ಮೇಷ ರಾಶಿ:
ಯಾರದರು ಪ್ರೀತಿಯಿಂದ ಏನನ್ನೇ ಕೊಟ್ಟರೂ ಅದನ್ನು ಸ್ವೀಕರಿಸಿ. ಅದರ ಬಗ್ಗೆ ಟೀಕೆಗಳನ್ನು ಮಾಡಿ ಭಾವನೆಗೆ ಹೊಡೆತ ಕೊಡುವುದು ಬೇಡ. ಉದ್ಯೋಗದಲ್ಲಿ ಬದಲಾವಣೆ ಯೋಗವಿದೆ. ಶೀತಲ ಸಮರದಿಂದ ವಿರಾಮ ಸಿಗಲಿದೆ. ಹಣಕಾಸಿನಲ್ಲಿ ಲಾಭದ ಸೂಚನೆಗಳಿವೆ. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆಯಾಗಲಿದೆ. ಹಿರಿಯರಿಂದ ಆಶೀರ್ವಾದವನ್ನು ಪಡೆಯಿರಿ. ಶರೀರದಲ್ಲಿ ಅಸಮತೋಲನವು ಇರಲಿದೆ.
ವೃಷಭ ರಾಶಿ:
ನಿಮಗೆ ಆತ್ಮವಿಶ್ವಾಸವು ನಿಮ್ಮ ಆಲೋಚನೆಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ. ಬುದ್ದಿಯ ಚಾತುರ್ಯದಿಂದ ಸಮಸ್ಯೆಗಳನ್ನು ಪರಿಹರಿಸಬಹುದು. ವ್ಯವಹಾರಗಳಲ್ಲಿ ಹೊಸ ಅವಕಾಶಗಳು ಸಿಗುತ್ತವೆ. ಹಣಕಾಸಿನಲ್ಲಿ ಸ್ವಲ್ಪ ಎಚ್ಚರತೆ ಅಗತ್ಯವಿದೆ. ಮನಸ್ಸು ಸ್ವಲ್ಪ ಗೊಂದಲದಲ್ಲಿದ್ದರೂ ನಿರ್ಧಾರ ತಾಳ್ಮೆಯಿಂದ ತೆಗೆದುಕೊಳ್ಳಿ. ದಾಂಪತ್ಯದಲ್ಲಿ ಮನಸ್ತಾಪವನ್ನು ಶಾಂತಗೊಳಿಸಿಕೊಳ್ಳುವುದು ಒಳ್ಳೆಯದು. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು.
ಮಿಥುನ ರಾಶಿ:
ಇಂದು ನೀವು ಮತ್ತು ನಿಮ್ಮ ಸಂಗಾತಿ ಉತ್ತಮ ಸಮಯವನ್ನು ಹೊಂದುವಿರಿ. ವೃತ್ತಿಪರ ಜೀವನದಲ್ಲಿ ಪ್ರಗತಿಯ ಮಾರ್ಗ ತೆರೆಯಲಿದೆ. ಹಣಕಾಸಿನ ಲೆಕ್ಕಾಚಾರ ನಿಖರವಾಗಿರಲಿ. ಸಾಲವನ್ನು ಹಂತವಾಗಿ ತೀರಿಸಲು ಒಪ್ಪಿಗೆ ತೆಗೆದುಕೊಳ್ಳುವಿರಿ. ಸಜ್ಜನರೊಂದಿಗೆ ಮಾತುಕತೆ ನಿರ್ಣಯವನ್ನು ಬಲಪಡಿಸಬಹುದು. ನಿಮ್ಮ ಜೀವನ ಸಂಗಾತಿಯನ್ನು ಹುಡುಕಲು ಇಂದು ಅತ್ಯುತ್ತಮ ದಿನವಾಗಲಿದೆ. ಎಲ್ಲವೂ ಗೊತ್ತಿದ್ದರೂ ಏನೂ ಗೊತ್ತಿಲ್ಲದಂತೆ ಇರುವಿರಿ. ಸರ್ಕಾರಿ ಕೆಲಸವನ್ನು ಮಾಡಿಸಿಕೊಳ್ಳುವುದು ನಿಧಾನವಾಗಲಿದೆ.
ಕರ್ಕಾಟಕ ರಾಶಿ:
ನಿಮ್ಮ ಯಾತ್ರೆಯ ಯೋಜನೆಗಳು ಯಶಸ್ವಿಯಾಗಲಿವೆ. ಉದ್ಯೋಗದಲ್ಲಿ ನವೀನ ಅವಕಾಶಗಳು ಲಭ್ಯ. ಕಳೆದ ವಸ್ತುಗಳು ನಿಮ್ಮ ಕೈ ಸೇರಲಿದೆ. ಹಣಕಾಸಿನ ಬಗ್ಗೆ ನಿಯಂತ್ರಣವಹಿಸಿ. ಮನೆಯೊಳಗಿನ ಒತ್ತಡದ ಪರಿಸ್ಥಿತಿಗಳಲ್ಲಿ ಶಾಂತಿ ಕಾಪಾಡುವುದು ಮುಖ್ಯ. ಭೂಮಿಯ ಖರೀದಿಯನ್ನು ಏಕಮುಖವಾಗಿ ಮಾಡುವುದು ಬೇಡ. ಬರಬೇಕಾದ ಧನಾಗಮನದ ನಿರೀಕ್ಷೆಯಲ್ಲಿ ಇಂದು ಇರುವಿರಿ. ಭಾವುಕರಾಗುವ ಸಂದರ್ಭವು ಬರಬಹುದು. ನಿರಂತರ ಕಾರ್ಯದಿಂದ ವಿಶ್ರಾಂತಿಯನ್ನು ಪಡೆಯುವಿರಿ.
ಸಿಂಹ ರಾಶಿ:
ಆಪ್ತವಾದ ಬಾಂಧವ್ಯದಲ್ಲಿ ಮನಸ್ತಾಪ ಕಾಣಿಸಿಕೊಳ್ಳುವುದು. ನಿಮ್ಮ ಸಂಗಾತಿಯು ನಿಮ್ಮ ಕೆಲವು ಅಭ್ಯಾಸಗಳನ್ನು ಬದಲಾಯಿಸಲು ಪ್ರಯತ್ನಿಸುತ್ತಾರೆ. ನಿರ್ಧಾರಗಳಲ್ಲಿ ಸ್ಪಷ್ಟತೆಯಿರುವುದರಿಂದ ಮುನ್ನಡೆ ಸುಲಭವಾಗುತ್ತದೆ. ಕುಟುಂಬದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವಿರಿ. ಹಣಕಾಸಿನಲ್ಲಿ ನೆಮ್ಮದಿಯ ಚಲನವಿದೆ. ಅಮೇಧ್ಯವಾದ ಆಹಾರವನ್ನು ಸೇವಿಸುವ ಸಂದರ್ಭವು ಬರಬಹುದು. ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು.
ಕನ್ಯಾ ರಾಶಿ:
ನಿಮಗೆ ಆರ್ಥಿಕತೆಯಲ್ಲಿ ಸ್ಪಷ್ಟತೆ ಅವಶ್ಯವಾಗಿ ಇರಬೇಕು. ಇಂದೇ ಆಲೋಚನೆ ಸ್ಥಿರವಾಗಿ ಇರದು. ಕಲಾತ್ಮಕ ಕ್ಷೇತ್ರದಲ್ಲಿ ಇರುವವರಿಗೆ ಅವಕಾಶಗಳು ಲಭಿಸಲಿವೆ. ಆರ್ಥಿಕವಾಗಿ ಮಿತವ್ಯಯವೂ ಲಾಭವೂ ಸಮಾಮವಾಗಿರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ಮೂಲಕ ಹೆಸರು ಮಾಡಬಹುದು. ಜವಾಬ್ದಾರಿಗಳಲ್ಲಿ ಕಷ್ಟವಾಗಿದ್ದರೂ ಯಶಸ್ಸು ಖಚಿತ. ಸಹೋದ್ಯೋಗಿಗೆ ಸಹಾಯ ಮಾಡುವ ಸ್ಥಿತಿಯು ನಿಮಗೆ ಬರಬಹುದು.
ತುಲಾ ರಾಶಿ:
ನಿಮಗೆ ಆಶ್ಚರ್ಯಗಳಿಂದ ಕೂಡಿದ ಕೆಲವು ಸಂಗತಿಗಳು ಗೊತ್ತಾಗಬಹುದು. ಅನ್ಯರ ಸಂಧಾನಕ್ಕೆ ನಿಮ್ಮನ್ನು ಭೇಟಿ ಮಾಡಲು ಆಪ್ತರು ಬರಬಹುದು. ಕೆಲಸದ ಕ್ಷೇತ್ರದಲ್ಲಿ ನೀವಂದುಕೊಂಡಂತೆ ಆಗಲಿದೆ. ಪುಣ್ಯಸ್ಥಳದಿಂದ ಮನಸ್ಸು ಶಾಂತವಾಗಿರಲು ಧ್ಯಾನ ಸಹೋದ್ಯೋಗಿಗಳ ಸುಲಭವಾಗಬಹುದು. ಸಹಕಾರದಿಂದ ಕೆಲಸ ದೂರದ ಪ್ರಯಾಣದ ಯೋಗವಿದೆ. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಇಚ್ಛಿಸುವಿರಿ. ನಿಮ್ಮ ಅಸಹಕಾರದಿಂದ ಮಕ್ಕಳಿಗೆ ಬೇಸರವಾದೀತು. ಅಯಾಚಿತ ಭಾಗ್ಯದಿಂದ ಖುಷಿಯಾಗಲಿದೆ.
ವೃಶ್ಚಿಕ ರಾಶಿ:
ನಿಮಗೆ ಉದ್ಯೋಗಕ್ಕೆ ಬೇಕಾದ ಉಪಯುಕ್ತ ಮಾಹಿತಿಯನ್ನು ಪಡೆಯುವಿರಿ. ಈ ದಿನ ನೀವು ಎಂದಿನಂತೆ ಇರದೇ ಶಾಂತಿಯುತವಾಗಿ ನಡೆದುಕೊಳ್ಳುವಿರಿ. ಹಣಕಾಸಿನ ಲೆಕ್ಕಾಚಾರ ಸರಿಯಾಗಿ ನಿಭಾಯಿಸಬೇಕು. ಶತ್ರುಗಳಿಗೆ ನಿಮ್ಮ ಸಂದೇಶವನ್ನು ನೀಡುವಿರಿ. ಆಸ್ತಿ ಸಂಬಂಧಿತ ವಿಚಾರಗಳಲ್ಲಿ ಮುನ್ನೋಟವಿರಲಿ. ಅನಿರೀಕ್ಷತ ಅನಾರೋಗ್ಯದಿಂದ ಹಣವು ಖರ್ಚಾಗಬಹುದು. ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುವಿರಿ.
ಧನು ರಾಶಿ:
ಭಾವುಕತೆಯಿಂದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಕುಟುಂಬದ ಬೆಂಬಲದಿಂದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಬಹುದು. ವೃತ್ತಿಪರ ಜೀವನದಲ್ಲಿ ಗುರುತುಪಡಿಸುವ ಅವಕಾಶ ಸಿಗಲಿದೆ. ಮಾತನಾಡಲು ಯಾರಿಲ್ಲದೇ ನಿಮ್ಮ ಸ್ನೇಹಿತರೊಂದಿಗೆ ಸಮಯ ಕಳೆಯಿರಿ. ನಿಮ್ಮನ್ನು ಸಂತೋಷದಿಂದ ಇಟ್ಟುಕೊಳ್ಳಲು ಬೇಕಾದ ಮಾರ್ಗವನ್ನು ಕಂಡುಕೊಳ್ಳಿ. ನಿಮ್ಮ ಪೋಷಕರ ಸಲಹೆಯನ್ನು ಅನುಸರಿಸಿ, ಸಂಬಂಧವನ್ನು ಉತ್ತಮವಾಗಿಸಿಕೊಳ್ಳಿ.
ಮಕರ ರಾಶಿ:
ನಿಮ್ಮ ಸ್ವಲ್ಪ ಕೆಲಸದಿಂದ ನೀವು ಗಣನೀಯ ಪ್ರಮಾಣದ ಹಣ ಪಡೆಯಬಹುದು. ನೀವು ಯುವಕರ ಜೊತೆ ಸಮಯ ಕಳೆಯುವಿರಿ. ನಿಮ್ಮೊಳಗಿನ ಶತ್ರುಗಳಿಂದ ನಿಮ್ಮ ಕಾರ್ಯ ಕುಂಟುತ್ತ ಹೋಗುವುದು. ಸಂವಹನ ಶಕ್ತಿಯಿಂದ ಕಾರ್ಯಕ್ಷೇತ್ರದಲ್ಲಿ ಉತ್ಸಾಹದಿಂದ ಮುಂದುವರೆಯಲು ಅವಕಾಶ ಸಿಗುವುದು. ಉದ್ಯಮದಲ್ಲಿ ಹೊಸ ಪ್ರಯತ್ನಗಳು ಫಲ ನೀಡುವವು. ದಾಂಪತ್ಯದಲ್ಲಿ ಮನಸ್ತಾಪಗಳು ಎದ್ದು ಶಾಂತವಾಗುವುದು. ಉಚಿತವಾದುದನ್ನು ಮಾತ್ರ ಪಡೆಯಿರಿ. ನಿಮ್ಮ ಆರೋಗ್ಯವು ಇಂದು ಚೆನ್ನಾಗಿರಲಿದೆ.
ಕುಂಭ ರಾಶಿ:
ಇಂದು ಭೂಮಿಗೆ ಸಂಬಂಧಿಸಿದಂತೆ ಲಾಭ ಪಡೆಯುವಿರಿ. ಕುಟುಂಬದ ಸದಸ್ಯರೊಂದಿಗೆ ಅಲ್ಪವಿರಾಮ ತೆಗೆದು ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳಿ. ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ ದಿನ. ಉದ್ಯೋಗದಲ್ಲಿ ಶ್ಲಾಘನೆಗೆ ಪಾತ್ರರಾಗುವಿರಿ. ಮುಂಜಾಗ್ರತೆಯಿಂದ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಇಂದಿನ ಅಗತ್ಯ. ಅಪರೂಪದ ಬಂಧುಗಳ ಸಮಾಗಮವಾಗಲಿದ್ದು, ಸಂತೋಷವಾಗಲಿದೆ. ದೇವಾಲಯಕ್ಕೆ ಹೋಗಿ ನೆಮ್ಮದಿಯನ್ನು ಪಡೆದುಕೊಳ್ಳುವಿರಿ.
ಮೀನ ರಾಶಿ:
ಯಾವುದೇ ಮಹತ್ವದ ಹಣಕಾಸಿನ ವಹಿವಾಟುಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ. ನೀವು ಸಣ್ಣ ವಿಷಯಗಳ ಬಗ್ಗೆಯೂ ಗಾಢವಾಗಿ ಇಂದು ಚಿಂತಿಸುವಿರಿ. ಮನಸ್ಸಿನಲ್ಲಿ ಉತ್ಸಾಹವಿದ್ದು ಹೊಸ ಕಾರ್ಯಗಳಲ್ಲಿ ತೊಡಗಲು ಇಚ್ಛೆ ಮೂಡುತ್ತದೆ. ಉದ್ಯೋಗದಲ್ಲಿ ಪ್ರಗತಿಯ ಸುಳಿವುಗಳು ಸಿಗುತ್ತವೆ. ಹಣಕಾಸಿನ ವಿಷಯದಲ್ಲಿ ಹೆಚ್ಚು ಎಚ್ಚರಿಕೆ ವಹಿಸುವುದು ಒಳಿತು. ಸಂತೋಷಕ್ಕೆ ಅಡ್ಡಿಯಾಗುವ ಕಾರ್ಯವನ್ನು ಮಾಡಿಕೊಂಡು ಪಶ್ಚಾತ್ತಾಪ ಪಡುವಿರಿ. ಅಜಾಗರೂಕತೆಯಿಂದ ನಿಮ್ಮ ವಸ್ತುವು ಇನ್ನೊಬ್ಬರ ಪಾಲಾಗಬಹುದು.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ರೇವತೀ, ಯೋಗ : ಪ್ರೀತಿ, ಕರಣ : ಗರಜ, ಸೂರ್ಯೋದಯ – 05 – 58 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:56 – 15:32, ಯಮಗಂಡ ಕಾಲ 05:59 – 07:34, ಗುಳಿಕ ಕಾಲ 09:10 – 10:45
-ಲೋಹಿತ ಹೆಬ್ಬಾರ್ – 8762924271 (what’s app only)