ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಹಣಕಾಸಿನ ಲಾಭಕ್ಕೆ ಒತ್ತಾಯಿಸುವರು – Kannada News | Horoscope 18 Wednesday 2026; Dina Rashi Bhavishya Today, Checkout the details here

ಮೇಷ ರಾಶಿ:

ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಯಾರೂ ನಿಮ್ಮ ಬಗ್ಗೆ ಹೇಳದಿದ್ದಾಗ ಆತ್ಮ ಪ್ರಶಂಸೆಯನ್ನು ಮಾಡಿಕೊಳ್ಳುವಿರಿ. ಗೌಪ್ಯತೆಯ ವಿಚಾರದಲ್ಲಿ ವರ್ತನೆಯು ಎಲ್ಲರೂ ಮೆಚ್ಚುವಂಥದ್ದಾಗಿರಲಿದೆ. ನಿಮ್ಮ ಬಗ್ಗೆ‌ ನಿಮಗೇ ಬೇಕೆಂದು ಏನಾದರೂ ಹೇಳಿಯಾರು. ಕೃತಜ್ಞತೆಯನ್ನು ನೀವು ರೂಢಿಸಿಕೊಳ್ಳಬೇಕಾಗುವುದು. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ.

ವೃಷಭ ರಾಶಿ:

ಸದುಪಯೋಗವಾಗುವಂತಹ ಕೆಲಸದ ಕಡೆ ಗಮನವಿರಲಿ. ಸರಕಿನ ಆಮದು ಮಾಡಿಕೊಳ್ಳಲು ತೊಂದರೆ. ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತಿಸುವಿರಿ. ಖರೀದಿಯ ವಸ್ತುಗಳು ಕಳೆದುಹೋಗುವ ಸಂಭವವಿದೆ. ಎಲ್ಲರ ಜೊತೆ ಬೆರೆಯುವ ಅವಕಾಶಗಳು ಇಂದು ಕಡಿಮೆ‌ ಇರಲಿದೆ. ಸ್ವತಂತ್ರವಾಗಿ ಬದುಕಬೇಕು ಎಂಬ ಇಚ್ಛೆಯು ಜಾಗರೂಕವಾಗಲಿದೆ. ಪರೋಪಕಾರಕ್ಕೆ ಪ್ರತ್ಯುಪಕಾರದ ಚಿಂತನೆ ಇರಲಿ. ಬೆನ್ನು ನೋವಿನಿಂದ ನಿಮಗೆ ಕಷ್ಟವಾದೀತು.

ಮಿಥುನ ರಾಶಿ:

ಲೆಕ್ಕಪತ್ರದ ವಿಚಾರದಲ್ಲಿ‌ ನಿರ್ದಿಷ್ಟತೆಯನ್ನು ಅಪೇಕ್ಷಿಸುವಿರಿ. ಸಂಗಾತಿಯ ಜೊತೆಗಿನ ವೈಮನಸ್ಯವು ದೂರಾಗಿ ಸಂತೋಷವು ಇಂದು ನೆಲೆಸುವುದು. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣ ಇರಲಿದೆ.‌ ನಿಮ್ಮಿಂದ ನೌಕರರಿಗೆ ಭಡ್ತಿ ಸಿಗಲಿದೆ. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಶರೀರಪೀಡೆಯನ್ನು ನೀವು ಅನುಭವಿಸುವುದು ಕಷ್ಡವಾಗಬಹುದು.‌ ಸಂಗಾತಿಯ ಸ್ವಭಾವವು ಇಂದು ಸ್ಪಷ್ಟವಾಗಿ ತಿಳಿಯಿತು ಎಂದು ಅಂದುಕೊಂಡಿರುವಿರಿ.

ಕರ್ಕಾಟಕ ರಾಶಿ:

ಸಂಗಾತಿಗೆ ಉದ್ಯೋಗವನ್ನು ಕೊಡಿಸಲು ಓಡಾಟ ಮಾಡುವಿರಿ. ಅರ್ಧಬಲದಷ್ಟು ಕೆಲಸವನ್ನು ನೀವು ಮಾಡುವಿರಿ. ನಿಮ್ಮ ಬಳಿಯೇ ಎಲ್ಲವೂ ಇದ್ದರೂ ಇನ್ನೊಬ್ಬರ ಸ್ವತ್ತಿಗೆ ಕಣ್ಣು ಹಾಕುವಿರಿ. ಪ್ರಭಾವೀ ವ್ಯಕ್ತಿಗಳ ಸಂಪರ್ಕವನ್ನೂ ಮಾಡುವಿರಿ. ನೀವಿಲ್ಲದವರಲ್ಲಿ ನಿಮ್ಮನ್ನು ಹುಡುಕುವ ಪ್ರಯತ್ನ ವ್ಯರ್ಥ. ಉದ್ಯೋಗದಲ್ಲಿ ನೀವು ಜಾಣತನವನ್ನು ತೋರಿಸುವ ಅವಶ್ಯಕತೆ ಇಲ್ಲ. ಆಸಕ್ತಿ ಇಲ್ಲದಿದ್ದರೂ ಕೆಲಸವನ್ನು ಅನಿವಾರ್ಯವಾಗಿ ಮಾಡಬೇಕಾಗುವುದು.

ಸಿಂಹ ರಾಶಿ:

ಧನಾತ್ಮಕ ಆಲೋಚನೆಗೆ ಸ್ಪಂದನೆ ಸಿಗಲಿದೆ. ಕಛೇರಿಯ ಕಿರಿಕಿರಿಯಿಂದ‌ ಮನೆಯಲ್ಲಿಯೂ ನಿಮಗೆ ನೆಮ್ಮದಿ ಸಿಗದು. ಖುಷಿಯ ವಾತಾವರಣವಿದ್ದರೂ ನಿಮಗೆ ನಿಮ್ಮದೇ ಚಿಂತೆ ಕಾಡಬಹುದು. ಹಳೆಯ ಸ್ನೇಹಿತರನ್ನು ಭೇಟಿಯಾಗಿ ಸ್ವಲ್ಪ ಹೊಸ ವಾತಾವರಣವನ್ನು ಕಾಣುವಿರಿ. ನಿಮ್ಮ ವಿಚಾರದಲ್ಲಿ ನಿಮ್ಮ ನೌಕರರ ಬಗ್ಗೆ ನಿಮಗೆ ಸಮಾಧಾನ ಇರಲಿದೆ. ಕೆಲಸದ ಆಯಾಸದಿಂದ ಆರೋಗ್ಯವು ಕೆಡಬಹುದು.

ಕನ್ಯಾ ರಾಶಿ:

ಪಾಲುದಾರಿಕೆಗೆ ಅನ್ಯರ ಸೇರ್ಪಡೆ ಸಾಧ್ಯತೆ. ಸಹೋದರಿಯರ ನಡುವೆ ಕಲಹವಾಗಬಹುದು. ಅಮೂಲ್ಯವಾದ ವಸ್ತುಗಳನ್ನು ನಷ್ಟ ಮಾಡಿಕೊಳ್ಳುವ ಸಾಧ್ಯತೆ ಇದೆ. ಬಂಧುಗಳ ಆರೋಪವನ್ನು ನೀವು ನಿರಾಕರಿಸುವಿರಿ.‌ ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದ್ದು ವೈದ್ಯರನ್ನು ಭೇಟಿಯಾಗುವುದು ಸೂಕ್ತ. ದುರಭ್ಯಾಸವನ್ನು ಹಿಡಿಸಿಕೊಳ್ಳುವ ಸಂದರ್ಭವು ಬರಬಹುದು. ಕಲಾವಿದರು ಇತರರ ಸಹಕಾರವನ್ನು ಪಡೆಯುವರು. ಆಸ್ತಿಯ ವಿಚಾರದಲ್ಲಿ ಜಗಳವು ತಾರಕಕ್ಕೆ ಹೋಗಬಹುದು.

ತುಲಾ ರಾಶಿ:

ದಾಂಪತ್ಯದಲ್ಲಿ ಶಾಂತಿಯು ಬೇಕಾದರೆ ಸುಮ್ಮನಿರುವುದು ಉತ್ತಮ. ಭೂಮಿಯಲ್ಲಿ ಹೊಸ ಸಸ್ಯಗಳ ಆರೋಪಣೆ ಮಾಡುವಿರಿ. ಕೋಪವನ್ನು ದೀರ್ಘಕಾಲ ಮುಂದುವರಿಸುವುದು ಬೇಡ. ಕಛೇರಿಯ ತುರ್ತು ಸ್ಥಿತಿಯು ನಿಮಗೆ ಗೊತ್ತಾಗದೇ ಆರಾಮಾಗಿ ಇರುವಿರಿ. ನಿಮ್ಮ ಸ್ವಭಾವಕ್ಕೆ ಯೋಗ್ಯವಾದ ವ್ಯಕ್ತಿಯ ಗೆಳೆತನವಾಗಲಿದೆ. ಸ್ವಂತ ಉದ್ಯಮವನ್ನು ಮಾಡುತ್ತಿದ್ದರೆ ನಿರೀಕ್ಷಿತ ಲಾಭವನ್ನು ತಲುಪುವುದು ಕಷ್ಟವಾದೀತು. ಸ್ತ್ರೀಯರ ಜೊತೆ ಇಂದು ನಿಮ್ಮ ವ್ಯವಹಾರವು ಬೇಡ.

ವೃಶ್ಚಿಕ ರಾಶಿ:

ದಿನ ಪೂರ್ತಿ ಬೆವರು ಹರಿಸಿ ಮಾಡಿದ ಕೆಲಸಕ್ಕೆ ದಿನದ ಕೊನೆಗೆ ಶುಭ ಫಲವು ಸಿಗುವುದು. ಉದ್ಯೋಗ ಶಿಸ್ತಿಗೆ ಮಹಿಳೆಯರನ್ನು ಜೋಡಿಸಿಕೊಳ್ಳುವಿರಿ. ಹೊಸ ಉದ್ಯೋಗವನ್ನು ಹುಡುಕುವವರಿಗೆ ಹೆಚ್ಚು ಗೊಂದಲವಾಗಬಹುದು. ದಾಂಪತ್ಯದಲ್ಲಿ ಅನುಮಾನದ ಹೊಗೆಯಾಡುವುದು. ಯಾರ ಸಹಾಯವನ್ನೂ ಪಡೆಯದೆ ಕಾರ್ಯವು ನಿಧಾನವಾಗುವುದು. ಉದ್ಯೋಗಕ್ಕಾಗಿ ಖಾಸಗಿ ಸಂಸ್ಥೆಯನ್ನು ಅಲೆಯಬೇಕಾಗುವುದು. ಮಾತನಾಡುವಾಗ ಸೂಕ್ಷ್ಮಸಂಗತಿಗಳನ್ನು ಮರೆಯಬಾರದು.

ಧನು ರಾಶಿ:

ಹಳೆಯ ಮನೆಯನ್ನು ಸುಂದರೀಕರಣ ಮಾಡುವ ಚಿಂತನೆ ನಡೆಸುವಿರಿ. ಪರಿಚಿತರ ಹೊಸ ಮುಖಗಳು ಅನಾವರಣವಾಗುವುದು. ನಿಮ್ಮ ಧಾರ್ಮಿಕ ನಂಬುಗೆಗೆ ಯಾರಿಂದಲಾದರೂ ಘಾಸಿ ಉಂಟಾದೀತು. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸೋಲುವಿರಿ. ನಿಮ್ಮ ಬಗ್ಗೆ ತಪ್ಪು ಕಲ್ಪನೆ ಬರಬಹುದು. ಬಂಧುಗಳ ಆಗಮನವನ್ನು ಇಂದು ನಿರೀಕ್ಷಿಸುವಿರಿ. ವಾಹನದಲ್ಲಿ ಸಂಚಾರ ಮಾಡುವುದಕ್ಕೆ ಕೆಲವು ತೆಡೆಗಳು ಬರಬಹುದು. ದೈಹಿಕ‌ಶ್ರಮವು ಇಂದು ಹೆಚ್ಚಿದ್ದು, ಲಾಭವೂ ಸಮಾಧಾನವನ್ನು ತರುವುದು.

ಮಕರ ರಾಶಿ:

ಇಂದಿನ‌ ಪ್ರಯಾಣದಲ್ಲಿ ಬಂಧುಗಳು ಅನಿರೀಕ್ಷಿತವಾಗಿ ಸಿಗುವರು. ನಿಮ್ಮ ಗುಣವನ್ನು ದುರುಪಯೋಗ ಮಾಡಿಕೊಂಡಾರು. ಇಷ್ಟಪಟ್ಟಿದ್ದನ್ನು ಪಡೆಯಲು ನೀವು ಏನಾದರೂ ಮಾತನಾಡಬೇಕಾಗುವುದು. ವಿವಾಹದ ಮಾತುಕತೆ ನಿಮಗೆ ಖುಷಿ ತಂದರೂ ಅದನ್ನು ಹೇಳಿಕೊಳ್ಳಲು ಸಂಕೋಚಪಡುವಿರಿ. ಹಳೆಯ ಸ್ನೇಹವನ್ನು ನೀವು ಗುರುತಿಸಲಾರಿರಿ. ನಿಮ್ಮ ಉತ್ಸಾಹದ ಕಾರಣ ಜವಾಬ್ದಾರಿಯೂ ಅಧಿಕವಾಗುವುದು. ಆಗಬೇಕಾದ ಕಾರ್ಯವು ಆಗದೇ ಹಣವು ವ್ಯರ್ಥವನ್ನು ಮಾಡಿಕೊಂಡು ಸಂಕಟಪಡಬೇಕಾಗುವುದು.

ಕುಂಭ ರಾಶಿ:

ನೀವು ಯಾರ ಕೈಗೂ ಸುಲಭಕ್ಕೆ ಸಿಗದೇ, ಎಲ್ಲ ಜವಾಬ್ದಾರಿಗಳಿಂದ ದೂರವಿರುವಿರಿ. ಯಾರಾದರೂ ನಿಮ್ಮವರ ಬಗ್ಗೆ ಬಂದು ಕಿವಿಕಚ್ಚಬಹುದು. ಸಕಾಲಕ್ಕೆ ಬಂದ ಸ್ನೇಹಿತನ‌ ಸಹಕಾರವನ್ನು ಸದಾ ಸ್ಮರಿಸಿಕೊಳ್ಳುವುದು ಸೂಕ್ತ. ಉನ್ನತ ಮಟ್ಟದ ವಿದ್ಯಾಭ್ಯಾಸಕ್ಕೆ ತೊಂದರೆ ಎದುರಾಗಬಹುದು. ವಿದೇಶದಿಂದ ಮರಳುವ ಯೋಚನೆ ಇರುವುದು. ಪ್ರಯಾಣವು ಆರಂಭದಲ್ಲಿ ಸುಖಕರ ಎನಿಸದರೂ ದೇಹಪೀಡೆ ಅಧಿಕವಾದೀತು. ಇನ್ನೊಬ್ಬರನ್ನು ಅವಲಂಬಿಸಿರವುದು ನಿಮಗೆ ಇಷ್ಟವಾಗದು.

ಮೀನ ರಾಶಿ:

ಉದ್ಯಮಿಗಳ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಇದೆ. ಕುಟುಂಬ ಹಾಗೂ ಪ್ರೇಮದ ನಡುವೆ ಸಿಕ್ಕಿಬಿದ್ದು ಗೊಂದಲ ಕಾಡುವುದು. ಯಾವುದನ್ನು ಉಳಿಸಿಕೊಳ್ಳಬೇಕು ಎಂಬ ಭ್ರಮೆಯಲ್ಲಿ ಇರುವಿರಿ. ನಿಮ್ಮ ವ್ಯವಹಾರವನ್ನು ಕಾನೂನಾತ್ಮಕವಾಗಿ ನಡೆಸಿದರೆ ಉತ್ತಮ. ಆದಾಯದ ಮೂಲಗಳನ್ನು ನೀವು ಉಳಿಸಿಕೊಳ್ಳುವುದು ಕಷ್ಟವಾದೀತು. ಸಂಗಾತಿಯ ನೋವನ್ನು ನಿಮ್ಮದೇ ಆದ ವಿಧಾನದಿಂದ ಸರಿ ಮಾಡುವಿರಿ. ಬಂಧುಗಳ ಜೊತೆ ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆಯೇ ಇರಲಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಧನಿಷ್ಠಾ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಶತಭಿಷಾ, ಯೋಗ : ಶಿವ, ಕರಣ : ಬವ, ಸೂರ್ಯೋದಯ – 06 – 47 am, ಸೂರ್ಯಾಸ್ತ – 06 – 28 pm, ಇಂದಿನ ಶುಭಾಶುಭ ಕಾಲ : ರಾಹು 12:38 – 14:06, ಯಮಗಂಡ ಕಾಲ 08:16 – 09:43, ಗುಳಿಕ ಕಾಲ 11:11 – 12:38

-ಲೋಹಿತ ಹೆಬ್ಬಾರ್ – 8762924271 (what’s app only)

Source link

Leave a Reply

Your email address will not be published. Required fields are marked *