ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಸುಳ್ಳಿನಿಂದ ನಂಬಿಸಬಹುದು – Kannada News | Horoscope 22 Sunday 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಮ್ಮ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಿ. ವ್ಯಕ್ತಿಯ ದ್ವೇಷಕ್ಕಿಂತ ವ್ಯಕ್ತಿತ್ವದ ಮೇಲೆ ದ್ವೇಷವಿರುವುದು. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮುದುವಾದ ಮಾತು ಕೃತಕತೆಯಂತೆ ತೋರಬಹುದು. ನೀವು ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸಬಹುದು. ಭಯವು ನಿಮ್ಮ ಮನಸ್ಸನ್ನು ಕಟ್ಟಿಹಾಕುವುದು.

ವೃಷಭ ರಾಶಿ:

ದೂರಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಇಂದು ನಿಮ್ಮ ಕೆಲಸವು ನೀವಂದುಕೊಂಡಷ್ಟು ಸುಲಭವಾಗಿ ಇರದು. ಮಕ್ಕಳ ಜೊತೆಗಿದ್ದು ಸಂತೋಷವನ್ನು ಪಡೆಯುವಿರಿ. ಯಾರೊಂದಿಗೂ ಮುಕ್ತವಾಗಿ ಮಾತನಾಡಲು ಆಗದು. ನಿಮ್ಮ ಮನೋಬಲದ ಪ್ರದರ್ಶನವನ್ನು ತೋರಿಸಬೇಕಾದೀತು. ಸುಮ್ಮನೇ ವಾಗ್ವಾದವನ್ನು ಮಾಡಲು ಹೋಗಿ ಸಮಯವನ್ನು ಹಾಗೂ ಇತರರ ಸಮಯವನ್ನೂ ಹಾಳು ಮಾಡುವಿರಿ.

ಮಿಥುನ ರಾಶಿ:

ಯಶಸ್ಸಿನ ಗುಟ್ಟನ್ನು ನೀವು ಯಾರಿಗೂ ಹೇಳಲಾರಿರಿ. ಮನೆಯಲ್ಲಿ ಹರ್ಷದ ವಾತಾವರಣ ಇದ್ದು ಬಂಧುಗಳು ನಿಮ್ಮ ಜೊತೆಗಿರುವರು. ಸರಳವಾದ ನಿಮ್ಮ ವ್ಯಕ್ತಿತ್ವಕ್ಕೆ ಯಾರೂ ಮನಸೋಲುವರು. ನಿಮ್ಮನ್ನು ಅಬಲಂಬಿಸಿದವರಿಗೆ ನಿಮ್ಮ ಬಿಸಿ ತಟ್ಟಬಹುದು. ಕರ್ತವ್ಯವನ್ನು ನಿಷ್ಠೆಯಿಂದ ಮಾಡುವಿರಿ. ಕೆಟ್ಟ ಕೆಲಸಕ್ಕೆ ಯಾರಾದರೂ ಪ್ರೇರಣೆ ಕೊಡಬಹುದು. ಕೆಲಸ ಕೆಟ್ಟರೂ ಮನಸ್ಸು ಕೆಡದಿರಲಿ. ದುರಭ್ಯಾಸವು ನಿಮಗೆ ಬೇಡವೆನಿಸುವುದು. ಪ್ರೇಮಿಗಳು ಪರಸ್ಪರ ಒಪ್ಪಂದವನ್ನು ಮಾಡಿಕೊಂಡು ಮುಂದುವರಿಯುವರು.

ಕರ್ಕಾಟಕ ರಾಶಿ:

ನಿಮ್ಮ ತಪ್ಪನ್ನು ಒಪ್ಪಿಕೊಳ್ಳಲು ನಿಮಗೆ ಸಂಕೋಚವಾಗಬಹುದು. ಅಮೂಲ್ಯ ವಸ್ತುಗಳ ಖರೀದಿಯಿಂದ ವಂಚನೆಯಾಗಬಹುದು. ನಿರಂತರ ಕೆಲಸದಿಂದ ಸಮಾಧಾನವು ಬೇಕಾಗುವುದು. ವಾಹನ ಮುಂತಾದ ಉದ್ಯಮವನ್ನು ನಡೆಸುತ್ತಿದ್ದರೆ ಲಾಭವು ಇರುವುದು. ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಎಡವಟ್ಟು ಮಾಡಿಕೊಳ್ಳುವಿರಿ. ಉಪಕಾರದ ಸ್ಮರಣೆಯನ್ನು ನೀವು ಮಾಡಿಕೊಳ್ಳುವುದಿಲ್ಲ. ವರ್ತನೆಯಲ್ಲಿ ಆಗುವ ಬದಲಾವಣೆಯನ್ನು ಯಾರೂ ಊಹಿಸಲಾರರು. ಎಲ್ಲದರ ಮೇಲೂ ನಂಬಿಕೆಯನ್ನು ಕಳೆದುಕೊಳ್ಳುವಿರಿ.

ಸಿಂಹ ರಾಶಿ:

ಕುಟುಂಬದ ಚಿಂತೆಯಿಂದ ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ. ಅನವಶ್ಯಕವಾಗಿ ಹಣವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಎಲ್ಲ ಕಡೆಯಿಂದ ನಿಮಗೆ ಅನುಕೂಲವಾಗಬೇಕು ಎಂದುಕೊಳ್ಳುವುದು ಬೇಡ. ಹೊಸ ವ್ಯವಹಾರದ ಬಗ್ಗೆ ನಿಮಗೆ ಆಪ್ತರ ಸಲಹೆಯು ಸಿಗಲಿದೆ. ನಿಮ್ಮ ಜವಾಬ್ದಾರಿಯನ್ನು ನಿರ್ವಹಣೆ ಮಾಡುವಾಗ ಕಷ್ಟ. ಮಕ್ಕಳ ಸ್ವಭಾವವು ಇಷ್ಟವಾಗದೇ ಹೋಗುವುದು. ಖಾಸಗಿ ಸಂಸ್ಥೆಯೊಂದು ನಿಮ್ಮನ್ನು ಮುಖ್ಯಸ್ಥರನ್ನಾಗಿ ಮಾಡುವ ಯೋಚನೆಯನ್ನು ಇಟ್ಟುಕೊಂಡಿದೆ.

ಕನ್ಯಾ ರಾಶಿ:

ನಿಮ್ಮ ಮಹತ್ತ್ವಾಕಾಂಕ್ಷೆಯು ಸಿದ್ಧಿಸುವುದು. ಹೊಸ ಉದ್ಯೋಗವನ್ನು ಆರಂಭಿಸಲು ತೀವ್ರತೆಯು ಇರಲಿದೆ. ಮಕ್ಕಳನ್ನು ದೂರ ಮಾಡಿಕೊಂಡು ಬೇಸರಗೊಳ್ಳುವಿರಿ. ನಿಮ್ಮ ಮಕ್ಕಳ ಬಾಂಧವ್ಯದಿಂದೆ ನಿಮಗೆ ಅಗಲಿಕೆ ಕಷ್ಟವಾದೀತು. ಸಹೋದ್ಯೋಗಿಗಳನ್ನು ಅನೌಪಚಾರಿಕವಾಗಿ ಭೇಟಿಯಾಗುವಿರಿ. ವಿಯೋಗದ ನೋವನ್ನು ನಿಯಂತ್ರಿಸುವ ಕ್ಷಮತೆ ಇರಲಿದೆ. ತಾಯಿಯ ಪ್ರೀತಿಯನ್ನು ಅನುಭವಿಸುವಿರಿ. ಸಂಪತ್ತಿನ ಬಗ್ಗೆ ನಿಮಗೆ ಆಸಕ್ತಿಯು ಇರದು. ಸಂಗಾತಿಯು ನಿಮ್ಮಿಂದ ಏನನ್ನೋ ಮುಚ್ಚಿಡುವರು.

ತುಲಾ ರಾಶಿ:

ನಿಮ್ಮ ವ್ಯಾಪಾರ ವಿಸ್ತರಣೆಯನ್ನು ಮಾಡಲು ನಿರ್ಧಾರ ಮಾಡುವಿರಿ. ನೋವನ್ನೂ ಸಕಾರಾತ್ಮಕವಾಗಿ ಮಾಡಿಕೊಳ್ಳುವುದು ನೆಮ್ಮದಿಯ ಸೂತ್ರ. ದ್ವಿಚಕ್ರ ವಾಹನವನ್ನು ಚಲಾಯಿಸುವಾಗ ಎಚ್ಚರಿಕೆ ಬೇಕು. ಹಳೆಯ ಘಟನೆಯನ್ನು ನೆನಪಿಸಿಕೊಂಡು ಸಂಕಟಪಡುವುದು ಬೇಡ. ಋಣಬಾಧೆಗೆ ನಿಮ್ಮ ಉತ್ತರದಾಯಿತ್ವ ಬರಲಿದೆ. ಆರೋಗ್ಯವು ಚೆನ್ನಾಗಿ ಇರಲಿದ್ದು ಮಾನಸಿಕವಾದ ನೆಮ್ಮದಿಯು ಇರುವುದು. ತಾಳ್ಮೆ ಕಡಿಮೆ ಆದಂತೆ ತೋರುವುದು. ನಿಮ್ಮ ಉದಾರಗುಣವು ದುರುಪಯೋಗ ಆಗಬಹುದು.

ವೃಶ್ಚಿಕ ರಾಶಿ:

ಮಂಗಲ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ. ಸ್ನೇಹಿತರ ಮಾತಿನಿಂದ ನಿಮಗೆ ನೋವಾಗಬಹುದು. ಹಣಕಾಸಿನ ವಿಚಾರಕ್ಕೆ ತಂದೆಯ ನಡುವೆ ವಾಗ್ವಾದವು ಆಗಬಹುದು. ನೆರ ಮನೆಯವರ ವರ್ತನೆಯಿಂದ ನೀವು ಸಿಟ್ಟಾಗುವಿರಿ. ಪರೋಪಕಾರದಿಂದ ನಿಮಗೆ ಸಂತೋಷವಾಗಲಿದೆ. ಚರಾಸ್ತಿಗಳನ್ನು ನಷ್ಟ ಮಾಡಿಕೊಳ್ಳಬೇಕಾಗುವುದು. ಸಜ್ಜನರ ಸಂಗವು ಅಪೇಕ್ಷಿಸದೇ ಇದ್ದರೂ ಸಿಗುತ್ತದೆ. ನಿಮಗೆ ಯಾರಾದರೂ ದಾನಕ್ಕೆ ಯೋಗ್ಯರಾದವರು ಅನ್ನಿಸಿದವರಿಗೆ ದಾನವನ್ನು ಮಾಡಿ.

ಧನು ರಾಶಿ:

ಬುದ್ಧಿವಂತಿಕೆಯಿಂದ ಹೂಡಿಕೆ ಮಾಡುವುದು ಸೂಕ್ತ. ಪೂರ್ವಿಕರ ಆಸ್ತಿಗೆ ಸಂಬಂಧಿಸಿದಂತೆ ಮನಸ್ತಾಪವು ಬರಬಹುದು. ದಿಢೀರ್ ಬದಲಾವಣೆಯನ್ನು ನಿರೀಕ್ಷಿಸಿ ಹತಾಶರಾಗಬಹುದು. ತುರ್ತು ಹಣವು ಬೇಕಿದ್ದರಿಂದ ಸ್ನೇಹಿತರನ್ನು ಕೇಳುವಿರಿ. ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದುದ್ದು ಗೊತ್ತಾಗದೇ ಹೋಗಬಹುದು. ದುರಭ್ಯಾಸದ ಕಾರಣ ಮರ್ಯಾದಿಯನ್ನು ಕಳೆದುಕೊಳ್ಳಬೇಕಾದೀತು. ಮಹಿಳೆಯರಿಗೆ ಸಹಾಯ ಮಾಡಲು ಹೋಗಿ ಅಪವಾದಕ್ಕೆ ಸಿಕ್ಕುವಿರಿ. ಸ್ವಂತ ವಾಹನ ಖರೀದಿಗೆ ಯೋಜನೆಯನ್ನು ತಯಾರು ಮಾಡುವಿರಿ.

ಮಕರ ರಾಶಿ:

ನಿರಂಕುಶವಾಗಿ ವರ್ತಿಸುವುದು ಇತರರಿಗೆ ಇಷ್ಟವಾಹದು. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಪಂಡಿತರ ಸಹವಾಸ ತೊರೆಯುವುದು. ವಿದೇಶೀ ವ್ಯಕ್ತಿಯ ಜೊತೆಗಿನ ಸಂಬಂಧ ಹೆಚ್ಚಾಗುವುದು. ಆಪತ್ಕಾಲಕ್ಕಾಗಿ ಕೂಡಿಟ್ಟ ಹಣವು ಇಂದು ಖರ್ಚು ಮಾಡಬೇಕಾಗುವುದು. ಭವಿಷ್ಯದ ಬಗ್ಗೆ ಅಸ್ಪಷ್ಟತೆ ಇರುವ ಕಾರಣ ಮನಸ್ಸಿಗೆ ಕಿರಿಕಿರಿ ಇರುವುದು. ಹಣದ ರಕ್ಷಣೆಗೆ ಅನ್ಯ ಉಪಾಯ ಮಾಡುವಿರಿ.

ಕುಂಭ ರಾಶಿ:

ನಿವು ಉದ್ಯೋಗವನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ನಿಮ್ಮ ಜೀವನಶೈಲಿಯನ್ನು ಸುಧಾರಿಸಿಕೊಳ್ಳಿ. ಆರೋಗ್ಯದ ಬಾಧೆಯ ಜೊತೆ ಶತ್ರುಬಾಧೆಯಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗುವುದು. ಮನೆಯಲ್ಲಿ ಇಂದು ಸ್ನೇಹ ಕೂಟವು ಏರ್ಪಡುವುದು. ನಿಮ್ಮ ಬಳಿ ಇರುವ ಸಂಪತ್ತನ್ನು ಎಲ್ಲರಿಗೂ ಹೇಳಬೇಕಾದೀತು. ನಿಮ್ಮ ಜೀವನ ಶೈಲಿಯನ್ನು ಬದಲಿಸಿಕೊಳ್ಳುವಿರಿ. ಕಛೇರಿಯ ವ್ಯವಹಾರವನ್ನು ಮನೆಯಲ್ಲಿ ಚರ್ಚಿಸುವುದು ಬೇಡ.

ಮೀನ ರಾಶಿ:

ಭೂಮಿಯ ವ್ಯವಹಾರವು ನಿಮಗೆ ಲಾಭದಾಯಕವೆಂದು ಸಾಬೀತುಪಡಿಸಬಹುದು. ಧಾರ್ಮಿಕ ಕಾರ್ಯಗಳಿಗೆ ಖರ್ಚು ಮಾಡುವ ಸಾಧ್ಯತೆಯಿದೆ, ಇದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ನಿಮ್ಮ ಹಣವನ್ನು ಬಲಾತ್ಕಾರದಿಂದ ಪಡೆಯಬೇಕಾಗಬಹುದು. ಸಂತೋಷದ ನಡುವೆ ಯಾರನ್ನೂ ಬೇಸರಿಸುವುದು ಬೇಡ. ನಿಮ್ಮ ಅಧ್ಯಾತ್ಮ ಜೀವನದಿಂದ ಪ್ರಭಾವಿತರಾಗುವರು. ಅತಿಯಾದ ಭೋಜನದಿಂದ ಕಷ್ಟವಾದೀತು. ತಾಯಿಯ ಬಂಧುಗಳು ನಿಮಗೆ ಸಹಕಾರವನ್ನು ನೀಡಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ಶುಕ್ಲ, ಕರಣ : ಬಾಲವ, ಸೂರ್ಯೋದಯ – 06 – 46 am, ಸೂರ್ಯಾಸ್ತ – 06 – 29 pm, ಇಂದಿನ ಶುಭಾಶುಭ ಕಾಲ : ರಾಹು 17:02 – 18:30, ಯಮಗಂಡ ಕಾಲ 12:38 – 14:06, ಗುಳಿಕ ಕಾಲ 15:34 – 17:02

-ಲೋಹಿತ ಹೆಬ್ಬಾರ್ – 8762924271 (what’s app only)

Source link

Leave a Reply

Your email address will not be published. Required fields are marked *