Headlines

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಎಲ್ಲದಕ್ಕೂ ಅತಿಯಾಗಿ ಬಳಸಿಕೊಳ್ಳುವರು – Kannada News | Horoscope May 15 Friday 2026; Dina Rashi Bhavishya Today, Checkout the details here

ಮೇಷ ರಾಶಿ:

ಇಷ್ಟವಿಲ್ಲದ ವಿಚಾರಗಳೇ ನಿಮ್ಮ ಸುತ್ತ ಮಾತನಾಡಿ ಮಾನಸಿಕ ಹಿಂಸೆ ಕೊಡುವರು. ಇಂದು ಸ್ವಲ್ಪ ಮಟ್ಟಿಗೆ ಆರ್ಥಿಕ ಬೆಳವಣಿಗೆ ಕಾಣಿಸಿ ಸಮಾಧಾನವಾಗುವುದು. ಹಣಕಾಸು ಯೋಜನೆಗಳಲ್ಲಿ ಸ್ಪಷ್ಟತೆ ಇರಲಿ. ನಿದ್ದೆಯ ಕೊರತೆ ದೈನಂದಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವರ‌ ಮಾತಿನಿಂದ ನಿಮ್ಮ ವ್ಯಕ್ತಿತ್ವವು ಬದಲಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು.

ವೃಷಭ ರಾಶಿ:

ಆಹಾರ ವ್ಯತ್ಯಾಸದಿಂದ ಉದರ ಬಾಧೆ ಹೆಚ್ಚಾಗುವುದು. ಹಿರಿಯರ‌ ಸೇವೆಯ ಬಗ್ಗೆ ಹೆಮ್ಮೆ ಇರಲಿದೆ. ಸರ್ಕಾರದ ಉದ್ಯೋಗದಲ್ಲಿ ಹೊಸ ಜವಾಬ್ದಾರಿಯನ್ನು ಪಡೆಯಬೇಕಾಗುವುದು. ಉದ್ಯೋಗದಲ್ಲಿ ಸಣ್ಣ ಯತ್ನದಿಂದಲೇ ದೊಡ್ಡ ಫಲ ಸಿಗಬಹುದು. ಮಿತ್ರರ ಸಹಕಾರವನ್ನು ಬಹಳ ದಿನಗಳ ಅನಂತರ ಕೇಳುವಿರಿ. ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡೀತು. ಯಾರನ್ನೂ ಅಪಮಾನ ಮಾಡುವುದು ಬೇಡ. ಅಪ್ರಯೋಜಕ ಮಾತುಗಳಿಗೆ ಕಿವಿಯಾಗುವಿರಿ.

ಮಿಥುನ ರಾಶಿ:

ಉದ್ಯೋಗ ಸ್ಥಳದಲ್ಲಿ ಕಿರಿಕಿರಿಯ ಕಾರಣ ಕಾರ್ಯವು ಸೂಚಿಸದೇ ಬಹಳ ಜಡರಾಗುವಿರಿ‌. ಹಣ ನಷ್ಟದಿಂದ ಚಿಂತೆ ಆಗಬಹುದಾದರೂ ಶೀಘ್ರವೇ ಪರಿಹಾರ ಕಂಡುಬರಲಿದೆ. ನಿಮಗೆ ಸರಿಕಂಡ ಕಾರ್ಯವನ್ನು ಯಾವುದೇ ಹಿಂಜರಿಕೆ ಇಲ್ಲದೇ ಮಾಡುವಿರಿ. ಸ್ನೇಹಿತರಿಂದ ಸಣ್ಣ ಹಾಸ್ಯದ ಸಂದರ್ಭಗಳು ಒತ್ತಡ ತಗ್ಗಿಸಬಲ್ಲವು. ದಿನದ ಅಂತ್ಯದಲ್ಲಿ ಆನಂದದ ಕ್ಷಣಗಳು ನಿಮ್ಮನ್ನು ಹತ್ತಿರದಿಂದ ತಲುಪುತ್ತವೆ. ವ್ಯಕ್ತಿತ್ವದ ಬಗ್ಗೆ ಇತರರು ಹೆಮ್ಮೆಪಡುವರು. ಉದ್ಯಮವನ್ನು ಅನ್ಯ ಮಾರ್ಗದಲ್ಲಿ ಮುಂದುವರಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುವಿರಿ.

ಕರ್ಕಾಟಕ ರಾಶಿ:

ಮಕ್ಕಳಿಗಾಗಿ ವಿಶೇಷ ಅಡುಗೆಯನ್ನು ಮಾಡುವ ಬಗ್ಗೆ ಆಲೋಚನೆ ಮಾಡುತ್ತೀರಿ. ಕಲ್ಪನೆಯ ಶಕ್ತಿ ಹೆಚ್ಚಾಗುತ್ತದೆ, ಆದರೆ ಅದು ದುರ್ಬಳಕೆಗೆ ಕಾರಣವಾಗಬಾರದು. ಕೆಲಸದಲ್ಲಿ ಗಮನ ಹರಿಸುವ ಅಗತ್ಯವಿದೆ. ವಾಹನ‌ ದುರಸ್ತಿ ಅನಿರೀಕ್ಷಿತವಾಗಬಹುದು. ಖರ್ಚು ನಿಯಂತ್ರಣ ಮಾಡದಿದ್ದರೆ ಹಣಕಾಸಿನಲ್ಲಿ ಅಸ್ವಸ್ಥತೆ ಉಂಟಾಗಬಹುದು. ವಿವಾಹಕ್ಕೆ ಸಂಬಂಧಿಸಿದಂತೆ ಓಡಾಟವನ್ನು ಮಾಡಬೇಕಾಗುವುದು. ಅಸೂಯೆಯ ಕಾರಣ ದ್ವೇಷಭಾವವು ಸಹೋದ್ಯೋಗಿಯ ಬಗ್ಗೆ ನಿಮ್ಮಲ್ಲಿ ಮೂಡಬಹುದು.

ಸಿಂಹ ರಾಶಿ:

ನಿಮ್ಮನ್ನು ಉಪಯೋಗಿಸಿಕೊಳ್ಳುವವರ ಜೊತೆ ವಾಗ್ವಾದ. ಕಠಿಣ ಪರಿಶ್ರಮ ಇಂದು ಫಲ ನೀಡಲಿದೆ. ಉದ್ಯೋಗದಲ್ಲಿ ಉನ್ನತಿ ಅಥವಾ ಬದಲಾವಣೆಯ ಸೂಚನೆ ಇದೆ. ಹಣಕಾಸಿನಲ್ಲಿ ಲಾಭದ ಸಂದರ್ಭ ಎದುರಾಗಬಹುದು. ಕುಟುಂಬದಲ್ಲಿ ಸಣ್ಣ ಸಂಗತಿಗಳು ಸಂತೋಷ ನೀಡಬಹುದು. ಮನೋರಂಜನೆಗೆ ನಿಮಗೆ ಸಮಯವು ಸಿಗುವುದು. ಇನ್ನೊಬ್ಬರ ಕೆಲಸದ ಹೊರೆಯೂ ನಿಮಗೆ ಬರಲಿದೆ. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು.

ಕನ್ಯಾ ರಾಶಿ:

ಉದ್ಯೋಗದಲ್ಲಿ ಒತ್ತಡ ನಿವಾರಣೆಯನ್ನು ನೀವೇ ಸ್ವತಃ ಮಾಡಿಕೊಳ್ಳಬೇಕಾಗುವುದು. ಮಾತುಗಳು ಇನ್ನೊಬ್ಬರ ಮೇಲೆ ಪರಿಣಾಮ ಬೀರಬಹುದು, ಆದ್ದರಿಂದ ಎಚ್ಚರಿಕೆಯಿಂದ ಮಾತನಾಡಿ. ಒಪ್ಪಂದಗಳಿಂದ‌ ಜಾರಿಕೊಳ್ಳುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಪಡೆಯುವ ಸಂಭವ. ಹಣಕಾಸಿನಲ್ಲಿ ಜ್ಞಾನದಿಂದ ನಿರ್ವಹಣೆ ಅಗತ್ಯವಿದೆ. ಸಂಗಾತಿಯ ಆರೋಗ್ಯವನ್ನು ನೋಡಿಕೊಳ್ಳುವ ಭರದಲ್ಲಿ ಕೆಲವು ಕಾರ್ಯಗಳನ್ನು ಮರೆಯಬಹುದು. ಪಾಲುದಾರಿಕೆಯಲ್ಲಿ ಆದ ಮನಸ್ತಾಪವನ್ನು ಮುಂದುವರಿಸದೇ ಸುಮ್ಮನಿರಿ.

ತುಲಾ ರಾಶಿ:

ಆರ್ಥಿಕ ವ್ಯವಹಾರವನ್ನು ಮತ್ತೊಬ್ಬರ ಸಹಾಯದಿಂದ ಸರಿ ಮಾಡಿಕೊಳ್ಳುವಿರಿ. ಹಣಕಾಸು ಪ್ರಗತಿಗೆ ಯೋಗ್ಯ ಸಮಯ. ಸರ್ವತೋಮುಖ ವಿಕಾಸಕ್ಕೆ ಸಮಯ ಸಾಕಾಗದು. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಬಹುದು. ಆರೋಗ್ಯದಲ್ಲಿ ಒತ್ತಡದ ಕಾರಣ ತಲೆನೋವು ಉಂಟಾಗಲಿದೆ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ಉನ್ನತ ವಿದ್ಯಾಭ್ಯಾಸಕ್ಕೆ ಮನೆಯಿಂದ ದೂರವಿರಲು ಯತ್ನಿಸುವಿರಿ.

ವೃಶ್ಚಿಕ ರಾಶಿ:

ಉದ್ಯೋಗದಲ್ಲಿ ನೀವು ಬಹಳ ಪ್ರಾಮಾಣಿಕವಾಗಿ ಇರುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಅನಿರೀಕ್ಷಿತ ಬೆಳವಣಿಯಾಗುವುದು ಖುಷಿ ಕೊಡುವುದು. ಒತ್ತಡ ಹೆಚ್ಚಾದರೂ ಅದು ನಿಮ್ಮ ಉತ್ಸಾಹದ ಮೇಲೆ ಪರಿಣಾಮ ಬೀರದು. ವಿದ್ಯಾರ್ಥಿಗಳು ಓದಿನ ಕಡೆ ವಿಶೇಷ ಗಮನವನ್ನು ಕೊಡುವುದು ಕಷ್ಟವಾದೀತು. ಬಂಧುಗಳ ಕುಹಕಕ್ಕೆ ಸಿಲುಕುವಿರಿ. ಆಸ್ತಿಯಲ್ಲಿ ಪಾಲುದಾರಿಕೆಯು ನಿಮಗೆ ಸಮಾಧಾನ ಕೊಡದು.

ಧನು ರಾಶಿ:

ಉದ್ಯೋಗವನ್ನು ಹುಡುಕುತ್ತಿರುವವರಿಗೆ ಉದ್ಯೋಗ ಲಾಭವಾಗಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಪ್ರತಿಭೆ ಗುರುತಿಸಲ್ಪಡುತ್ತದೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗುತ್ತದೆ. ಇಂದು ಕೈ ಹಾಕಿದ ಹೊಸ ಕೆಲಸ ಶುಭದಾಯಕವಾಗಬಹುದು. ರಾಜಕೀಯದಲ್ಲಿ ಕೈಜೋಡಿಸುವ ಬಗ್ಗೆ ಕುತೂಹಲವಿರುವುದು. ಸಾಮಾಜಿಕ ಕಾರ್ಯವು ನಿಮ್ಮನ್ನು ಸೆಳೆಯುವುದು. ಏಕಾಗ್ರತೆಯಿಂದ ನಿಮ್ಮ ಮತ್ತೆಲ್ಲ ಕಾರ್ಯಗಳೂ ನಿಧಾನವಾಗಬಹುದು.

ಮಕರ ರಾಶಿ:

ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ನಿಮಗೆ ಅನಾನುಕೂಲ ಉಂಟಾಗುವುದು. ಇಂದು ಸೃಜನಾತ್ಮಕ ಚಟುವಟಿಕೆಗಳಿಗೆ ಒತ್ತು ನೀಡುವ ದಿನ. ವಿದ್ಯಾರ್ಥಿಗಳಿಗೆ ಉತ್ತಮ ಅಭ್ಯಾಸದಿಂದ ಲಾಭ. ಹಣಕಾಸಿನಲ್ಲಿ ಖರ್ಚು ಹೆಚ್ಚಾಗಬಹುದು. ಇಂದು ನಿಮ್ಮ ನಿರ್ಧಾರಗಳು ಉತ್ತಮ ಫಲ ನೀಡಲಿವೆ. ಮೇಲಧಿಕಾರಿಗಳ ಜೊತೆಗಿನ ಸಲುಗೆಯು ದುರುಪಯೋಗ ಆಗಬಹುದು. ವ್ಯವಹಾರದಲ್ಲಿ ಚುರುಕು ಸಾಲದು. ನಿಮ್ಮ ಸರಳತೆಯು ಜೊತೆಗಾರರಿಗೆ ಇಷ್ಟವಾಗುವುದು.

ಕುಂಭ ರಾಶಿ:

ನೆರೆ ಹೊರೆಯವರು ನಿಮಗೆ ಸಹಕಾರ ನೀಡದೇ ಕಷ್ಟವಾಗುವುದು. ಸಂಗಾತಿಯ ಜೊತೆ ಭಾವನೆಗಳನ್ನು ವ್ಯಕ್ತಪಡಿಸಲು ಉತ್ತಮ ದಿನ. ಕೆಲಸದಲ್ಲಿ ನೀವು ನಿರೀಕ್ಷಿಸುವ ಪ್ರಗತಿ ಕಾಣಬಹುದು. ಹಣಕಾಸಿನಲ್ಲಿ ಬುದ್ಧಿವಂತಿಕೆ ಅಗತ್ಯವಿದೆ. ನಿಮಗೆ ಕಾರ್ಯಗಳು ನಿಮಗೆ ತೃಪ್ತಿಯನ್ನು ಕೊಡುವಂತಿರಲಿ. ಆತುರದಲ್ಲಿ ಯಾವ ನಿರ್ಧಾರಕ್ಕೂ ಬರದೇ, ತಾಳ್ಮೆಯಿಂದ ಎಲ್ಲವೂ ತಿಳಿಯಾದಮೇಲೆ ನಿರ್ಧರಿಸಿ. ಎಲ್ಲವೂ ಸರಿಯಾಗುವುದು.

ಮೀನ ರಾಶಿ:

ಕೆಟ್ಟ ವಾಹನದ ಚಾಲನೆಯಿಂದ ಅಪಘಾತ ಸಂಭವಿಸಬಹುದು. ನ್ಯಾಯಾಲಯದ ಬಗ್ಗೆ ನಿಮಗೆ ಬಹಳ ಚಿಂತೆ‌ ಕಾಡುವುದು. ನಿಮ್ಮ ಹಣಕಾಸಿನ ಸ್ಥಿತಿಯನ್ನು ಹೇಳಿಕೊಳ್ಳಲು ಇಷ್ಟವಾಗದು. ಹೊಸ ಯೋಚನೆಗಳು ಬೆಳಕಿಗೆ ಬರುತ್ತವೆ. ಉದ್ಯೋಗದಲ್ಲಿ ಹೊಸ ಯೋಜನೆ ಆರಂಭವಾಗುವ ಯೋಗವಿದೆ. ಹಣಕಾಸಿನಲ್ಲಿ ನೂತನ ಆದಾಯದ ಮಾರ್ಗಗಳು ರೂಪುಗೊಳ್ಳಬಹುದು. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಮನೆಯ ಎಷ್ಟೋ ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ಆಯುಷ್ಮಾನ್, ಕರಣ : ಭದ್ರ, ಸೂರ್ಯೋದಯ – 05 – 58 am, ಸೂರ್ಯಾಸ್ತ – 06 – 43 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:45 – 12:21, ಯಮಗಂಡ ಕಾಲ 15:32 – 17:08, ಗುಳಿಕ ಕಾಲ 07:34 – 09:10

-ಲೋಹಿತ ಹೆಬ್ಬಾರ್ – 8762924271 (what’s app only)

Source link

Leave a Reply

Your email address will not be published. Required fields are marked *