ದಿನ ಭವಿಷ್ಯ: ಇಂದು ಈ ರಾಶಿಯವರ ವಿಶೇಷ ಕೌಶಲ ಬೆಳಕಿಗೆ ಬರಲಿದೆ

ದಿನ ಭವಿಷ್ಯ: ಇಂದು ಈ ರಾಶಿಯವರ ವಿಶೇಷ ಕೌಶಲ ಬೆಳಕಿಗೆ ಬರಲಿದೆ

ಮೇಷ ರಾಶಿ:

ದುಡುಕಿ ಏನನ್ನಾದರೂ ಮಾಡಿಕೊಳ್ಳುವಿರಿ. ಪತ್ನಿಯ ಜೊತೆ ಸುಖದಿಂದ ಕಾಲವನ್ನು ಕಳೆಯುವಿರಿ. ಸಂಬಂಧಿಕರ ಆಗಮನವಾಗಲಿದೆ. ಕೃಷಿಯ ಚಟುವಟಿಕೆಯಲ್ಲಿ ಅಸಕ್ತಿಯಿಂದ ಪಾಲ್ಗೊಳ್ಳುವಿರಿ. ಅಪರಿಚಿತರ ಜೊತೆ ಅಧಿಕ ಒಡನಾಟ. ಬೇಸರದಲ್ಲಿ ದಿನದ ಮುಕ್ತಾಯ. ಸಮಯೋಚಿತ ಮಾತುಗಳಿಂದ ಪ್ರಶಂಸೆಯು ಸಿಗಬಹುದು. ಬೆಂಕಿಯ ಸ್ಥಳದಲ್ಲಿ ಎಚ್ಚರಿಕೆಯಿಂದ ಕೆಲಸವನ್ನು ಮಾಡಿ. ಇಂದಿನ ನಿಮ್ಮ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾವಣೆ ಆಗಬಹುದು.

ವೃಷಭ ರಾಶಿ:

ಇಂದು ವ್ಯಾವಹಾರಿಕವಾಗಿ ಮನಶ್ಚಾಂಚಲ್ಯ ನಿಮ್ಮನ್ನು ಅನೇಕ ವಿಧವಾಗಿ ಕಾಡಬಹುದು.‌ ನಿರಂತರ ಶ್ರಮಕ್ಕೆ ಫಲವಿರುತ್ತದೆ. ಕರ್ತವ್ಯದ ದೃಷ್ಟಯಿಂದ ಮಾಡಿ. ಫಲಾಪೇಕ್ಷೆಯು ಇದ್ದರೆ ಹತಾಶೆಯು ಖಂಡಿತಾ ಇರುವುದು. ಅಧಿಕಾರಿಗಳಿಂದ ನಿಮ್ಮ‌ ಕಾರ್ಯದ ಪ್ರಗತಿ ಪರಿಶೀಲನೆ. ಇನ್ನೊಬ್ಬರ ಬಗ್ಗೆ ಮಾಡುವ ತಮಾಷೆಯು ನಿಮ್ಮ ತಲೆನೋವಾದೀತು. ಸಮಯದ ಹೊಂದಾಣಿಕೆಯಲ್ಲಿ ನೀವು ಸೋಲಬಹುದು. ನೀವು ಮೊದಲೇ ನಿರ್ಧರಿಸಿರುವ ಕೆಲಸಗಳನ್ನು ಪೂರ್ಣ ಮಾಡಲು ಸಮಯವು ಸಿಗದೇ ಹೋದೀತು.

ಮಿಥುನ ರಾಶಿ:

ಇಂದು ಅನ್ಯರ ಕಾರಣದಿಂದ ವಿಮಾನ ಸಂಚಾರ ಯೋಗ. ಹಿರಿಯರಿಗೆ ನಿಮ್ಮ ಕೈಲಾದ ಮತ್ತು ಅವರಿಗೆ ಅವಶ್ಯಕವಾದ ಕಾರ್ಯಗಳನ್ನು ಮಾಡಿಕೊಡಿ. ಸಂಗಾತಿಯೊಂದಿಗೆ ಸುತ್ತಾಟ ನಡೆಸುವಿರಿ. ನಿಮ್ಮ ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡಬಹುದು. ಆಯುಧದಿಂದ ಗಾಯವನ್ನು ಮಾಡಿಕೊಂಡು ನೋವಾಗುವುದು. ಅಂತರ್ಜಾಲದಲ್ಲಿ ಅಧಿಕ ಸಮಯ ಕಳೆಯುವಿರಿ.‌ ಇಂದು ನಿಮಗೆ ಸೌಂದರ್ಯದ ಬಗ್ಗೆ ಹೆಚ್ಚು ಆಸಕ್ತಿ ಇರಲಿದ್ದು ಅದಕ್ಕೆ ಸಮಯವು ಹೆಚ್ಚು ಹೋಗುವುದು.

ಕರ್ಕಾಟಕ ರಾಶಿ:

ದೃಢವಾದ ಮನಸ್ಸಿದ್ದರೆ ಅನಾರೋಗ್ಯದಿಂದಲೂ ಚೇತರಿಕಯನ್ನು ಕಂಡುಕೊಳ್ಳಬಹುದಾಗಿದೆ. ದೈವಾನುಗ್ರಹವಿಲ್ಲವೆಂದು ದೇವಾಲಯಕ್ಕೆ ಹೋಗುವುದನ್ನು ನಿಲ್ಲಿಸುವುದು ಬೇಡ. ಇಂದಿನ ಸತ್ಕಾರ್ಯವೆಡ ನಿಮಗೆ ಉತ್ತಮವಾದ ಫಲವನ್ನು ಕೊಡುವುದು. ಸಂಗಾತಿಯ ಪ್ರೀತಿಯು ನಿಮಗೆ ಬೇಸರವನ್ನು ಕೊಡಬಹುದು. ಕಳೆದುಕೊಂಡದ್ದನ್ನು ಪಡೆಯಬೇಕು ಎಂಬ ಛಲವು ನಿಮ್ಮಲ್ಲಿ ಇರುವುದು. ಮನಸ್ತಾಪವನ್ನು ಮನಸ್ಸಿನೊಳಗೇ ಇಟ್ಟುಕೊಳ್ಳುವಿರಿ.

ಸಿಂಹ ರಾಶಿ:

ಸಹೋದರನ ಹಾಗೂ ತಂದೆಯ ಸಹಾಯ ನಿಮಗೆ ಸಿಗಲಿದೆ. ಪ್ರತಿಭೆಯ ಅನಾವರಣಕ್ಕೆ ಸುಕಾಲ. ಸಂಪತ್ತು ಉಳಿಸಿಕೊಳ್ಳಲು ಯತ್ನಿಸಿದಷ್ಟೂ ಅಪ್ರಯಾಸವಾಗಿ ಖರ್ಚಾಗುವುದು. ನಿಮ್ಮ ಆರಾಮದ ದಿನಚರಿಯಲ್ಲಿಯೂ ನಿಮಗೆ ಇಂದು ಕಿರಿಕಿರಿ ಆಗುವುದು. ಇನ್ನೊಬ್ಬರ ಮಾತುಗಳನ್ನು ಕೇಳುವ ಸಹನೆಯು ಬೇಕು. ಭೂಮಿಯನ್ನು ಮಾರಾಟಮಾಡುವ ಸ್ಥಿತಿಯು ಬರಬಹುದು. ಉತ್ಸಾಹದಿಂದ ನೀವು ಇಂದಿನ ಕಾರ್ಯವನ್ನು ಮಾಡುತ್ತಿದ್ದರೂ ದಿನದ ಕೊನೆಗೆ ಸಲ್ಲದ ಮಾತುಗಳನ್ನು ಕೇಳುವಿರಿ.

ಕನ್ಯಾ ರಾಶಿ:

ಬೇಡದ ವಸ್ತುಗಳಿಗೆ ಹೊಸ ರೂಪವನ್ನು ಕೊಡುವಿರಿ. ಉದ್ಯಮದಲ್ಲಿ ಏನಾದರೂ ಏರಿಳಿತಗಳು ಆಗಬಹುದು. ಒಂಟಿಯಾಗಿರುವುದನ್ನು ಯಾರಾದರೂ ತಪ್ಪಿಸಬಹುದು.‌ ಆಪ್ತರ ಜೊತೆ‌ ಮನಸ್ಸು ಬಿಚ್ಚಿ ಮಾತನಾಡಿ. ಇಷ್ಟವಾಗುವ ಸ್ಥಳಗಳಿಗೆ ಇಷ್ಟವಾದವರನ್ನು ಕರೆದುಕೊಂಡು ಹೋಗಿ. ಕೆಲಸದ‌ ಸ್ಥಳದಲ್ಲಿ ಒತ್ತಡದ ವಾತಾವರಣವಿರಬಹುದು. ಇಂದು ಬಿಟ್ಟು ಹೋದ ಆಪ್ತರ ಬಗ್ಗೆ ಹೆಚ್ಚು ಆಲೋಚನೆ ಬರಬಹುದು. ಬರುವ ಒತ್ತಡವನ್ನು ನೀವು ಯಾವುದಾದರೂ ವಿಧಾನದ ಮೂಲಕ ಸರಿ ಮಾಡಿಕೊಳ್ಳುವಿರಿ.

ತುಲಾ ರಾಶಿ:

ಮನೆಯವರ ಜೊತೆ ಖುಷಿಯಿಂದ ಕಾಲಕಳೆಯುವಿರಿ. ಎತ್ತರದ ಪ್ರದೇಶಗಳನ್ನು ಏರುವ ಸಾಹಸಕ್ಕೆ ಹೋಗಬೇಡಿ‌. ಯಾರಿಗಾದರೂ ಯಾವ ಕೆಲಸಕ್ಕಾದರೂ ನಿಮ್ಮ ಕಡೆಯಿಂದ ಅದಕ್ಕೆ ನ್ಯಾಯ ಸಿಗುವಂತೆ ಇರಲಿ. ಅನ್ಯ ಮನಸ್ಕರಾಗಿ ಇರುವುದು ಬೇಡ. ಧರ್ಮದ‌ ಕಾರ್ಯಗಳ ಆಸಕ್ತಿಯು ಕಡಿಮೆಯಾಗಬಹುದು. ಮಕ್ಕಳಿಂದ ಯಾವುದಾದರೂ ರೀತಿಯಲ್ಲಿ ನೋವನ್ನು ಪಡೆಯಬೇಕಾದೀತು. ನೀವು ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳದೇ ಅವರ ಜೊತೆ ಜಗಳವಾಡುವಿರಿ. ಆದಾಯದ ಗುಟ್ಟನ್ನು ಎಷ್ಟೇ ಒತ್ತಾಯ ಮಾಡಿದರೂ ಹೇಳಲಾರಿರಿ.

ವೃಶ್ಚಿಕ ರಾಶಿ:

ಕೆಟ್ಟ ಆಲೋಚನೆಗಳು ನಿಮ್ಮ ಮನಸ್ಸನ್ನು ಹಾಳು ಮಾಡಬಹುದು. ವ್ಯವಹಾರದಲ್ಲಿ ಬರುವ ಸಮಸ್ಯೆಯನ್ನು ಮೊದಲೇ ಯೋಚಿಸಿ ಅದಕ್ಕೆ ಬೇಕಾದ ಸಿದ್ಧತೆಯಲ್ಲಿ ಮಾಡಿ. ನಿರೋದ್ಯೋಗ ಸಮಸ್ಯೆಯಿಂದ ಮಾನಸಿಕ ಹಿಂಸೆಯಾಗಬಹುದು. ಭೂವ್ಯವಹಾರದಲ್ಲಿ ಲಾಭವನ್ನು ಪಡೆಯಲು ಅನ್ಯ ಮಾರ್ಗವನ್ನು ಆಶ್ರಯಿಸುವಿರಿ. ಇಂದು ಕಛೇರಿಯನ್ನು ಮಹಿಳೆಯರು ನಿರ್ವಹಣೆ ಮಾಡಬೇಕಾಗುವುದು. ನೂತನ ವಸ್ತುಗಳನ್ನು ಖರೀದಿಸಲಿದ್ಸೀರಿ. ಮಾಡದ ಕಾರ್ಯಕ್ಕೆ ಅಪವಾದ ಬರುವುದು.

ಧನು ರಾಶಿ:

ಹಠದ ಸ್ವಭಾವವೇ ನಿಮಗೆ ಮುಳುವಾಗಬಹುದು. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ವಿವಾದಗಳೂ ತಾರಕಕ್ಕೆ ಹೋಗಬಹುದು. ಮುಂದಿನ ಕಾರ್ಯದಲ್ಲಿ ಆಗುವ ಖರ್ಚುಗಳ ಬಗ್ಗೆ ತಲೆಕೆಡಿಕೊಳ್ಳಬಹುದು. ಎಲ್ಲರ ಮೇಲೂ ನಂಬಿಕೆ ಇಟ್ಟುಕೊಳ್ಳುವುದು ಸಾಧ್ಯವಾಗದು. ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆ ವಿಘ್ನ ಬರಬಹುದು. ಯಾರಾದರೂ ನಿಮ್ಮನ್ನು ಚೇಡಿಸಬಹುದು. ಸ್ನೇಹಿತರಿಗೆ ನಿಮ್ಮದಾದ ಕೆಲವು ಆಯ್ಕೆಗಳನ್ನು ಹೇಳಿ. ಧಾರ್ಮಿಕ ಆಚರಣೆಯು ನಿಮ್ಮ ಮನಸ್ಸಿಗೆ ಹಿತವೆನಿಸುವುದು.‌

ಮಕರ ರಾಶಿ:

ನಿಮ್ಮ ವೇಗಕ್ಕೆ ಸಕಾಲದಲ್ಲಿ ಆಗುವ ಕಾರ್ಯಗಳೂ ತುಂಬ ದೀರ್ಘವೆನಿಸುತ್ತದೆ. ವ್ಯವಹಾರದಲ್ಲಿ ಎಚ್ಚರವಿರಲಿ. ಒಮ್ಮುಖ ನಿರ್ಧಾರಗಳನ್ನು ಮಾಡುವುದನ್ನು ಬಿಡಿ. ಹೊಸ ಶತ್ರುಗಳನ್ನು ನಿರ್ಮಿಸಿಕೊಳ್ಳಬೇಡಿ. ಆರಕ್ಕೇರದ ಮೂರಕ್ಕಿಳಿಯದ ಉದ್ಯಮದ ದಿನವಿಂದು ನಿಮಗೆ. ನಿಮ್ಮ ಸ್ವಭಾವವನ್ನು ತಿದ್ದಿಕೊಳ್ಳಬೇಕಾಗುವುದು. ಯಾರೇ ನಿಮ್ಮನ್ನು ನೆಚ್ಚಿವದರೂ ಅದು ಸ್ವಲ್ಪ ಕಾಲ ಮಾತ್ರ. ದುಸ್ಸ್ವಭಾವವನ್ನು ಹೆಚ್ಚಿಸಿಕೊಳ್ಳುವಿರಿ. ಹಿತಶತ್ರುಗಳು ಲಾಭವನ್ನು ತಪ್ಪಿಸುವರು.

ಕುಂಭ ರಾಶಿ:

ದೂರದಲ್ಲಿರುವ ನಿಮಗೆ ಸಂಗಾತಿಯ ಸಂಗ ಸಿಗುವ ಸಾಧ್ಯತೆ ಇದೆ. ನಟನೆಯಲ್ಲಿ ಆಸಕ್ತಿಯಿರುವವರಿಗೆ ಅವಕಾಶಗಳು ಲಭ್ಯವಾಗುತ್ತವೆ. ಆಲಸ್ಯದಿಂದ ಸಿಗುವ ಸಂಪತ್ತು ವ್ಯರ್ಥವಾಗುತ್ತದೆ. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನಹರಿಸಬೇಕು. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು. ಆಪ್ತರೇ ನಿಮ್ಮ ಬಗ್ಗೆ ಹಗುರಾಗಿ ಮಾತನಾಡಬಹುದು. ಧನಲಾಭವಾದರೂ ಮನಸ್ಸಿನಲ್ಲಿ ನೆಮ್ಮದಿ ಕೊರತೆ ಕಾಣುವುದು. ಭೂಮಿಯ ವ್ಯವಹಾರವನ್ನು ಮಾಡಲು ನಿಮಗೆ ಒತ್ತಡ ಬರಬಹುದು.

ಮೀನ ರಾಶಿ:

ಇಂದು ಬೇಡದ ವಿಚಾರಕ್ಕೆ ಸಂಗಾತಿಯೊಂದಿಗೆ ಕಲಹವಾಗಲಿದೆ. ಜಾಗರೂಕರಾಗಿ ಕಾಲಿಡಿ. ಭೋಗವಸ್ತುಗಳನ್ನು ಅನವಶ್ಯಕವಾಗಿ ಖರೀದಿಸುವಿರಿ. ನಿಮ್ಮ ಇಷ್ಟದವರು ನಿಮ್ಮ ಭೇಟಿಯಾಗಬಹುದು. ಕಲಾವಿದರಿಗೆ ಹೆಚ್ಚಿನ ಸ್ಥಾನಗಳು ಸಿಗಬಹುದು. ನಂಬಿಕೆಯನ್ನು ಕಳೆದುಕೊಳ್ಳಬೇಕಾದ ದಿನವೂ ಇದಾಗಿರುತ್ತದೆ‌. ಶತ್ರುಗಳು ನಿಮಗೆ ಹೆಚ್ಚು ತೊಂದರೆಯನ್ನು ಕೊಡಬಹುದು. ಬಂಧುಗಳ ಜೊತೆ ವಿವಾದವು ಏರ್ಪಡಲಿದ್ದು ನಿಮ್ಮ ಬಗ್ಗೆ ನಕಾರಾತ್ಮಕ ಅಭಿಪ್ರಾಯವೂ ಬರಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಶಿವ, ಕರಣ : ಬವ, ಸೂರ್ಯೋದಯ – 06 – 14 am, ಸೂರ್ಯಾಸ್ತ – 06 – 36 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:20 – 10:53, ಯಮಗಂಡ ಕಾಲ 13:58 – 15:31, ಗುಳಿಕ ಕಾಲ 06:15 – 07:47

-ಲೋಹಿತ ಹೆಬ್ಬಾರ್ – 8762924271 (what’s app only)

Source link

Leave a Reply

Your email address will not be published. Required fields are marked *