ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಧನವನ್ನು ಪಡೆದುದಕ್ಕೆ ಕೃತಜ್ಞತಾ ಭಾವ – Kannada News | Daily Horoscope for June 30, 2026: Tuesday Astrology Predictions for All 12 Zodiac Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಪೂರ್ವಾಷಾಢಾ, ಯೋಗ : ಕೃಷ್ಣ, ಕರಣ : ಬಾಲವ, ಸೂರ್ಯೋದಯ – 05 – 58 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:36 – 17:12, ಯಮಗಂಡ ಕಾಲ 09:11 – 10:47, ಗುಳಿಕ ಕಾಲ 12:23 – 13:59.

ಮೇಷ ರಾಶಿ: ಇಂದು ನಿಮ್ಮ ಪರೀಕ್ಷೆಯ ಕಾಲ. ಅದಕ್ಕೆ ಯೋಗ್ಯವಾದ ಉತ್ತರವನ್ನು ಕೊಡುವ ಭರದಲ್ಲಿ ಅವಘಡಗಳು ಆಗಬಹುದು. ಇಂದು ನೀವು ಧೈರ್ಯದಿಂದ, ಹೆದರದೇ ಕೆಲಸ ಮಾಡುವಿರಿ. ನಿಮ್ಮ ವಿರುದ್ಧ ಮಾತನಾಡುವವರಿಗೆ ಯೋಗ್ಯವಾದ ಉತ್ತರವನ್ನು ಕೊಡುವಿರಿ. ಉದ್ಯೋಗದಲ್ಲಿ ವಿಶ್ವಾಸಾರ್ಹವಾಗಿ ಕೆಲಸವನ್ನು ನಿರ್ವಹಿಸಿ. ಯಾರ ಬಗ್ಗೆಯೂ ಪೂರ್ವಾಗ್ರಹಬುದ್ಧಿಯನ್ನು ಬಿಡುವುದು ಒಳ್ಳೆಯದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು.

ವೃಷಭ ರಾಶಿ: ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಕ್ಕಳ ವಿಚಾರವಾಗಿ ಬ್ಯಾಂಕ್ ನಲ್ಲಿ ಸಾಲಮಾಡಬೇಕಾಗಿಬರಬಹುದು. ಮಾಡಬೇಕಾಗಬಹುದು. ಇನ್ನೊಬ್ಬರ ವರ್ತನೆಯಿಂದ ನಿಮ್ಮ ಮನಸ್ಸು ಹಗುರಾಗುವುದು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ತಪ್ಪುಗಳಿದ್ದರೆ ಅದನ್ನು ಒಪ್ಪಿಕೊಂಡು ಮುನ್ನಡೆಯಿರಿ. ಬರಲಿರುವ ಜವಾಬ್ದಾರಿಯನ್ನು ಜಾಣತನದಿಂದ ತಪ್ಪಿಸಿಕೊಳ್ಳುವಿರಿ. ನಿಮ್ಮ ಹೊಣೆಗಾರಿಕೆ ಕಡಿಮೆ ಆದಂತೆ ಅನ್ನಿಸುವುದು. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ.

ಮಿಥುನ ರಾಶಿ: ಹೆಸರಾಂತ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ಇಂದು ನಿಮ್ಮ ಸಂಸಾರದ ಬಗ್ಗೆ ಯಾರ ಬಳಿಯಾದರೂ ಹಂಚಿಕೊಳ್ಳಬಯಸುವಿರಿ. ಬದಲಾವಣೆಯನ್ನು ಇಷ್ಟಪಡಲಿದ್ದೀರಿ ನೀವಿಂದು. ಅವಿವಾಹಿತರಿಗೆ ವಿವಾಹ ಭಾಗ್ಯದ ಸೂಚನೆ ಸಿಗಬಹುದು. ನಿಮ್ಮ ಸಮಯೋಚಿತ ಪೂರ್ವಾಲೋಚನೆಯಿಂದ ನೀವಿಂದು ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಸತ್ಯವನ್ನು ಮುಚ್ಚಿಡಲು ಹೋಗಬೇಡಿ. ಸಹಾಯಕ್ಕೆ ಕೃತಜ್ಞತೆ ಇರಲಿ.

ಕರ್ಕಾಟಕ ರಾಶಿ: ನೇರವಾದ ಮಾತುಗಳಿಂದ ಬೇರೆಯವರಿಗೆ ನೋವುಂಟಾಗಬಹುದು. ಹೇಳಬೇಕಾದುದನ್ನು ಹೇಳುವರೀತಿಯಲ್ಲಿಯೇ ಹೇಳಿ ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳಬಹುದು. ಓರ್ವ ಅಪರಿಚಿತನನ್ನು ನೀವಿಂದು ಪ್ರೀತಿಸಲು ಆರಂಭಿಸುವಿರಿ. ನಿಮ್ಮೊಳಗಿನ ಕಲಾವಿದನ ಪರಿಚಯವಾಗುವುದು. ಪ್ರತ್ಯುತ್ತರಗಳನ್ನು ನೀಡುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದುವ ಮನಸ್ಸು ಮಾಡುವರು. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ಎಲ್ಲ ಸಮಯಕ್ಕೂ ನಿಮಗೆ ಸಹಕಾರ ಸಿಗುತ್ತದೆ ಎಂಬ ಯೋಚನೆ ಬೇಡ.

ಸಿಂಹ ರಾಶಿ; ನಿಮ್ಮ ವಿವಾಹದ ಪ್ರಸ್ತಾಪವು ನಿಮಗೆ ಖುಷಿ ಕೊಡುವುದು. ಇಂದು ಏಕಾಗ್ರತೆಯ ಕೊರತೆ ಕಾಣಿಸಲಿದೆ. ವಿವಾಹಕ್ಕೆ ಸಂಬಂಧಿಸಿದಂತೆ ಬೇಸರವಾಗಿ ಮನೆಯಲ್ಲಿ ಕಲಹವು ಆಗಬಹುದು. ನಿಮ್ಮ ಮಾತಿನಿಂದ ಮನೆಯವರಲ್ಲಿ ಆತಂಕದ ವಾತಾವರಣವೂ ಸೃಷ್ಟಿಯಾಗಬಹುದು. ನಿಮಗೆ ಸಂಬಂಧಿಸಿದ ವಿಚಾರಗಳಿಗೆ ಮಾತ್ರ ನಿಮ್ಮ ವ್ಯವಹಾರಗಳಿರಲಿ. ತುರ್ತು ಕೆಲಸಗಳೂ ನಿಧಾನಗತಿಯಲ್ಲಿ ಸಾಗಲಿವೆ. ಮಿತ್ರರಿಂದ ಆಪತ್ಕಾಲದಲ್ಲಿ ಸಹಕಾರ ಸಿಗಲಿದೆ. ಉದ್ಯೋಗದ ಹುಡುಕಾಟಕ್ಕೆ ಓಡಾಡುವುದು ನಿಮಗೆ ಕಷ್ಟವಾದೀತು.

ಕನ್ಯಾ ರಾಶಿ: ನಿಮ್ಮ ಮೇಲಧಿಕಾರಿಗಳನ್ನು ನಿಮ್ಮ ಕಡೆಗೆ ಇರುವಂತೆ ನೋಡಿಕೊಳ್ಳುವಿರಿ. ಯಾವುದಕ್ಕೂ ಪ್ರಯಾಣದಲ್ಲಿ ಜಾಗರೂಕರಾಗಿ. ನಡೆದಾಡುವಾಗಲೂ ಸುತ್ತ ನೋಡಿಕೊಂಡು ಹೆಜ್ಜೆ ಇಡಿ. ಪ್ರಭಾವೀ ವ್ಯಕ್ತಿಗಳು ನಿಮ್ಮ ಜೊತೆ ಸಲಹೆಗೆ ಬರಬಹುದು. ನಿರಪರಾಧಿಯಾಗಲು ಸಮಯವನ್ನೂ ತೆಗದೆಕೊಳ್ಳಬೇಕಾದೀತು. ವಸ್ತ್ರಗಳ ಖರೀದಿಯಲ್ಲಿ ನೀವು ಮಗ್ನರಾಗುವಿರಿ. ನಿಮ್ಮ ಸ್ಥಾನವನ್ನು ಕಳೆದುಕೊಳ್ಳುವುದು ಬೇಡ. ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಿ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು.

ತುಲಾ ರಾಶಿ: ನಿಮ್ಮೊಳಗೆ ಹತ್ತಾರು ದ್ವಂದ್ವಗಳು ಇರಲಿವೆ. ಆಯ್ಕೆ ಮಾಡಿಕೊಳ್ಳುವುದು ಕಷ್ಟವಾದೀತು. ಹೊಸ ಕೆಲಸದಲ್ಲಿ ಗೊಂದಲಗಳು ಇರಬಹುದು. ಉನ್ನತ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ. ಕಾರ್ಯಗಳನ್ನು ಹಿಂಜರಿಕೆ ಇಲ್ಲದೇ ಮಾಡುವಿರಿ. ಪ್ರದರ್ಶನ. ಹಿರಿಯರ, ಅನುಭವಿಗಳ ಮಾರ್ಗದರ್ಶನವನ್ನು ಪಡೆಯಿರಿ. ಹೆಚ್ಚಿನ ಆದಾಯವು ಅನಿವಾರ್ಯವಾಗಿದ್ದು, ಆದಾಯದ ಮೂಲವನ್ನು ಹುಡುಕುವಿರಿ. ನಿಮ್ಮ ಸ್ವಭಾವವು ಇತರರಿಗೂ ಗೊತ್ತಾದೀತು. ನಿಮ್ಮ ಗೌರವಕ್ಕೆ ತೊಂದರೆಯಾಗುವುದು.

ವೃಶ್ಚಿಕ ರಾಶಿ: ಸ್ವಾವಲಂಬಿಯಾಗಲು ಎಲ್ಲ ರೀತಿಯಿಂದ ಪ್ರಯತ್ನಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ. ನಿಮ್ಮ ಉದ್ದೇಶಗಳನ್ನು ಬಿಟ್ಟುಕೊಡಬೇಡಿ. ಅದಕ್ಕೆ ಅಡ್ಡಗಾಲು ಹಾಕಿಯಾರು. ನೀವು ಏನನ್ನಾದರೂ ಪಡೆಯಲು ಪ್ರಯತ್ನಿಸಲೇ ಬೇಕು. ಪ್ರಾಮಾಣಿಕತೆ ಬೆಲೆ ಸಿಗಲಾರದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಶಿಸ್ತಿನ ಹಾಗೂ ವೇಗದ ಕೆಲಸವನ್ನು ಕಂಡು ಪ್ರಶಂಸಿಸುವರು. ಅಗ್ಗದ ಬೆಲೆಗೆ ವಸ್ತುವನ್ನು ಕೊಂಡು ಹಾಳು ಮಾಡಿಕೊಳ್ಳುವಿರಿ.

ಧನು ರಾಶಿ: ಮಕ್ಕಳಿಂದ ನಿಮಗೆ ಸಂತೋಷಕರವಾದ ವಾರ್ತೆಯು ಸಿಗಲಿದೆ. ಉದ್ಯೋಗದ ಸ್ಥಾನದಲ್ಲಿ ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳನ್ನು ನಿಮಗಾಗದವರು ಹರಡುವರು. ಸಾಹೋದರ್ಯ ಅಧಿಕ ಕಾಲ ಉಳಿಯದು. ಯಾವುದಾದರೂ ಸುಂದರ ಪ್ರದೇಶಕ್ಕೆ ಹೋಗಬೇಕಾಗಿಬರಬಹುದು. ಪ್ರಯಾಣದಲ್ಲಿ ಆದ ಪರಿಚಯವು ಮುಂದುವರಿಯುವುದು. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಬಹುದು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು.

ಮಕರ ರಾಶಿ: ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ. ನೀವು ಇಂದು ಸಾಲವನ್ನು ಪಡೆಯಲು ಮಾಡಿದ ಪ್ರಯತ್ನವು ಯಶಸ್ವಿಯಾಗುವುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡುವುದು ಒಳ್ಳೆಯದು. ಭೂಮಿಯ ವ್ಯವಹಾರದಲ್ಲಿ ನಷ್ಟವಾಗಬಹುದು. ಯಾವುದ ಇಷ್ಟವಾಗದೋ ಅದೇ ಪತನಕ್ಕೆ ಕಾರಣವಾಗಲಿದೆ. ಮಾಡಿದ ಕೆಲಸಕ್ಕೆ ಕೂಡಲೆ ಫಲ ಸಿಗಬೇಕು ಎನ್ನುವ ವೇಗದಿಂದ ಹೊರಬರುವುದು ಉತ್ತಮ. ಉದ್ಯಮಿಗಳ ಜೊತೆ ಇಂದು ಕಾಲ ಕಳೆಯುವಿರಿ.

ಕುಂಭ ರಾಶಿ: ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ಯಾವುದು ಎಷ್ಟು ಪ್ರಾಮುಖ್ಯ ಎಂಬ ಆಲೋಚನೆ ಇರಲಿ. ಕೊಟ್ಟ ಜವಾಬ್ದಾರಿಯನ್ನು ಶಕ್ತಿಮೀರಿ ಪ್ರಯತ್ನಿಸುವಿರಿ. ಅತಿಯಾದ ನಿಂದನೆಯನ್ನು ಸಹಿಸಲಾರಿರಿ. ನಿಮ್ಮ ಗುರಿಯ ಸಾಧನೆಗೆ ಆಲಸ್ಯ ಅಡ್ಡಿಯಾಗಬಹುದು. ಹಣಕಾಸಿನಲ್ಲಿ ಸುಧಾರಣೆಯನ್ನು ಮಾಡಿಕೊಳ್ಳಲು ಮಾರ್ಗಗಳನ್ನು ಹುಡುಕುವಿರಿ. ಮನೆಯ ಸದ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ.

ಮೀನ ರಾಶಿ: ತಪ್ಪುಗಳ ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆ ಇಲ್ಲ. ನಿಮ್ಮವರಿಂದ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಸಲಹೆಗಳು ಬರಬಹುದು. ಹಿರಿಯರ ಬಗ್ಗೆ ಗೌರವದ ಮಾತುಗಳನ್ನಾಡಿ, ಅಪಮಾನವಾಗಲು ಬಿಡಬೇಡಿ. ಇತರರು ನಿಮ್ಮ ಕುರಿತು ಸಲ್ಲದ ಮಾತುಗಳನ್ನು ಆಡಬಹುದು. ಪ್ರತ್ಯುತ್ತರವನ್ನು ಕೊಡುವ ಅವಶ್ಯಕತೆಯಿಲ್ಲ. ದಾಕ್ಷಿಣ್ಯದಿಂದ ಪಡೆದುಕೊಳ್ಳಬೇಕಾದುದನ್ನು ಪಡೆದುಕೊಳ್ಳಲಾರಿರಿ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ.

ಲೋಹಿತ್ ಹೆಬ್ಬಾರ್ – 8762924271 (what’s app only)

Source link

Leave a Reply

Your email address will not be published. Required fields are marked *