ಬೆಂಗಳೂರು, ಜೂನ್ 02: ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ಬೆಂಗಳೂರಿನ ಚಾಲುಕ್ಯ ರಸ್ತೆಯಲ್ಲಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯು ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಜಮೀರ್ ಅಹ್ಮದ್ ಉಪಮುಖ್ಯಮಂತ್ರಿ (DyCM) ಮತ್ತು ಪ್ರಮುಖ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಈ ನಡುವೆ ಇತ್ತೀಚೆಗೆ ದಾವಣಗೆರೆ ದಕ್ಷಿಣ ಉಪಚುನಾವಣೆ ಸಂದರ್ಭದಲ್ಲಿ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ. ಸುರೇಶ್ ಅವರ ಭೇಟಿ ಹೆಚ್ಚಿನ ಮಹತ್ವ ಪಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
