ದಿನ ಭವಿಷ್ಯ: ಇಂದು ಈ ರಾಶಿಯವರು ಸಂಗಾತಿಯ ಬಗ್ಗೆ ಅಪಾರ್ಥ ತಿಳಿದುಕೊಳ್ಳುವರು… – Kannada News | Horoscope 19 Thursday 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಅಧ್ಯಾತ್ಮದಿಂದ ಆತ್ಮಬಲದ ವೃದ್ಧಿ. ಮನೆಯ ವಿಷಮ ಸ್ಥಿತಿಯನ್ನು ನಿಭಾಯಿಸುವಿರಿ. ಸಂಗಾತಿಗೆ ನಿಮ್ಮ ವಾಸ್ತವದ ಉದ್ಯೋಗದ ವಾಸ್ತವ ಚಿತ್ರಣವನ್ನು ಕೊಡುವಿರಿ. ಧಾರ್ಮಿಕ ಶ್ರದ್ಧೆಯಿಂದ ಅನುಕೂಲತೆ ಇರಲಿದೆ. ಮಿತ್ರರ ಧನಸಹಾಯದಿಂದ ವಾಹನವನ್ನು ಖರೀದಿಸುವಿರಿ. ವಿನೀತ ವೇಷವೇ ನಿಮಗೆ ಶೋಭೆ.

ವೃಷಭ ರಾಶಿ:

ಯಾರ ಕಣ್ತಪ್ಪಿಸಿಯೂ ನೀವು ವ್ಯವಹಾರವನ್ನು ಮಾಡಲಾಗದು. ಮಾತಿನಲ್ಲಿ ಮೃದುತ್ವವನ್ನು ಇತರರಿಗೂ ಇಷ್ತವಾದೀತು. ಯಾರಾದರೂ ನಿಮ್ಮ ಕಿವಿಕಚ್ಚಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು. ಲೆಕ್ಕ ಶೋಧಕರು ಹೆಚ್ಚಿನ ಒತ್ತಡದಲ್ಲಿ ಇರುವರು. ಅಪರಿಚಿತರ ಜೊತೆ ಸಲುಗೆಯ ವ್ಯವಹಾರವು ಬೇಡ. ಸಂಗಾತಿಯ ಮಾತು ನಿಮಗೆ ಇಷ್ಟವಾಗದು. ಆದರೆ ನೇರವಾಗಿ ಹೇಳಲು ಧೈರ್ಯ ಸಾಲದು.

ಮಿಥುನ ರಾಶಿ:

ಮಕ್ಕಳು ಹೇಳಿದ್ದನ್ನು ನೀಡುವಿರಿ. ಮಕ್ಕಳ ದುರ್ಬಲ ಮನಸ್ಸಿಗೆ ಸರಿಯಾದ ಮಾರ್ಗದರ್ಶನ ಬೆಂಬಲದ ಅಗತ್ಯವಿದೆ. ಹೊಸ ಉದ್ಯಮದ ಸಲುವಾಗಿ ಉದ್ಯಮಿಗಳನ್ನು ಭೇಟಿ ಮಾಡುವಿರಿ. ಸಾಲವನ್ನು ಮಾಡಬೇಕಾಗಿಬರಬಹುದು. ಅತಿಯಾದ ಆನಂದದ ಮಧ್ಯದಲ್ಲಿ ದುಃಖವೂ ಇದೆ. ಕಛೇರಿಯ ಒತ್ತಡದಿಂದ ವಿರಾಮವನ್ನು ಪಡೆದು ಕುಟುಂಬಕ್ಕೆ ಸಮಯವನ್ನು ಕೊಡುವಿರಿ. ಉದ್ಯೋಗದ ನಿಮಿತ್ತ ಅನಿವಾರ್ಯವಾಗಿ ಓಡಾಟ ಮಾಡುವ ಸಂದರ್ಭವು ಬರಬಹುದು.

ಕರ್ಕಾಟಕ ರಾಶಿ:

ಯಾರದೋ ತಪ್ಪಿನಿಂದ ಅಕಸ್ಮಾತ್ ಆಗಿ ವಾಹನದಿಂದ ಬೀಳುವ ಸಾಧ್ಯತೆ. ಅಧಿಕಾರದ ಆಮಿಷಕ್ಕೆ ಬಲಿಯಾಗಬಹುದು. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಸಂಗಾತಿಯಿಂದ ಹಣವನ್ನು ಕೇಳಿಪಡೆಯುವಿರಿ. ಪಾಲುದಾರಿಕೆಯಿಂದ ನಿಮಗೆ ಉಪಯೋಗವಾಗಲಿದೆ. ಆರ್ಥಿಕತೆಯ ತೊಂದರೆಯಿಂದ ನಿಮ್ಮ ಕೆಲವು ವಸ್ತುಗಳನ್ನು ಮಾರಾಟ ಮಾಡುವಿರಿ. ನಿಮ್ಮ ಅಪ್ರಾಮಣಿಕತೆಯು ಕೆಲವರಿಗೆ ಗೊತ್ತಾಗಬಹುದು.

ಸಿಂಹ ರಾಶಿ:

ಗೌರವವಿಲ್ಲದೆ ಕಡೆ ಹೋಗಲು ನೀವು ಬಯಸುವುದಿಲ್ಲ. ಇನ್ನೊಬ್ಬರಿಗೆ ಸಹಾಯ ಮಾಡಲು ಕೂಡಿಟ್ಟ ಹಣವನ್ನು ತೆಗೆಯಬೇಕಾದೀತು. ನಿಗದಿತ ಸಮಯಕ್ಕೆ ಕೆಲಸವಾಗದೇ ಇರುವ ಕಾರಣ ಕೆಲಸವನ್ನು ಕೊಟ್ಟವರು ನಿಮ್ಮ ಮೇಲೆ ಮುನಿಸಿಕೊಂಡಾರು. ನಿಮ್ಮ ಸಂಗಾತಿಯ ಮಾತುಗಳಿಗೆ ಪ್ರಾಮುಖ್ಯತೆ ನೀಡಿ. ನಿಮ್ಮ ಕಾರಣದಿಂದಲೇ ನೊಂದಿರಲೂ ಸಾಕು. ಆಲಸ್ಯದ ಕಾರಣ ಇಂದು ಕಛೇರಿಗೆ ವಿಳಂಬವಾಗಿ ಹೋಗುವಿರಿ. ಹೊಸ ವಿಚಾರಗಳ ಕಲಿಕೆಗೆ ಅವಕಾಶಗಳು ಸಿಗುವುದು. ವ್ಯಾಪಾರವನ್ನು ಹೆಚ್ಚಿನ ಆದಾಯ ಬರುವಂತೆ ಮಾಡಿಕೊಳ್ಳುವಿರಿ.

ಕನ್ಯಾ ರಾಶಿ:

ಅಶಿಸ್ತಿನಿಂದ ನಿಮಗೆ ಕೆಟ್ಟ ಹೆಸರು ಬರಬಹುದು. ಸಂಕುಚಿತ ಸ್ವಭಾವವನ್ನು ದೂರ ಮಾಡಿಕೊಳ್ಳುವುದು ಉತ್ತಮ. ನಿಮ್ಮದಾದ ಕಾರ್ಯದಲ್ಲಿ ನೀವು ತೊಡಗಿಗೊಳ್ಳಿ. ಹಣಕಾಸಿನ ಅನುಕೂಲತೆಗಳನ್ನು ನೋಡಿ ಮಾತುಕೊಡಿ. ಖಾಲಿ ಇರುವುದು ಬೇಡ. ವಾಹನ ಸಂಚಾರದಲ್ಲಿ ಅಡಚಣೆ ಆಗಲಿದೆ. ಪುಣ್ಯ ಸ್ಥಳಗಳ ದರ್ಶನದಿಂದ ಮನಸ್ಸಿಗೆ ಸಮಾಧಾನ. ಸಹೋದ್ಯೋಗಿಯ ಅಸಹಕಾರದಿಂದ ಅವರ ಮೇಲೆ ದ್ವೇಷ. ಆಕಸ್ಮಿಕವಾಗಿ ನಿಮಗೆ ಧನನಷ್ಟವಾಗಲಿದ್ದು ಚಿಂತೆ ಕಾಡುವುದು. ನಿಮ್ಮ ಸಣ್ಣ ತಪ್ಪೂ ಅಪಹಾಸ್ಯಕ್ಕೀಡಾಗುವುದು.

ತುಲಾ ರಾಶಿ:

ವ್ಯಾಪಾರಸ್ಥರು ಹೊಸತನ್ನು ಮಾಡಲು ಇಚ್ಛಿಸುವಿರಿ. ಈಗಿನ ಪರಿಸ್ಥಿತಿಯಲ್ಲಿ ಬದಲಾವಣೆ ಬೇಕೆನಿಸುವುದು. ನಿಮ್ಮ ಶ್ರಮದ ಬಗ್ಗೆ ಕಹಿಯಾದ ಮಾತುಗಳು ಕೇಳಿಬರಬಹುದು. ಇಂದು ಯಾರನ್ನೂ ನಂಬುವ ಸ್ಥಿತಿಯಲ್ಲಿ ನೀವು ಇರಲಾರಿರಿ. ಸಾಮಾಜಿಕ ಕಾರ್ಯದಲ್ಲಿ ಅವಮಾನದ ಕಾರಣದಿಂದ ಅದನ್ನು ಮಾಡಲು ಹಿಂದೇಟು ಹಾಕುವಿರಿ. ವಿವಾಹವಾದರೂ ಭವಿಷ್ಯದ ಬಗ್ಗೆ ನಕಾರಾತ್ಮಕ ಆಲೋಚನೆಯು ಇರಲಿದೆ. ನಿಮಗೆ ಅಭದ್ರತೆಯು ಕಾಡಬಹುದು. ಮಕ್ಕಳ ಸಂತೋಷದಲ್ಲಿ ನೆಮ್ಮದಿ ಇರಲಿದೆ. ನಿಮ್ಮ ಗೌಪ್ಯ ಸಂಗತಿಗಳು ಹಂಚಿಕೆಯಾಗುವುದು.

ವೃಶ್ಚಿಕ ರಾಶಿ:

ಬಹಳ ದಿನಗಳಿಂದ ಸ್ಥಗಿತಗೊಂಡ ಕೆಲಸಗಳೂ ಪೂರ್ಣಗೊಳ್ಳುತ್ತವೆ. ಸಣ್ಣ ವ್ಯಾಪಾರಿಗಳು ವ್ಯವಹಾರ ಹೆಚ್ಚಳದ ಬಗ್ಗೆ ಗಮನಹರಿಸಬೇಕು. ಸೌಂದರ್ಯದ ವಿಚಾರದಲ್ಲಿ ಅಸೂಯೆ ತಲೆ ಹಾಕುವುದು. ಬಹಳ ದಿನಗಳಿಂದ ಕಾಣಿಸಿಕೊಳ್ಳದ ನೋವು ಕಾಣಿಸಿಕೊಳ್ಳಬಹುದು. ಧಾರ್ಮಿಕ ಆಚರಣೆಯಲ್ಲಿ ವಿಶ್ವಾಸವು ಕಡಿಮೆಯಾಗಲಿದೆ. ನೀವು ಬಿಟ್ಟರೂ ಸ್ನೇಹಿತರು ನಿಮ್ಮನ್ನು ಬಿಡಲಾರರು. ಸಂಗಾತಿಯು ನಿಮ್ಮನಡೆಯನ್ನು ಅನುಮಾನಸಿಬಹುದು.

ಧನು ರಾಶಿ:

ಅಪಮಾನದಿಂದ ದುರ್ಬಲರಾಗುವ ಸಾಧ್ಯತೆ ಇದೆ. ನೀವು ಉದ್ಯೋಗವನ್ನು ವಿನಮ್ರಭಾವದಿಂದ ನಡೆಸುವಿರಿ. ಮಕ್ಕಳ ಅತಿಯಾದ ಮಾತು ನಿಮಗೆ ಮುಜುಗರ ತಂದೀತು. ದಾಂಪತ್ಯದಲ್ಲಿ ಪರಸ್ಪರ ವಿರೋಧವು ಬರುವಹಾಗಿದ್ದರೂ ಸದ್ಭಾವವನ್ನು ಇಟ್ಟುಕೊಳ್ಳುವುದು ಮುಖ್ಯವಾಗುದು. ಅನಿರೀಕ್ಷಿತ ದೂರಪ್ರಯಾಣದಿಂದ ಖರ್ಚು. ಹಿರಿಯರ ಜೊತೆ ಔಚಿತ್ಯ ರೀತಿಯಿಂದ ವ್ಯವಸ್ಥೆ ವ್ಯವಹರಿಸಿ. ಸ್ತ್ರೀಯರಿಂದ ಅಪಮಾನವಾಗುವ ಸಾಧ್ಯತೆ ಇದೆ. ಕುಟುಂಬದಿಂದ ಅನಾದರಕ್ಕೆ ಒಳಗಾಗುವಿರಿ. ಆಕಸ್ಮಿಕ ಧನಲಾಭವು ನಿಮಗೆ ಆಶ್ಚರ್ಯ ಉಂಟಾಗಬಹುದು.

ಮಕರ ರಾಶಿ:

ಆರ್ಥಿಕತೆಗೆ ಸಂಬಂಧಿಸಿದಂತೆ ಮೈಯೆಲ್ಲ ಕಣ್ಣಾಗಬೇಕಾಗುವುದು. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವಿರಿ. ಸಹೋದ್ಯೋಗಿಗಳ ಜೊತೆ ವಿವಾದವಾಗಬಹುದು. ಪಾಲುದಾರಿಕೆಯಲ್ಲಿ ರಾಜಕೀಯ ಸೇರುವುದು. ಸ್ತ್ರೀಯರಿಗೆ ಪ್ರಯಾಣದಿಂದ ತೊಂದರೆ. ಯಾರದೋ ಪ್ರಭಾವವನ್ನು ಬಳಸಿ ನೀವು ಕೆಲಸವನ್ನು ಮಾಡಿಸಿಕೊಳ್ಳುವಿರಿ. ವ್ಯವಹಾರದಲ್ಲಿ ಮುಗ್ಗರಿಸುವ ಸಂದರ್ಭವು ಬರಬಹುದು. ನಿಮ್ಮ ಮಾತಿನಲ್ಲಿ ಉದ್ಧಟತನ ಕಾಣಿಸುವುದು. ಏನಾದರೂ ಹೇಳಿ ತಪ್ಪಿಸಿಕೊಳ್ಳುವಿರಿ‌.

ಕುಂಭ ರಾಶಿ:

ಹುಮ್ಮನಸ್ಸಿನಿಂದ ಕೆಲವು ಕೆಲಸಗಳನ್ನು ಪೂರ್ಣಗೊಳಿಸಲು ಬಯಸಿ, ಅನಂತರ ಕೆಲವು ಸವಾಲುಗಳನ್ನು ಅನುಭವಿಸುತ್ತಾರೆ. ಅಧಿಕ ಹೂಡಿಕೆಯನ್ನು ಎಲ್ಲಿಯೋ ಮಾಡಿ ನಷ್ಟ ಅಂದುಕೊಂಡಿದ್ದಕ್ಕಿಂತ ಖರ್ಚು ಅಧಿಕವಾಗಿದ್ದು ಗಳಿಕೆಯ ಬಗ್ಗೆ ಆಲೋಚಿಸುವಿರಿ. ಮಾಡಬೇಕು ಎನಿಸಿದ್ದನ್ನು ಹೇಳಿಯೇ ತೀರುವಿರಿ. ನಿಯಮ ಭಂಗದಿಂದ ದಂಡ ಬೀಳುವುದು. ಸ್ನೇಹಿತರು ನಿಮ್ಮನ್ನು ದೂರವಿಟ್ಟಾರು. ಸಂಗಾತಿಯ ಅನಾದರವು ನಿಮ್ಮನ್ನು ಬಹಳ ಕಾಡಬಹುದು.

ಮೀನ ರಾಶಿ:

ನೌಕರರು ಇಂದು ಹೆಚ್ಚಿನ ಸೌಲಭ್ಯವನ್ನು ಪಡೆದುಕೊಳ್ಳುವರು. ನಿಮ್ಮ ವಾದವು ವಿಷಯಾಧಾರಿತವಾಗಿರಲಿ, ವ್ಯಕ್ತಿಗತವಾಗುವುದು ಬೇಡ. ಸಮಾನ ಚಿಂತನಶೀಲರ ನಡುವೆ ಸಖ್ಯವಾಗುವುದು. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ಗ್ರಾಹಕರಿಗೆ ನಿಮ್ಮ ಅಸಮಾಧಾನವೂ ಆಗುವುದು. ಇಂದು ಜ್ಞಾನವೃದ್ಧರ ಸೇವೆಗೆ ಅವಕಾಶ ಸಿಗಲಿದೆ. ಅಪಘಾತದಿಂದ ಉಂಟಾದ ನೋವಿನಿಂದ ನಿಧಾನವಾಗಿ ಆಚೆ ಬರಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಧನಿಷ್ಠಾ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ಸಿದ್ಧ, ಕರಣ : ಕೌಲವ, ಸೂರ್ಯೋದಯ – 06 – 47 am, ಸೂರ್ಯಾಸ್ತ – 06 – 29 pm, ಇಂದಿನ ಶುಭಾಶುಭ ಕಾಲ : ರಾಹು 14:06 – 15:34, ಯಮಗಂಡ ಕಾಲ 06:47 – 08:15, ಗುಳಿಕ ಕಾಲ 09:43 – 11:11

-ಲೋಹಿತ ಹೆಬ್ಬಾರ್ – 8762924271 (what’s app only)

Source link

Leave a Reply

Your email address will not be published. Required fields are marked *