ದಿನ ಭವಿಷ್ಯ: ಇಂದು ಈ ರಾಶಿಯವರ ಹೃದಯ ವೈಶಾಲ್ಯ ಎಲ್ಲರಿಗೂ ಅರ್ಥವಾಗಲಿದೆ.. – Kannada News | Daily Horoscope for July 31, 2026: Dakshinayana Greeshma season, Ashada Masa Krishna Paksha Friday astrology Prediction

ಮೇಷ ರಾಶಿ:

ಸಲಹೆಯನ್ನು ಉಚಿತವಾಗಿ ಕೊಡಲು ಹೋಗಿ ಅಪಮಾನವಾಗಬಹುದು. ಸಿಕ್ಕಿದಷ್ಟನ್ನೇ ಸ್ವೀಕರಿಸಿ ತೃಪ್ತಿಪಡಿ. ಆಪತ್ತಿನಲ್ಲಿ ಸಹಾಯ ಮಾಡಲಿಲ್ಲ ಎಲ್ಲರನ್ನೂ ಶಪಿಸುವ ಅವಶ್ಯಕತೆ ಇಲ್ಲ ವಿದ್ಯಾಭ್ಯಾಸದಿಂದ ಲಾಭವಿದೆ ಎಂದು ಅನ್ನಿಸಿ ಶ್ರಮವಹಿಸುವಿರಿ. ವ್ಯವಹಾರಗಳಲ್ಲಿ ಮಾರುಕಟ್ಟೆ ವಿಸ್ತರಿಸಲು ಬಹಳ ಶ್ರಮಪಡುವಿರಿ. ಪ್ರತಿಭೆಯ ಅನಾವರಣವು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ಕಳೆದ ಸಮಯವನ್ನು ನೀವು ಮೆಲುಕು ಹಾಕಿ ಸಮಯ ವ್ಯರ್ಥವಾಗಬಹುದು.

ವೃಷಭ ರಾಶಿ:

ದೈಹಿಕ ಮತ್ತು ಮಾನಸಿಕ ಆಯಾಸದಿಂದ ಪರಿಹಾರ.ವಸಹೋದರರ ಭಿನ್ನಾಭಿಪ್ರಾಯವನ್ನು ಮೂರನೆಯವರು ಸರಿ ಮಾಡುವರು. ಇಂದಿನ ಕೆಲಸಗಳ ಯೋಜನೆ ಬಗ್ಗೆ ಸರಿಯಾದ ದೃಷ್ಟಿ ಇರಲಿ. ದೂರಪ್ರಯಾಣ ಸುಖಕರವಾಗಿ ಇರುವುದು.‌ ಇಂದು ನಿಮಗೆ ಒಡಹುಟ್ಟಿದವರು ಸಾಕಷ್ಟು ವಿರೋಧವನ್ನು ಮಾಡಿಯಾರು. ಸ್ಥಿರಾಸ್ತಿಗೆ ಸಂಬಂಧಿಸಿದ ಸರ್ಕಾರಿ ಕಾನೂನು ತೊಡಕುಗಳು ಇಂದು ನಿವಾರಣೆಯಾಗುವುದು. ಸ್ಪರ್ಧಾತ್ಮಕ ವಿಚಾರದಲ್ಲಿ ಹಿಂದುಳಿಯಬೇಕಾಗುವುದು.

ಮಿಥುನ ರಾಶಿ:

ನಿಮ್ಮ ಮೇಲೆ ಹೆಚ್ಚಿನ ಕಣ್ಣು ಇರುವ ಕಾರಣ ಬಹಳ ಜಾಗರೂಕತೆ ಅವಶ್ಯಕ. ಎಲ್ಲ ಕೆಲಸವನ್ನೂ ಬೇರೆಯವರೇ ಮಾಡಲಿ ಎಂಬ ಮಾನಸಿಕ ಸ್ಥಿತಿಯನ್ನು ಬಿಡುವುದು ಒಳ್ಳೆಯದು. ನಿಮಗೆ ಸಾಧ್ಯವಾದ ಕೆಲಸಗಳನ್ನು ಮಾಡಿ. ಭೂಮಿಯ ವ್ಯವಹಾರದವರಿಗೆ ನಂಬಿಕೆ ದ್ರೋಹ ಆಗಬಹುದು. ವೈವಾಹಿಕ ಜೀವನದ ಬಗ್ಗೆ ಮಾತನಾಡುತ್ತಾ ಹಳೆಯದನ್ನು ನೆನಪಿಸಿಕೊಳ್ಳುವಿರಿ. ಚಿಂತನೆಯ ಜೊತೆ ನಿಮ್ಮ ಮುಂದಿನ ಹೆಜ್ಜೆ ಇರಲಿ. ಶಿಸ್ತಿಗೆ ಹೆಚ್ಚು ಗಮನವನ್ನು ಇಂದು ಕೊಡುವಿರಿ.

ಕರ್ಕಾಟಕ ರಾಶಿ:

ಭಿನ್ನಮತವನ್ನು ನೀವು ಇಂದೇ ಉಪಶಮನ ಮಾಡಿಕೊಳ್ಳುವುದು ಉತ್ತಮ. ಭೂಮಿಯ ಉತ್ಪನ್ನದ ವ್ಯವಹಾರವು ಬಹಳ ಚೆನ್ನಾಗಿ ಆಗಬಹುದು. ಸರ್ಕಾರದಿಂದ ಬರಬೇಕಾದ ಹಣವು ಬಂದು ಸಾಲದಿಂದ ನೀವು ಮುಕ್ತವಾಗುವಿರಿ. ಯಾವುದೇ ದುರಭ್ಯಾಸವು ನಿಮಗೆ ಕೆಟ್ಟ ಹೆಸರನ್ನು ತರಬಹುದು. ಸಾಹಸಪ್ರಿಯರಿಗೆ ಹೊಸ ವಿಚಾರಗಳು ಬರಬಹುದು. ಪ್ರೇಮ ಜೀವನದಲ್ಲಿ ಪ್ರೀತಿ ಹೆಚ್ಚಾಗಿ ಉತ್ಸಾಹದಿಂದ ಇರುವಿರಿ.

ಸಿಂಹ ರಾಶಿ:

ಸ್ನೇಹಿತರಿಗೆ ಮಾಡಿದ ಸಹಾಯದಿಂದ ನಿಮಗೆ ಅನುಕೂಲವಗಲಿದೆ. ಉನ್ನತ ಅಧಿಕಾರಿಗಳಿಗೆ ಮುಂಬಡ್ತಿ ದೊರೆಯುವ ಸಾಧ್ಯತೆ ಇದೆ. ವಾಹನ ಚಾಲನೆ ವೇಳೆ ಅವಸರ ಬೇಡ. ಖರ್ಚನ್ನು ನಿಭಾಯಿಸುವುದು ನಿಮಗೆ ಬಹಳ ಕಷ್ಟವಾದೀತು. ನಿಮ್ಮ ಉಪಕಾರವೇ ನಿಮಗೆ ಹಿಂದಿರುಗಿ ಬರಲಿದೆ. ಬಂಧುಗಳ ಚರಾಸ್ತಿಯು ಸಿಗಬಹುದು. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ ಕಾರಣ ಸಿಟ್ಟಾಗಬಹುದು. ಆದಾಯದ ಮೂಲಗಳು ಹೆಚ್ಚಾಗುವುದು.‌

ಕನ್ಯಾ ರಾಶಿ:

ಇಂದು ಮಹಿಳೆಯರಿಗೆ ವೃತ್ತಿಯಲ್ಲಿ ಕಿರಿಕಿರಿ ಉಂಟಾಗಲಿದೆ. ಇಂದಿನ ನಿಮ್ಮ ಕೋಪವನ್ನು ಶಾಂತ ಮಾಡಲು ಸಂಗಾತಿಯು ಶ್ರಮಪಡಬಹುದು. ನಿಮ್ಮ ಮನಸ್ಸು ಅತಿ ಚಾಂಚಲ್ಯದಿಂದ ಇರಲಿದ್ದು, ಕೆಲಸವು ಹಾಳಾಗಬಹುದು. ಮಹಿಳೆಯರು ಸಕಾರಾತ್ಮಕ ಚಿಂತನೆಯತ್ತ ಗಮನಕೊಡುವುದು ಉತ್ತಮ. ಅತಿಯಾದ ಆಡಂಬರವು ಇತರ ಕಣ್ಣು ಕುಕ್ಕುವುದು. ಇನ್ನೊಬ್ಬರ ಅಹಂಕಾರಕ್ಕೆ ಸೊಪ್ಪು ಹಾಕುವುದು ಬೇಡ.

ತುಲಾ ರಾಶಿ:

ನಿಮ್ಮ ಕ್ಷಣಿಕ ಕೋಪವೇ ಎಲ್ಲರ ಕೆಂಗಣ್ಣಿಗೆ ಗುರಿಯಾಗುವುದು. ಇಂದು ನಿಮ್ಮ ಸಮಾಜಮುಖೀ ಕಾರ್ಯಗಳಿಗೆ ಗೌರವ, ಪ್ರಶಂಸೆಗಳು ಸಿಗಲಿವೆ. ನೆರೆ-ಹೊರೆಯವರನ್ನು ಚೆನ್ನಾಗಿ ಇಟ್ಟುಕೊಳ್ಳಿ. ನಿಮ್ಮ ಕಾರ್ಯಕ್ಕೆ ವಿದೇಶದಿಂದ ಕರೆ ಬರಬಹುದು. ಕೃಷಿಯು ನಿಮಗೆ ಆಸಕ್ತಿಯ ವಿಷಯವಾಗಿದ್ದು ತೊಡಗಿಕೊಳ್ಳಲು ತೊಡಕುಗಳು ಇರಲಿದೆ. ನೀವು ತೆರಿಗೆಯ ವಿಚಾರದಲ್ಲಿ ಸರಿಯಾಗಿ ಇರಬೇಕಾಗಬಹುದು. ಹಿರಿಯರ ಮಾತನ್ನು ತಾತ್ಸಾರ ಮಾಡುವುದು ಬೇಡ. ಮಾತನ್ನು ಕಡಿಮೆ ಮಾಡಿ ಕಾರ್ಯದಲ್ಲಿ ತೋರಿಸಿ.

ವೃಶ್ಚಿಕ ರಾಶಿ:

ನಿಮ್ಮ ಹೆಸರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುವಿರಿ. ನೀವು ಅಂದುಕೊಂಡಿದ್ದು ಮಾತ್ರ ಸತ್ಯವಾಗಲಾರದು. ಅದಕ್ಕಿರುವ ಮುಖವನ್ನು ಗಮನಿಸಿ ತೀರ್ಮಾನಿಸಿ. ಸಾಲವಾಧೆ ಎದುರಾಗಲಿದ್ದು ಸಮಸ್ಯೆಯನ್ನು ಧೈರ್ಯದಿಂದ ನಿರ್ವಹಿಸಿ. ಉದ್ಯಮಕ್ಕೆ ಆರ್ಥಿಕ ನೆರವು ಸಿಗಲಿದೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿದ್ದು ಒಪ್ಪಿಕೊಳ್ಳುವಿರಿ. ಆಪ್ತರ ವಿಯೋಗವು ನಿಮ್ಮನ್ನು ಕುಗ್ಗಿಸಬಹುದು. ಅಧಿಕಾರದ ಬಗ್ಗೆ ವ್ಯಾಮೋಹವು ಕಡಿಮೆಯಾಗುವುದು. ನೀವು ಕಷ್ಟದಲ್ಲಿ ಸುಖವನ್ನು ಕಾಣುವ ಮಾರ್ಗವನ್ನು ಹುಡುಕಿಕೊಳ್ಳುವಿರಿ.

ಧನು ರಾಶಿ:

ವ್ಯವಹಾರದಲ್ಲಿ ಕಷ್ಟಪಟ್ಟು ಕೆಲಸ ಮಾಡುವ ಸಮಯ ಇದು. ಅಲ್ಪರ ಸಂಗದಿಂದ ಸ್ವಾಭಿಮಾನ ಧಕ್ಕೆ ಬರುವುದು. ಮುಜುಗರವನ್ನು ಎದುರಿಸಬೇಕಾಗಬಹುದು. ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬಯಸಿದರೆ ನಕಾರಾತ್ಮಕ ಉತ್ತರವನ್ನು ಕೊಡಬೇಡಿ. ಪ್ರಾಮಾಣಿಕತೆಯಿಂದ ಯಶಸ್ಸು ಸಿಗಲಿದೆ. ಎಲ್ಲ ಕೆಲಸಗಳೂ ಏಕಕಾಲಕ್ಕೆ ಬರಬಹುದು. ನಿಮ್ಮ ಮೇಲಿನ ಭರವಸೆಯು ಸುಳ್ಳಾಗದೇ ಇರಲಿದೆ. ನೀವು ಬೇಕಾದ ಸಹಾಯವು ಸರಿಯಾದ ಸಮಯಕ್ಕೆ ಸಿಗುವುದು.

ಮಕರ ರಾಶಿ:

ಕಾರ್ಯದ ಒತ್ತಡ ನಿಮ್ಮನ್ನು ಇಂದು ಬಂಧಿಸಿ ಇಡಲಿದೆ. ಹೊಸ ಕಾರ್ಯಗಳಿಗೆ ನೀವು ತರಬೇತಿ ಪಡೆಯುವಿರಿ. ಹೆಚ್ಚು ಜನರ ಸಂಪರ್ಕ ಮಾಡಬೇಕಾದ ಅನಿವಾರ್ಯತೆ ಬರಬಹುದು. ಧನ ಆದಾಯವು ನಿಮ್ಮ ನಿರೀಕ್ಷೆಯನ್ನು ತಲುಪಬಹುದು. ಸ್ನೇಹಿತರ ತಪ್ಪು ನಿಮ್ಮ ಮೇಲೆ ಬರಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರು ಉತ್ತಮ‌ ಫಲಿತಾಂಶವನ್ನು ಪಡೆಯಬಹುದು. ದಾಂಪತ್ಯದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳಬಹುದು. ಮನೋಬಲವನ್ನು ಹೆಚ್ಚು ಮಾಡಿಕೊಳ್ಳಿ.

ಕುಂಭ ರಾಶಿ:

ಇಂದು ನಿಮ್ಮನ್ನು ಕಾಳಜಿ ಮಾಡುವವರ ಜೊತೆ ಸಮಯವನ್ನು ಕಳೆಯುವುದು ಉತ್ತಮ ಎನಿಸಬಹುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ. ಆರಂಭಿಸಿದ ಕಾರ್ಯಗಳಲ್ಲಿ ಸಫಲತೆ ಸಿಗಲಿದೆ. ಹಳೆಯ ಸಾಲಗಳನ್ನು ತೀರಿಸಿ ನೆಮ್ಮದಿಯಿಂದ ಇರುವಿರಿ.‌ ಆರ್ಥಿಕತೆಯ ಗೊಂದಲಕ್ಕೆ ಪರಿಹಾರ ದೊರೆಯುವುದು. ನಿಮ್ಮ ಜಾಣತನವೇ ನಿಮಗೆ ವರವಾಗಲಿದೆ. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು. ಆಡಿದ ಮಾತಿಗೆ ಪಶ್ಚಾತ್ತಾಪಪಡಬೇಕಾದೀತು.

ಮೀನ ರಾಶಿ:

ಇಂದು ನಿಮಗೆ ದೇವರಲ್ಲಿ ಭಕ್ತಿಯ ಕೊರತೆ ಕಾಣಿಸುವುದು. ನಿಮ್ಮ ಸಂಕೋಚದ ಸ್ವಭಾವದಿಂದ ಹೇಳಬೇಕಾದ ವಿಚಾರವನ್ನು ಹೇಳದೇ ಸುಮ್ಮನಾಗುವಿರಿ.‌ ಉದ್ಯಮದ ಸೃಷ್ಟಿಗೆ ಬೇಕಾದ ಬಂಡವಾಳವು ಸಿಗಲಿದೆ. ಇಂದು ಸಾಲ ಪಡೆದವರು ಮರಳಿ ನೀಡಲಿದ್ದಾರೆ. ಹೊಸ ಜೀವನ ಶೈಲಿಗೆ ಒಗ್ಗಿಕೊಳ್ಳುವುದು ಕಷ್ಟವಾಗಬಹುದು.‌ ಮನಸ್ಸು ಹಾಳಾಗುವ ಸಾಧ್ಯತೆ ಇದೆ. ತಿರುಗಾಟದಲ್ಲಿರುವ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರ ವ್ಯಕ್ತಪಡಿಸಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುಷ್ಯಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಅತಿಗಂಡ, ಕರಣ : ವಣಿಜ, ಸೂರ್ಯೋದಯ – 06 – 06 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:50 – 12:26, ಯಮಗಂಡ ಕಾಲ 15:36 – 17:11, ಗುಳಿಕ ಕಾಲ 07:41 – 09:16

-ಲೋಹಿತ್ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *