ದಿನ ಭವಿಷ್ಯ: ಇಂದು ಈ ರಾಶಿಯವರು ಕೋಪಗೊಂಡು ಸಿಗಬೇಕಾದ ಸ್ಥಾನವನ್ನು ಅನುಭವಿಸಲಾರಿರಿ… – Kannada News | Daily Horoscope for July 04, 2026: Uttarayan Greeshma season, Jyeshtha Masa Krishna Paksha Sunday astrology prediction

ಮೇಷ ರಾಶಿ:

ನಿಮ್ಮ ಇಷ್ಟದ ಆಯ್ಕೆ ವಿಚಾರದಲ್ಲಿ ನೀವು ಸೋಲಬಹುದು. ಕಹಿ ನೆನಪು ಕಾಡಲಿದೆ. ಸಂಗಾತಿಯ ಜೊತೆ ವಾಸ್ತವದ ಬಗ್ಗೆ ಆಲೋಚಿಸಿ. ಹೂಡಿಕೆಯಲ್ಲಿ ನಂಬಿಕೆ ಹೆಚ್ಚಾಗುವುದು. ಹೊಸ ವ್ಯವಹಾರ ಪ್ರಾರಂಭಿಸಲು ದಿನ ಲಾಭದಾಯಕ. ಸ್ನೇಹಿತರೊಂದಿಗೆ ಸಮಯ ಕಳೆಯುವುದು ಉಲ್ಲಾಸ ತರಬಹುದು. ನಿಮ್ಮ ಧ್ವನಿ ಸಾರ್ವಜನಿಕ ಕಾರ್ಯಕ್ಕೆ ಉಪಯೋಗವಾಗಲಿದೆ. ದಿನದ ಮೊದಲಾರ್ಧದಲ್ಲಿ ನಿರ್ಣಯಗಳಲ್ಲಿ ನಿಶ್ಚಿತತೆ ಇರಲಿ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು.

ವೃಷಭ ರಾಶಿ:

ಶತ್ರುಗಳ ಕಾಟಕ್ಕೆ ಪೂರ್ಣವಿರಾಮ ಬೇಕಾಗಿದೆ. ಮಾನಸಿಕವಾಗಿ ಅವರು ನಿಮಗೆ ಇಂದು ತೊಂದರೆಯನ್ನು ಕೊಡಬಹುದು. ಕುಟುಂಬದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಕಲಹಗಳು ಆಗಬಹುದು. ಬುದ್ದಿವಂತಿಕೆಯ ಸಹಾಯದಿಂದ ಸಮಸ್ಯೆಗಳನ್ನು ಪರಿಹರಿಸಬಲ್ಲಿರಿ. ಹಳೆಯ ಚಿಕ್ಕ ವಿಷಯ ಈಗ ದೊಡ್ಡ ವಿವಾದಕ್ಕೆ ಕಾರಣವಾಗಬಹುದು, ಎಚ್ಚರಿಕೆಯಿಂದಿರಿ. ಮಕ್ಕಳ ಬಗೆಗಿನ ಕಾಳಜಿ ಹೆಚ್ಚಾಗುವುದು. ಕೈಲಾಗದ್ದನ್ನು ಮಾಡುವ ಉತ್ಸಾಹ ಬೇಡ. ಆಸೆಯಿಂದ ಕಳೆದುಕೊಳ್ಳುವುದು ಹೆಚ್ಚಾಗಬಹುದು.

ಮಿಥುನ ರಾಶಿ:

ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ನೀವು ಸೋಲಬಹುದು. ದೇಹದಲ್ಲಿ ಸೌಖ್ಯವಿಲ್ಲದ ಭಾವನೆ ಉಂಟಾಗಬಹುದು. ಕೆಲ ಕಾಲ ಮನೋಭಾವ ಕುಂಠಿತವಾಗಿರಬಹುದು. ಮಧ್ಯಾಹ್ನದ ಬಳಿಕ ಕೆಲಸಗಳು ಸರಿದೂಗುತ್ತವೆ. ನಿಮ್ಮ ಬಗ್ಗೆ ವಿನೋದದ ಮಾತಿಗಳನ್ನಾಡುವರು. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ವಿಶೇಷ ಸಂದರ್ಭದಲ್ಲಿ ಭಾಗವಹಿಸಲಿದ್ದೀರಿ. ಅದೇ ನಿಮ್ಮ ತಲೆಯನ್ನು ದಿನವಿಡೀ ಕೊರೆಯಬಹುದು.

ಕರ್ಕಾಟಕ ರಾಶಿ:

ಗೊತ್ತಿದ್ದೂ ಉದ್ವೇಗದಲ್ಲಿ ಸಿಕ್ಕಿಕೊಳ್ಳಬೇಡಿ. ಹಿರಿಯರ ಜೊತೆ ಮಾತನಾಡುವಾಗ ಹಿಡಿತವಿರಲಿ. ಆಧ್ಯಾತ್ಮಿಕ ಪ್ರಗತಿ ಮಾರ್ಸಾಧ್ಯ. ವಿದ್ಯಾರ್ಥಿಗಳಿಗೆ ಎಚ್ಚರಿಕೆಯಿಂದ ಸಮಯ ಬಳಕೆ ಅಗತ್ಯ. ಕೆಲವು ಅಸಹಜ ಘಟನೆಗಳಿಂದ ಆತಂಕ ಉಂಟಾಗಬಹುದು. ಹಣಕಾಸಿನ ನಿರ್ವಹಣೆಯಲ್ಲಿ ಯುಕ್ತಿ ಅವಶ್ಯ. ಅಪವಾದದಿಂದ ನೀವು ಚುರುಕಾಗುವಿರಿ. ಆತ್ಮೀಯತೆಯು ಬದಲಾಗಬಹುದು. ನಿಮ್ಮವರನ್ನು ನೀವು ಬಿಟ್ಟುಕೊಡಲಾರಿರಿ. ನಿಮ್ಮ ಕೆಲಸವು ನಿಮಗೆ ತೃಪ್ತಿಕರವಾಗಿ ಇರಲಿದೆ.

ಸಿಂಹ ರಾಶಿ:

ಅನಗತ್ಯ ಓಡಾಟದಿಂದ ಶರೀರಕ್ಕೆ ಆಯಾಸವಾಗಬಹುದು. ವ್ಯವಸ್ಥಿತ ರೀತಿಯಿಂದ ಆಸ್ತಿಯ ಹಂಚಿಕೆಯನ್ನು ಮಾಡಿಕೊಳ್ಳಿ. ಮಾತು ಜವಾಬ್ದಾರಿಯಿಂದ ಕೂಡಿರಲಿ. ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಕೆಲಸದಲ್ಲಿ ಹೆಚ್ಚುವರಿ ಹೊಣೆಗಾರಿಕೆ ಬರುವ ಸಾಧ್ಯತೆ. ಅನೇಕ ಕ್ಷೇತ್ರಗಳಲ್ಲಿ ಬೆಳೆಯಬೇಕು ಎಂಬ ತುಡಿತ ಉಂಟಾಗಬಹುದು. ಯಾರ ಜೊತೆ ಸ್ಪರ್ಧೆಗೆ ಇಳಿಯದೇ ನಿಮ್ಮ ಕೆಲಸವನ್ನು ಮುಂದುರಿಸುವುದು ಉತ್ತಮ.

ಕನ್ಯಾ ರಾಶಿ:

ಉದ್ಯೋಗವನ್ನು ಬದಲಿಸುವುದು ನಿಮಗೆ ನಿತ್ಯದ ಕೆಲಸದಂತೆ ಸಲೀಸಾಗಬಹುದು. ಒಂದೇ ಉದ್ಯೋಗವನ್ನು ಹೆಚ್ವು ಕಾಲ ಮಾಡಲು ಇಷ್ಟ ಪಡದೇ ಬದಲಿಸುವಿರಿ. ಮೂರನೇ ವ್ಯಕ್ತಿಗಳ ಮಾತನ್ನು ನಂಬಿ ಮೋಸಹೋಗುವಿರಿ. ಒತ್ತಡ ಇರಬಹುದು ಆದರೆ ತಾಳ್ಮೆಯಿಂದ ಜಯಿಸಬಹುದು. ವಾದವಿವಾದಗಳಲ್ಲಿ ತಾಳ್ಮೆ ಉಳಿಸಿ. ಜೀವನ ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಬಹುದು. ಸಂಧಿಗಳಲ್ಲಿ ನೋವುಗಳು ಹೆಚ್ಚಾಗಬಹುದು. ನಿಷ್ಕಾಳಜಿ ಮಾಡಬೇಡಿ.

ಇದನ್ನೂ ಓದಿ: ಜುಲೈ 2026 ಮಾಸ ಭವಿಷ್ಯ: ಈ ರಾಶಿಯ ಜನರಿಗೆ ಪರಿವರ್ತನಾ ಯೋಗ; ಜುಲೈ ತಿಂಗಳಲ್ಲಿ ಶುಭವೋ ಶುಭ

ತುಲಾ ರಾಶಿ:

ವೈದ್ಯಕೀಯ ವೃತ್ತಿಯಲ್ಲಿ ಚುರುಕುತನ ಬೇಕಾಗಬಹುದು. ಕುಟುಂಬದಲ್ಲಿ ಮಂಗಲ ಕಾರ್ಯಗಳು ನಡೆಯಬಹುದು. ಸಂಗಾತಿಯ ಮಾತನ್ನು ಆಲಿಸಿ, ಇಲ್ಲವಾದರೆ ಸಿಟ್ಟಾದಾರು. ಕೆಲಸದಲ್ಲಿ ಚುರುಕು ಮತ್ತು ಸ್ಪಷ್ಟತೆ ಅಗತ್ಯ. ಇತ್ತೀಚಿನ ಯಾವುದೇ ತೀರ್ಮಾನವು ಪರಿಶೀಲನೆ ಅಗತ್ಯವಿದೆ. ಹಣಕಾಸಿನಲ್ಲಿ ನಿರೀಕ್ಷಿತ ಲಾಭದೊರೆಯಬಹುದು. ಪೋಷಕರ ಆರೋಗ್ಯಕ್ಕೆ ಆರೈಕೆ ಅವಶ್ಯ. ಆರ್ಥಿಕವಾದ ಕೆಲವು ವಿಚಾರಗಳಲ್ಲಿ ಗೌಪ್ಯತೆಯನ್ನು ಇಟ್ಟುಕೊಳ್ಳುವಿರಿ‌.

ವೃಶ್ಚಿಕ ರಾಶಿ:

ಸಹೋದ್ಯೋಗಿಗಳಿಂದ‌ ಕಛೇರಿಯಲ್ಲಿ ನಿಮಗೆ ಒತ್ತಡ ಪರಿಸ್ಥಿತಿ ಬರಬಹುದು. ಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬಳಸಿದರೆ ಯಶಸ್ಸು ಖಚಿತ. ಹಠ ಅಥವಾ ಜಿದ್ದು ದಾಂಪತ್ಯದಲ್ಲಿ ಅಸಮಾಧಾನ ತರಬಹುದು. ಹಣಕಾಸು ಸ್ಥಿತಿಯು ಸ್ಥಿರವಾಗಿರಲಿದೆ. ಹಿರಿಯರ ಸಲಹೆಗೆ ಕಿವಿಗೊಡಿ. ನಿಮ್ಮ ಆಪ್ತವಲಯವು ಇನ್ನೂ ದೊಡ್ಡದಾಗಬಹುದು. ಸಣ್ಣ ವಿವಾದಗಳು ಆಗಬಹುದು.‌ ಅಲ್ಲಿಯೇ ಬಗೆಹರಿಸಿಕೊಳ್ಳಿ. ದೊಡ್ಡ ಮಾಡಿಕೊಳ್ಳುವುದು ಬೇಡ.

ಧನು ರಾಶಿ:

ಗೌಪ್ಯತೆಯನ್ನು ನೀವು ಕಾಪಾಡಿಕೊಳ್ಳಲಿದ್ದೀರಿ. ನೆರೆಹೊರೆಯವರು ನಿಮ್ಮ ಮನೆಗೆ ಬರಬಹುದು. ನಿಮ್ಮ ಪ್ರಯತ್ನಗಳು ಗುರುತು ಕಾಣುವ ದಿನ. ಮಿತ್ರರ ಸಹಕಾರದಿಂದ ಕೆಲಸ ಸುಲಭವಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತನೆ ಬದಲಾಗಬಹುದು. ಯಾರಿಂದಲಾದರೂ ಏನನ್ನಾದರೂ ಪಡೆಯುವಾಗ ವಿನಯವು ಇರಲಿ. ಅತಿಯಾದ ಆಲಸ್ಯದಿಂದ ಮನೆಯ ಕೆಲಸಗಳು ಹಾಗೆಯೇ ಉಳಿದುಕೊಳ್ಳಬಹುದು. ದೂರದ ಪ್ರಯಾಣವನ್ನು ಅಪೇಕ್ಷಿಸುವಿರಿ.

ಮಕರ ರಾಶಿ:

ಮನೆಯಿಂದ ದೂರ ಉದ್ಯೋಗದ ನಿಮಿತ್ತ ಇರಬೇಕಾಗಿ ಬರಬಹುದು. ಕೌಟುಂಬಿಕ ಚರ್ಚೆಗಳಲ್ಲಿ ತಾಳ್ಮೆಯಿಂದ ಪ್ರತಿಕ್ರಿಯಿಸಿ. ಆರ್ಥಿಕವಾಗಿ ಏರುಪೇರು ಆಗಬಹುದು. ಹೊಸ ಖರೀದಿಗೆ ದಿನ ಸೂಕ್ತವಲ್ಲ. ಸ್ನೇಹಿತರ ಮಾತುಗಳಲ್ಲಿ ಸತ್ಯತೆ ಇಲ್ಲದಿರುವ ಸಾಧ್ಯತೆ. ಅಸ್ತಿ ಸಂಬಂಧ ಕಾನೂನು ವ್ಯವಹಾರ ನೋಡಿಕೊಳ್ಳಿ. ಸಂಗಾತಿಯನ್ನು ಜೊತೆ ಹೊಸ ಉದ್ಯಮವನ್ನು ಆರಂಭಿಸುವ ಹುನ್ನಾರ ನಡೆಯಲಿದೆ. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ.

ಕುಂಭ ರಾಶಿ:

ಹಲವು ವಿಚಾರಕ್ಕೆ ಮನಸ್ಸು ಕೆಡುವುದು ಬಿಟ್ಟರೆ ಮತ್ತೇನೂ ಆಗದು. ಯಾರ ಮಾತನ್ನೂ ಕೇಳದೇ ಹಣ ಹೂಡಿಕೆ‌ ಮಾಡಿ ಕಳೆದುಕಳ್ಳುವಿರಿ. ಹಣಕಾಸು ವಿಷಯದಲ್ಲಿ ಲಾಭದ ಸೂಚನೆಗಳಿವೆ. ಹಳೆಯ ಸ್ನೇಹಿತರಿಂದ ಸಂಪರ್ಕ ಬರಬಹುದು. ಕೆಲಸದ ಜವಾಬ್ದಾರಿಗಳಿಂದ ದೂರ ಉಳಿಯಲಾಗದು. ಆರೋಗ್ಯ ಸರಾಸರಿ ಇರುತ್ತದೆ. ಭವಿಷ್ಯದ‌ ಕುರಿತು ಆಲೋಚಿಸುವುದು ಉತ್ತಮ. ಉತ್ತಮವಾದುದನ್ನು ಪಡೆಯಲು ಪ್ರಯತ್ನಿಸಿ.

ಮೀನ ರಾಶಿ:

ನಿಮ್ಮ ಬುದ್ಧಿ, ಮನಸ್ಸುಗಳಿಗೆ ಸರಿಯಾದ ಕೆಲಸ ಬೇಕಿದೆ. ಸಂಗಾತಿಯ ಜೊತೆ ಸ್ವಲ್ಪ ಕಾಲ ಕಳೆಯಿರಿ. ಆತ್ಮವಿಶ್ವಾಸವನ್ನು ಬೆಳಸಿಕೊಂಡ ನಿಮಗೆ ಸದಾ ಸಂತೋಷವು ಇರಲಿದೆ. ಆರ್ಥಿಕ ವಿಚಾರದಲ್ಲಿ ಚಿಂತೆ ಇರಬಹುದು, ಆದರೆ ತಾಳ್ಮೆಯಿಂದ ನಿರ್ವಹಿಸಬಲ್ಲಿರಿ. ಕುಟುಂಬದೊಂದಿಗೆ ಸಮಯ ಕಳೆಯುವುದು ಸಂತೋಷ ತರುವದು. ಉದ್ಯೋಗದಲ್ಲಿನ ಒತ್ತಡ ಕಡಿಮೆಯಾಗಬಹುದು. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಭಾನು ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ಆಯುಷ್ಮಾನ್, ಕರಣ : ತೈತಿಲ, ಸೂರ್ಯೋದಯ – 05 – 59 am, ಸೂರ್ಯಾಸ್ತ – 06 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:33 – 18:49, ಯಮಗಂಡ ಕಾಲ 12:24 – 14:00, ಗುಳಿಕ ಕಾಲ 15:37 – 17:33

-ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *