ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

ಮೇಷ ರಾಶಿ:

ನಿಮ್ಮ ಆನಂದದ ವ್ಯಕ್ತಿತ್ವದಿಂದಾಗಿ ಇತರರು ನಿಮ್ಮೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಯತ್ನಿಸುತ್ತಾರೆ. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಮನೆಯಿಂದ ದೂರ ಇರಬೇಕಾದೀತು. ಸಾಮಾಜಿಕ ಗೌರವದಿಂದ ನಿಮ್ಮ ನೈತಿಕವಾದ ಸ್ಥೈರ್ಯ ಹೆಚ್ಚುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಬೇಡ. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ವಿತಚರ್ವಣ ಮಾಡುವಿರಿ.

ವೃಷಭ ರಾಶಿ:

ನೀವು ಕುಟುಂಬ ಸದಸ್ಯರಿಂದ ಒತ್ತಡವನ್ನು ಎದುರಿಸಬಹುದು. ಗೊತ್ತಿಲ್ಲದೇ ಯಾರ ಬಗ್ಗೆಯೂ ಮಾತನಾಡುವುದು ಬೇಡ. ಹಣದ ಬಗ್ಗೆ ವಾದಗಳು ಇರಬಹುದು. ನೀವು ಲೌಕಿಕ ಭೋಗಗಳಿಂದ ಮತ್ತು ಸೇವಕರಿಂದ ಎಲ್ಲ ರೀತಿಯ ಸಂತೋಷ ಮತ್ತು ಲಾಭವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಆರೋಗ್ಯದ ಕಡೆ ಸ್ವಲ್ಪ ಹೆಚ್ಚು ಗಮನವಿರಲಿ. ನಿಮ್ಮ ಕೆಲಸವು ಕೇವಲ ಸುತ್ತಾಟದಲ್ಲಿಯೇ ಮುಕ್ತಾಯವಾಗುವುದು. ಅಪ್ರಯೋಜಕ ವಿಚಾರದ ಬಗ್ಗೆ ಚಿಂತೆ ಮಾಡುವಿರಿ.

ಮಿಥುನ ರಾಶಿ:

ಅಧಿಕಾರಿಗಳಿಂದ ಕ್ರಮ ತೆಗೆದುಕೊಳ್ಳಬಹುದು. ವಾಹನ ಚಾಲನೆಯಿಂದ ಆಯಾಸವಾಗುವುದು. ನಿಮ್ಮನ್ನು ಇತರರು ನೋಡುವರು. ರಾಜಕಾರಣಿಗಳು ಕಾರ್ಯಕ್ರಮದ ಒತ್ತಡದಲ್ಲಿ ಇರುವರು. ಮಾನಸಿಕ ಒತ್ತಡದಿಂದ ಬೇರೆ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ಹಳೆಯ ವಿಚಾರವನ್ನು ವಿರೋಧಿಗಳು ಪುನಃ ಮೇಲಕ್ಕೆ ತಂದು ಕಲಹ ಮಾಡಬಹುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ನೀವು ಕೇಳಲು ಸಂಕೋಚಪಡುವಿರಿ. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ತಪ್ಪಿ ಆಡುವಿರಿ.

ಕರ್ಕಾಟಕ ರಾಶಿ:

ಪರೋಪಕಾರದ ಬಗ್ಗೆ ಆಸಕ್ತಿಯು ಮೂಡಬಹುದು. ಧಾರ್ಮಿಕ ವಿಧಿವಿಧಾನಗಳಲ್ಲಿ ಆಸಕ್ತಿ ವಹಿಸಿ ಸಂಪೂರ್ಣ ಸಹಕಾರ ನೀಡುವಿರಿ. ಭೂ ವ್ಯವಹಾರದಿಂದ ಸೋಲು. ಅದೃಷ್ಟದಿಂದಲೂ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ, ನಿಮ್ಮ ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ನಿಮ್ಮನ್ನು ನಂಬಿದವರಿಗೆ ನೀವು ಮೋಸ ಮಾಡುವುದು ಬೇಡ. ನಿಮ್ಮ ಸಂಗಾತಿಯ ಮನಃಸ್ಥಿತಿಯು ಬದಲಾಗಿದ್ದು ನಿಮಗೆ ಸಮಸ್ಯೆಯಾಗುವುದು.

ಸಿಂಹ ರಾಶಿ:

ವ್ಯಾಪಾರ ಬೆಳವಣಿಗೆಗೆ ಮಾಡಿದ ಪ್ರಯತ್ನಗಳು ಫಲಪ್ರದವಾಗುವುದಿಲ್ಲ. ಭವಿಷ್ಯದಲ್ಲಿ ನೀವು ಒಳ್ಳೆಯ ಫಲಿತಾಂಶವನ್ನು ಪಡೆಯುವಿರಿ. ಪರರ ಒಳಿತನ್ನು ನೋಡಿ ಅಸೂಯೆ ಬೇಡ. ಬರುವ ಕಾಲದ ವರೆಗೆ ತಾಳ್ಮೆ ಬೇಕು. ಬೇಡದ ಮಾತುಗಳನ್ನು ನೀವು ಎಲ್ಲರೆದುರು ಪ್ರಸ್ತಾಪಿಸುವಿರಿ. ನೀವು ತಾಳ್ಮೆಯಿಂದ ಮಾಡುವ ಯಾವುದೇ ಕೆಲಸವನ್ನು ನೀವು ಯಶಸ್ವಿಯಾಗಿ ಪೂರ್ಣಮಾಡುವಿರಿ. ಧಾರ್ಮಿಕ ಕಾರ್ಯಗಳಿಗೆ ದೂರಪ್ರಯಾಣವನ್ನು ಮಾಡುವಿರಿ. ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ.

ಕನ್ಯಾ ರಾಶಿ:

ಇಂದು ನಿಮ್ಮ ಕರ್ತವ್ಯದ ಕಡೆ ಗಮನ ಹೆಚ್ಚಿರಲಿದೆ. ನೀವು ಸ್ವಂತ ಕೆಲಸಕ್ಕಾಗಿ ಸಾಕಷ್ಟು ಓಡಾಟ ಹಾಗೂ ಖರ್ಚನ್ನು ಮಾಡಬೇಕಾದೀತು. ನೀವು ನಿಮ್ಮ ಗುರುವಿನ ಬಗ್ಗೆ ಸಂಪೂರ್ಣ ಭಕ್ತಿ ಮತ್ತು ನಿಷ್ಠೆಯನ್ನು ಇಟ್ಟುಕೊಳ್ಳುವಿರಿ. ಮನಸ್ಸಿನ ನಿಯಂತ್ರಣದಲ್ಲಿ ನಿಮಗೆ ಕಷ್ಟವಾದೀತು. ಕುಟುಂಬದ ತೊಡಕುಗಳನ್ನು ಸೂಕ್ಷ್ಮವಾಗಿ ಪರಿಹರಿಸಿಕೊಳ್ಳಿ. ನೀವು ಹೊಸ ಕೆಲಸದಲ್ಲಿ ಹೂಡಿಕೆ ಮಾಡಬೇಕಾದರೆ, ನೀವು ಲಾಭವನ್ನು ಪಡೆಯುತ್ತೀರಿ ಮತ್ತು ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭವಿದೆ.

ತುಲಾ ರಾಶಿ:

ಇಂದು ಕಷ್ಟಕರವಾದ ಕಾರ್ಯಗಳೂ ಕೆಲವರಿಗೆ ಭಾರವಾಗದೇ ಇರಬಹುದು. ನಿಮ್ಮ ಉದ್ಯಮದ ಗುಣಮಟ್ಟವನ್ನು ಏರಿಸುವಿರಿ. ಪ್ರತಿಯೊಂದು ವಿಷಯದಲ್ಲೂ ನಿಮ್ಮ ಪೋಷಕರಿಂದ ನೀವು ಸಂತೋಷ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಇಂದು ದೊಡ್ಡ ಖರೀದಿಯನ್ನು ಮಾಡಲು ತೀರ್ಮಾನಿಸಿದ್ದೀರಿ. ನೀವು ಜನರಿಂದ ಪೂರ್ಣ ಗೌರವವನ್ನು ಪಡೆಯುತ್ತೀರಿ. ವ್ಯಾಪಾರದಲ್ಲಿ ಲಾಭ ಇರುತ್ತದೆ. ಆಪ್ತರು ನಿಮಗೆ ಆತಿಥ್ಯವನ್ನು ಕೊಡಿಸುವರು. ಇಂದು ವಿದ್ಯಾರ್ಥಿಗಳಿಗೆ ಪ್ರಶಂಸೆ ಸಿಗುವುದು.

ವೃಶ್ಚಿಕ ರಾಶಿ:

ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ಬಾಂಧವರ ಜೊತೆ ಸ್ನೇಹದಿಂದ ಇರುವಿರಿ. ಭೂಮಿಯ ವ್ಯವಹಾರವನ್ನು ಮಾಡಲು ಬಹಳ ಉತ್ಸಾವಿರಲಿದೆ. ಪೋಷಕರ ಬೆಂಬಲ ಮತ್ತು ಆಶೀರ್ವಾದದಿಂದ ಸಮಾಧಾನವಿರುತ್ತದೆ. ನಿಮ್ಮ ಬಂಧುಗಳ ಜೊತೆ ಯಾವುದೇ ರೀತಿಯ ವ್ಯವಹಾರವನ್ನು ಮಾಡಬೇಡಿ. ಇಲ್ಲದಿದ್ದರೆ ನೀವು ಸಮಸ್ಯೆಗಳನ್ನು ಎದುರಿಸಬಹುದು. ಮಧುರವಾದ ಮಾತುಗಳಿಂದ ತುಂಡಾಗುವ ಸಂಬಂಧವನ್ನು ಸರಿ ಮಾಡಿಕೊಳ್ಳುವಿರಿ.

ಧನು ರಾಶಿ:

ಇಂದು ಅದೃಷ್ಟವು ನಿಮ್ಮ ಕಡೆ ಇರುವಂತೆ ಕಾಣುತ್ತದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ಮಕ್ಕಳ ವೃತ್ತಿಜೀವನದಲ್ಲಿ ನೀವು ಸಾಕಷ್ಟು ತೃಪ್ತರಾಗುವಿರಿ. ಇಂದು, ತಾಯಿಯ ಕಡೆಯಿಂದ ಪ್ರೀತಿ ಮತ್ತು ವಿಶೇಷ ಬೆಂಬಲವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಐಷಾರಾಮಿಗಳಿಗಾಗಿ ನೀವು ಹಣವನ್ನು ಖರ್ಚು ಮಾಡುತ್ತೀರಿ. ಇದರಿಂದ ನಿಮ್ಮ ಶತ್ರುಗಳನ್ನು ಅಸಮಾಧಾನಗೊಳಿಸುತ್ತದೆ. ಕಾಲಿನ ಕೆಳನ ಭಾಗಕ್ಕೆ ಗಾಯವಾಗುವ ಸಾಧ್ಯತೆ ಇದೆ.

ಮಕರ ರಾಶಿ:

ಯಾವುದೇ ಕೂಲಂಕುಷವಾಗಿ ಯೋಚಿಸಿದ ಅನಂತರ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ನಿಮ್ಮ ಶತ್ರುಗಳಿಗೆ ತಾನಾಗಿಯೇ ಸೋಲಾಗುವುದು. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಉಂಟಾಗುವುದು. ಇಂದು ಕಛೇರಿಯಲ್ಲಿ ಕೊಡುವ ಕೆಲಸವನ್ನು ಬಹಳ ಜವಾಬ್ದಾರಿಯಿಂದ ಮಾಡಬೇಕಾದೀತು. ಆರೋಗ್ಯ ಸಮಸ್ಯೆಗಳು ನಿಮ್ಮ ಸರಿಯಿಲ್ಲದ ದಿನಚರಿಯಿಂದ ಬರಲಿದೆ. ಸೊಂಟದ ಭಾಗದಲ್ಲಿ ನೋವು ಕಾಣಿಸುಬುದು. ಅಮೂಲ್ಯ ವಸ್ತುವಿನ ಬಗ್ಗೆ ನಿಷ್ಕಾಳಜಿ ಸರಿಯಲ್ಲ. ವ್ಯಾಪಾರಸ್ಥರು ಅಧಿಕ ಲಾಭವನ್ನು ಗಳಿಸುವರು.

ಕುಂಭ ರಾಶಿ:

ಇಂದು ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವು ನಿಮಗೇ ಪ್ರಯೋಜನವನ್ನು ನೀಡುತ್ತದೆ. ಮಾನಸಿಕ ಸ್ಥೈರ್ಯ ನಿಮಗೆ ಕಡಿಮೆಯಾಗಬಹುದು.‌ ಇಂದು ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ನಿಮ್ಮ ಮನಸ್ಸಿನಲ್ಲಿ ನೀವು ತುಂಬಾ ಸಂತೋಷವಾಗಿರುತ್ತೀರಿ. ಇಂದಿನ ಆದಾಯವು ಮಧ್ಯಮಕ್ಕಿಂತ ಚೆನ್ನಾಗಿ ಇರುವುದು. ಚಂಚಲ ಮನಸ್ಸು ಸಹಜವಾದುದನ್ನು ಗುರುತಿಸಲಾರದು. ಶತ್ರುಗಳ ಚಿಂತೆಯಿಂದ ಮಾನಸಿಕವಾಗಿ ಕುಗ್ಗುವಿರಿ. ನಿಮ್ಮಷ್ಟಕ್ಕೆ ನೀವಿರಲು ಸಾಧ್ಯವಾಗದು.

ಮೀನ ರಾಶಿ:

ಇಂದು ನೀವು ಹಣದ ವಿಷಯಗಳಲ್ಲಿ ಯಾವುದೇ ರೀತಿಯ ಅಪಾಯವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ಬಂಧುಗಳ ಒತ್ತಾಯಕ್ಕೆ ಮಣಿಯಬೇಕಾಗುವುದು. ನೀವು ಹಳೆಯ ಸ್ನೇಹಿತರಿಂದ ಬೆಂಬಲವನ್ನು ಪಡೆಯುವಿರಿ. ಉತ್ತಮ ಸ್ನೇಹಿತರ ಸಮೂಹವೂ ಸಹ ಹೆಚ್ಚಾಗಲಿದೆ. ಉತ್ತಮ ಕೆಲಸದ ಅನ್ವೇಷಣೆಯನ್ನು ಮಾಡುವಿರಿ. ನಿಮ್ಮ ಮಗನ ಮೇಲೆ ಸಂಪತ್ತಿನ ದೂರುವಿರಿ. ತುರ್ತು ಕಾರ್ಯಕ್ಕಾಗಿ ಮನೆಯಿಂದ ದೂರ ಹೋಗಬೇಕಾಗಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಭಾನು ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಪುಷ್ಯ, ಯೋಗ : ಸುಕರ್ಮ, ಕರಣ : ಗರಜ, ಸೂರ್ಯೋದಯ – 06 – 23 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:04 – 18:35, ಯಮಗಂಡ ಕಾಲ 12:29 – 14:01, ಗುಳಿಕ ಕಾಲ 16:32 – 17:04

-ಲೋಹಿತ ಹೆಬ್ಬಾರ್-8762924271 (what’s app only)

Source link

Leave a Reply

Your email address will not be published. Required fields are marked *