ದಿನ ಭವಿಷ್ಯ: ಇಂದು ಈ ರಾಶಿಯವರು ಹೊಸ ಕಾರ್ಯವನ್ನು ಆರಂಭಿಸುವುದು ಬೇಡವೇ ಬೇಡ.. – Kannada News

ಮೇಷ ರಾಶಿ:

ಆದಾಯಕ್ಕೆ ಯೋಗ್ಯವಾದ ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಶಕ್ತಿ, ಸಾಮರ್ಥ್ಯಗಳು ಅನ್ಯರಿಗೂ ತಿಳಿಯಲಿದೆ ಇಂದು. ಸಂಗಾತಿಯಿಂದ ಅನಿರೀಕ್ಷಿತ ಮಾತುಗಳನ್ನು ಕೇಳಿ ಆಶ್ಚರ್ಯಪಡುವಿರಿ. ಮಕ್ಕಳಿಗೆ ನಿಮ್ಮ ಬಗ್ಗೆ ಹೆಮ್ಮೆಯಾಗಲಿದೆ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ.

ವೃಷಭ ರಾಶಿ:

ಪರಿಚಿತರಿಂದ ಶತ್ರು ಬಾಧೆಯನ್ನು ತಪ್ಪಿಸಿಕೊಳ್ಳುವಿರಿ. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಕೆಲವೊಂದು ಕೆಲಸ ಕಾರ್ಯಗಳಲ್ಲಿ ನೀವು ಆತ್ಮವಿಶ್ವಾಸದ ಕೊರತೆಯನ್ನು ಅನುಭವಿಸಬಹುದು. ಆದರೆ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳನ್ನು ದೂರವಿಡಬೇಕು. ಯಾರನ್ನಾದರೂ ಮಾದರಿ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂದು ನಂಬುವಿರಿ.

ಮಿಥುನ ರಾಶಿ:

ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳು ಉಪಯುಕ್ತ ಮಾಹಿತಿಯನ್ನು ಕೊಟ್ಟಾರು.‌ ಮನಸ್ಸಿನಲ್ಲಿ ಬೇಸರ ಇರುತ್ತದೆ. ಆತ್ಮವಿಶ್ವಾಸದ ಕೊರತೆ ಇರುತ್ತದೆ. ಶೈಕ್ಷಣಿಕ ಕೆಲಸದಲ್ಲಿ ಯಶಸ್ವಿಯಾಗುವಿರಿ. ಬುದ್ಧಿವಂತಿಕೆಗೆ ಸಂಬಂಧಿಸಿದ ಕಾರ್ಯಗಳಿಂದ ಆದಾಯ ಹೆಚ್ಚಾಗುತ್ತದೆ. ಹಣವನ್ನು ನೀವೇ ಕೇಳಿ ಒಡೆಯುವುದು ಉತ್ತಮ. ಮನೆಯ ವಿಚಾರವನ್ನು ಯಾರ ಬಳಿಯೂ ಹಂಚಿಕೊಳ್ಳುವುದು ಬೇಡ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ.

ಕರ್ಕಾಟಕ ರಾಶಿ:

ಕೈ ತಪ್ಪಿ ಹೋಗುವ ಕೆಲಸವನ್ನು ಹೇಗಾದರೂ ಉಳಿಸಿಕೊಳ್ಳುವಿರಿ. ಕಲೆಯ ಕಡೆಗೆ ಒಲವು ಹೆಚ್ಚಾಗಬಹುದು. ನಿಮ್ಮನ್ನು ಎಲ್ಲ ರೀತಿಯಿಂದ ಬಂಧನ ಮಾಡುವ ಪ್ರಯತ್ನ ಇರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಜಂಜಾಟವಿರುತ್ತದೆ. ಕುಟುಂಬವು ನಿಮ್ಮ ಬೆಂಬಲಕ್ಕೆ ಇರಲಿದೆ. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು.

ಸಿಂಹ ರಾಶಿ:

ಹಿತಶತ್ರುಗಳಿಂದ ನೀವು ಹತಾಶರಾದಂತೆ ತೋರುವುದು. ನಿಮ್ಮ ಎಚ್ಚರಿಕೆಯಲ್ಲಿ ನೀವಿರಬೇಕು. ನಿಮ್ಮನ್ನು ಗೆಲ್ಲಲು ಸಹೋದ್ಯೋಗಿಗಳು ಪ್ರಯತ್ನಿಸುವರು. ನೀವು ಇಷ್ಟ ಪಟ್ಟಿದ್ದು ಆಗಿಲ್ಲವೆಂಬ ಆಲೋಚನೆ ಬಲವಾಗಿರುವುದು. ಅನಿರೀಕ್ಷಿತ ಹಣದ ವ್ಯಯದಿಂದ ಸ್ವಲ್ಪ ಚಂಚಲರಾಗುವಿರಿ. ಮೊದಲ ವೇತನವನ್ನು ಪಡೆದು ಖುಷಿ ಪಡುವಿರಿ. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ. ಯಾರ‌ನ್ನೂ ಮಾನಸಿಕವಾಗಿ ಹಿಂಸಿಸುವುದು ಬೇಡ.

ಕನ್ಯಾ ರಾಶಿ:

ಮತಿಯ ಕುರುಡು ತನದಿಂದ ಎಲ್ಲಿಯೋ ಹೂಡಿಕೆ ಮಾಡುವರಿ. ಮತ್ತೊಬ್ಬರೊಂದಿಗೆ ಮಾತನಾಡುವಾಗ ಮಾತುಗಳ ಮೇಲೆ ಎಚ್ಚರ ಇರಲಿ. ಪ್ರಯಾಣದಲ್ಲಿ ವಿಘ್ನ ಬಂದರೂ ಕೊನೆಗೆ ಅಂತ್ಯ ಕಾಣುವಿರಿ.‌ ವೆಚ್ಚಗಳು ಹೆಚ್ಚಾಗಬಹುದು, ಆದ್ದರಿಂದ ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನ ಮಾಡಿಕೊಳ್ಳಬೇಕು. ವಿದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಮನೆಯ ನೆನಪಾಗಬಹುದು. ಪಿತ್ತ ಮತ್ತು ಕಫಗಳ ಸಂಬಂಧದಿಂದ ರೋಗಗಳು ಬರಬಹುದು.

ತುಲಾ ರಾಶಿ:

ಯಾವುದಾನ್ನಾದರೂ ಬರವಣಿಗೆಯ ಮೂಲಕವೇ ವ್ಯವಹರಿಸಿ. ಆಲಂಕಾರಿಕ ವಸ್ತುಗಳನ್ನು ಹೆಚ್ಚು ಖರೀದಿಸುವಿರಿ. ಬಟ್ಟೆ ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ವ್ಯಾಪಾರಕ್ಕಾಗಿ ನೀವು ನಿಮ್ಮ ತಂದೆಯಿಂದ ಹಣವನ್ನು ಪಡೆಯಬಹುದು. ಆದಾಯದ ಮೂಲ ಹೆಚ್ಚಾಗಲಿದೆ. ಹಣ ಸಂಪಾದನೆಗೆ ಉತ್ತಮವಾದ ಮಾರ್ಗವು ನಿಮಗೆ ಗೊತ್ತಾಗಲಿದೆ. ದೇವಾಲಯದಿಂದ ನಿಮಗೆ ಸಕಾರಾತ್ಮಕ ಅಂಶಗಳನ್ನು ಪಡೆದುಕೊಳ್ಳಿ. ಸಹೋದರನಿಂದ ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ:

ಹೂಡಿಕೆಯ ಮೇಲೆ ನಿಮಗೆ ಪೂರ್ಣ ವಿಶ್ವಾಸ ಬರಬಹುದು. ಹೊಸ ವಿಚಾರಗಳನ್ನು ತಿಳಿದುಕೊಳ್ಳುವ ಹಂಬಲವಿರಲಿದೆ‌. ವೃತ್ತಿಪರವಾಗಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಹಿರಿಯರಿಂದ ಆಶೀರ್ವಾದ ಪಡೆಯುವಿರಿ. ನಿಮ್ಮ ಯಶಸ್ಸಿನ ಗುಟ್ಟನ್ನು ಬಿಟ್ಟುಕೊಡಬೇಡಿ. ನಿಮ್ಮನ್ನು ನೋಡುವ ದೃಷ್ಟಿಯೇ ಬದಲಾದೀತು. ನೀವೇ ನಿಮ್ಮ ಶತ್ರುಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ನಿಮ್ಮವರನ್ನು ಸಂತೋಷಗೊಳಿಸುವಿರಿ. ಇಂದು ನಿಮಗೆ ಕಷ್ಟವಾದರೂ ತಾಳ್ಮೆಯಿಂದ ವ್ಯವಹರಿಸಿ.

ಇದನ್ನೂ ಓದಿ: ವಾರ ಭವಿಷ್ಯ: ಗ್ರಹಗಳ ಉಚ್ಚಸ್ಥಾನ ಸಂಚಾರದಿಂದ ಈ 4 ರಾಶಿಯವರಿಗೆ ಭರ್ಜರಿ ರಾಜಯೋಗ; ನಿಮಗಿದೆಯೇ ಧನಲಾಭದ ಲಕ್?

ಧನು ರಾಶಿ:

ಮನೆಯ ಕಾರಣಕ್ಕೆ ಉದ್ಯೋಗದ ಕಿರಿಕಿರಿಯು ನಿಮ್ಮನ್ನು ಬಾಧಿಸದೇ ಇರದು. ನಿಮಗಿಂದು ಅದೃಷ್ಟದ ದಿನವೆಂದೇ ಹೇಳಬಹುದು. ಕೆಲಸದ ರೀತಿ ನೀತಿ ಬದಲಾವಣೆಯಾಗಬಹುದು. ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಮಂಗಲಕರವಾದ ವಸದತುವಬ್ನು ಸೇವಿಸಿ. ಇಂದು ಸ್ತ್ರೀಯರ ತಾಳ್ಮೆಗೆ ಪರೀಕ್ಷೆಯಾಗಬಹುದು. ಸಾಮಾಜಿಕ ವಲಯದಲ್ಲಿ ಯಶಸ್ವಿಯಾಗಿ ಮುನ್ನಡೆಯುವಿರಿ. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು.

ಮಕರ ರಾಶಿ:

ವಿವಾಹ ಯೋಗವು ಕೂಡಿಬರಲಿದ್ದು, ಅಲ್ಲಗಳೆಯುವುದು ಬೇಡ. ದುಃಸ್ವಪ್ನದಿಂದ ಮಾನಸಿಕವಾಗಿ ಕುಗ್ಗುವಿರಿ. ನಿಮ್ಮ ಹಾಗೂ ಪ್ರೇಮಿಯ ಮನಃಸ್ಥಿತಿಯಲ್ಲಿ ಏರಿಳಿತಗಳು ಇರಬಹುದು. ಪೂರ್ಣ ವಿಶ್ವಾಸ ಇರುತ್ತದೆ. ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಾಲವನ್ನು ಮಾಡಿ ವಾಹನವನ್ನು, ಖರೀದಿಸುದು ಬೇಡ. ಸಮಯಸ್ಫೂರ್ತಿಯಿಂದ ನೀವು ನಿಮ್ಮವರನ್ನು ಸಂತೋಷವಾಗಿರಿಸುವಿರಿ. ಇಂದು ನಿಮ್ಮ ಸಹೋದರರು ಆರ್ಥಿಕ ಸಹಾಯವನ್ನು ಕೇಳಬಹುದು.

ಕುಂಭ ರಾಶಿ:

ಇಂದಿನ ಹಣಕಾಸಿನ‌ ಬಿಕ್ಕಟ್ಟು ಮನಸ್ಸಿನ ವೇಗವನ್ನು ಹೆಚ್ಚಿಸುವುದು. ಸಣ್ಣ ವಿಚಾರಗಳೂ ನಿಮಗೆ ಸಮಸ್ಯೆಯಂತೆ ತೋರುವುದು. ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಿರುತ್ತದೆ, ಆದಾಯ ಹೆಚ್ಚಲಿದೆ. ಶುಭ ಕಾರ್ಯಕ್ಕೆ ಎಲ್ಲರನ್ನು ಒಟ್ಟುಗೂಡಿಸುವಿರಿ. ನೂತನ ವಾಹನ ಖರೀದಿಯನ್ನು ಮಾಡುವಿರಿ. ಇಂದಿನ ನಿಮ್ಮ ಪ್ರಯಾಣವು ಬಹಳ ಖರ್ಚಿನದ್ದಾಗಲಿದೆ. ಹೂಡಿಕೆಯನ್ನು ಮಾಡುವಾಗ ಮಾನಸಿಕ ನಿಯಂತ್ರಣವನ್ನು ಇಟ್ಟುಕೊಳ್ಳಿ.

ಮೀನ ರಾಶಿ:

ಹಿತೈಷಿಗಳ ಬೆಂಬಲವೂ ನಿಮಗೆ ಅತ್ಯವಶ್ಯವಾಗಿ ಬೇಕು. ರಾಜಕೀಯದಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ನೀವು ಒಪ್ಪಿಕೊಳ್ಳಬೇಕಾಗುವುದು. ಅಜ್ಞಾತವಾಗಿರುವುದರಲ್ಲಿ ಖುಷಿ ಇದೆ. ನೀವು ಕೆಲಸದಲ್ಲಿ ನಿರತರಾಗಿರಬಹುದು. ಸ್ನೇಹಿತರೊಂದಿಗೆ ಸುತ್ತಾಡಲು ಎಲ್ಲೋ ಹೋಗಬಹುದು. ಬೆನ್ನು ನೋವಿನ ಸಮಸ್ಯೆಯು ಕಾಣಿಸಿಕೊಳ್ಬಹುದು. ನೀವಿಂದು ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದೀರಿ. ನಿಮ್ಮ ಮಾತಿಗೆ ಮನ್ನಣೆ ಸಿಗಲಿಲಿದೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ರೇವತೀ, ಯೋಗ : ಪ್ರೀತಿ, ಕರಣ : ಭದ್ರ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 51 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:24 – 14:01, ಯಮಗಂಡ ಕಾಲ 07:33 – 09:10, ಗುಳಿಕ ಕಾಲ 10:47 – 12:24

– ಲೋಹಿತ್ ಹೆಬ್ಬಾರ್ -8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *