆ.

ಇದನ್ನೂ ಓದಿ: ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

ನಮ್ಮ ಕ್ಷೇತ್ರದ ಬಗ್ಗೆ ಮಾತಾಡಲು ಆತ ಯಾರು ಎಂದು ಏಕ ವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ಪ್ರಭಾವಿ ಸಚಿವ ನಡುವಿನ ಮಾತುಗಳು ಚರ್ಚೆಗೆ ಗ್ರಾಸವಾಗಿದೆ. ಮುಸ್ಲಿಂ ಮತಗಳನ್ನೇ ಮೆಚ್ಚಿಕೊಂಡ ಕಾಂಗ್ರೆಸ್​ಗೆ ಮಲ್ಲಿಕಾರ್ಜುನ ಮಾತು ಬಿಸಿ ತುಪ್ಪವಾಗಿದೆ. ಈಗ ತಾವು ಸಚಿವೆ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ ಸಂಸದೆ ಹಾಗೂ ಪುತ್ರ ಸಮರ್ಥ ಶಾಮನೂರನನ್ನ ಶಾಸಕ ಮಾಡುವ ಪ್ಲಾನ್ ಮಾಡಿದ್ದಾರೆ. ಆದರೆ ಆರಂಭದಲ್ಲಿ ಈ ರೀತಿ ಹೇಳಿಕೆ ನೀಡಿದ್ದು ಮಾತ್ರ ಅಚ್ಚರಿ ಉಂಟುಮಾಡಿದೆ.

ಸಚಿವ ಎಸ್ ಎಸ್ ಮಲ್ಲಿಕಾರ್ಜುನ ತಕ್ಷಣ ಕ್ಷಮೆಯಾಚಿಸಬೇಕು: ಮುಸ್ಲಿಂ ಸಮಾಜ ಆಕ್ರೋಶ

ಸಚಿವ ಜಮೀರ್ ಅಹಮದ್ ಖಾನ್ ಬಗ್ಗೆ ಸಚಿವ ಎಸ್​ಎಸ್ ಮಲ್ಲಿಕಾರ್ಜುನ ಹೇಳಿಕೆ ಮುಸ್ಲಿಂ ಸಮಾಜ ಆಕ್ರೋಶಗೊಂಡಿದೆ. ಈ ಬಗ್ಗೆಸಚಿವ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ತಕ್ಷಣ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ. ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಕ್ಕೆ ಮುಸ್ಲಿಂ ಸಮಾಜಕ್ಕೆ ಟಿಕೆಟ್ ಕೇಳಿದ್ದಕ್ಕೆ ಈ ರೀತಿ ಆಕ್ರೋಶ ಸರಿಯಿಲ್ಲ. ಜಮೀರ್ ಅಹಮದ್ ಖಾನ್ ಬಗ್ಗೆ ಹಗುರವಾಗಿ ಮಾತಾಡುವುದು ಸರಿಯಲ್ಲ ಎಂದು ಖಂಡಿಸಿದೆ.

ಪಕ್ಷ ಅಂದರೆ ಹೈಕಮಾಂಡ ಇದೆ. ಟಿಕೆಟ್ ಕೊಡುವ ನಿರ್ಧಾರ ಪಕ್ಷ ತೆಗೆದುಕೊಳ್ಳುತ್ತದೆ. ಮುಸ್ಲಿಂ ಸಮಾಜ ಕಾಂಗ್ರೆಸ್​ಗೆ ಟೇಕನ್ ಫಾರ್ ಗ್ರಾಂಟೆಡ್ ಆಗಿದೆ. ಪಕ್ಷದ ವರಿಷ್ಠರು ಇಲ್ಲಾ ಅಂದರೆ ಮಲ್ಲಿಕಾರ್ಜುನ ಅವರೇ ಟಿಕೆಟ್ ಘೋಷಣೆ ಮಾಡಿಕೊಳ್ಳಲಿ. ತಕ್ಷಣ ಸಚಿವ ಮಲ್ಲಿಕಾರ್ಜುನ ಜಮೀರ್ ಅಹ್ಮದ್ ಖಾನ್​ಗೆ ಕ್ಷಮೆ ಕೇಳಬೇಕು, ಇಲ್ಲಾ ಅಂದರೆ ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ. ಜಮೀರ್ ಖಾನ್, ಮುಸ್ಲಿಂ ಸಮಾಜದ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕ. ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ ಎಂಬುದು ಮುಸ್ಲಿಂ ಮುಖಂಡರ ವಾದ.

ಇದನ್ನೂ ಓದಿ: ಎಲೆಕ್ಷನ್​​​ಗೆ 2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್​​ವೈ ವಿರುದ್ಧ ಭುಗಿಲೆದ್ದ ಆಕ್ರೋಶ

ಇನ್ನೊಂದು ವಿಚಾರ ದಾವಣಗೆರೆಯ ಪ್ರಭಾವಿ ಮುಸ್ಲಿಂ ಸಮಾಜದ ಮುಖಂಡ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಬಗ್ಗೆ ಸಹ ಮಲ್ಲಿಕಾರ್ಜುನ ಹೇಳಿಕೆ ನೀಡಿದ್ದಾರೆ. ಜಬ್ಬಾರ್​ನಿಂದ ಮಾತ್ರ ಇಡಿ ಊರು ಹಾಳಾಗುತ್ತಿದೆ ಎಂದಿದ್ದಾರೆ. ನಾಲ್ಕು ದಶಕಗಳ ಕಾಲ ಕಾಂಗ್ರೆಸ್​ಗೆ ದುಡಿದ ಮುಖಂಡನಿಗೆ ಈ ರೀತಿ ಹೇಳಿಕೆ ನೀಡಿದ್ದು ಸಹ ಮುಸ್ಲಿಂ ಸಮಾಜಕ್ಕೆ ಸಿಟ್ಟು ತರಿಸಿದೆ. ಒಟ್ಟಿನಲ್ಲಿ ಚುನಾವಣೆಗೂ ಮೊದಲೇ ತಿಕ್ಕಾಟ ಶುರುವಾಗಿದ್ದು ಮಾತ್ರ ಕಾಂಗ್ರೆಸ್​​ಗೆ ತಳಮಳ ಹುಟ್ಟಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *