ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಧೃತಿ, ಕರಣ : ಗರಜ, ಸೂರ್ಯೋದಯ – 05 – 54 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:33 – 17:09, ಯಮಗಂಡ ಕಾಲ 09:08 – 10:44, ಗುಳಿಕ ಕಾಲ 12:20 – 13:57.
ಮೇಷ ರಾಶಿ: ನಿಮ್ಮ ಕಾರ್ಯದ ಶಿಸ್ತಿಗೆ ಸಹೋದ್ಯೋಗಿಗಳ ಸಹಾಯ ಪಡೆಯಿರಿ. ಆತ್ಮವಂಚನೆಗೆ ಅವಕಾಶ ಕೊಡಬೇಡಿ. ಪ್ರಾಮಾಣಿಕವಾಗಿದ್ದರೆ ನೀವು ತೃಪ್ತರು. ನಿಮ್ಮ ಮೇಲೆ ವಿಶ್ವಾಸವು ಮೂಡುವ ದಿನವಾಗಿದೆ. ಸೋಮಾರಿತನ ಮೇಲುಗೈ ಸಾಧಿಸಬಹುದು, ಆದರೆ ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುತ್ತದೆ. ಒಳ್ಳೆಯ ಸುದ್ದಿ ಸಿಗಬಹುದು. ಆದಾಯ ಚೆನ್ನಾಗಿರುತ್ತದೆ. ನಿಮ್ಮ ಬಗ್ಗಯೇ ನೀವು ಹೇಳಿಕೊಳ್ಳುವುದು ಉಚಿತವಾಗದು. ಕೆಲವು ಸಂದರ್ಭವು ನಿಮ್ಮ ನಿಯಂತ್ರಣವನ್ನು ಮೀರಿ ತಪ್ಪು ಆಗಬಹುದು.
ವೃಷಭ ರಾಶಿ: ಸಾಲಕ್ಕೆ ಸಂಬಂಧಿಸಿದ ವಿಷಯಗಳು ಇತ್ಯರ್ಥವಾಗಲಿವೆ. ಯಾವುದನ್ನೂ ಕಲಿಸುವ ಪ್ರಯತ್ನ ಮಾಡಬೇಡಿ. ಹಣಕಾಸಿನಲ್ಲಿ ಸ್ವಲ್ಪ ಚಿಂತೆ ಉಂಟಾಗಬಹುದು. ಸಂಬಂಧಿತ ವ್ಯಕ್ತಿಗಳೊಂದಿಗೆ ಸಮಯ ಕಳೆಯಲು ಅವಕಾಶ ಸಿಗಬಹುದು. ಕೆಲಸದ ಒತ್ತಡ ಹೆಚ್ಚು ಇರುವುದು ಸಾಧ್ಯ. ವಿವಾದಗಳನ್ನು ಬದಿಗೊತ್ತುವುದು ಉತ್ತಮ. ಉದ್ಯೋಗಿಗಳು ಬಹಳ ಪರಿಶ್ರಮದಿಂದ ಲಾಭವನ್ನು ಪಡೆಯಬೇಕಾಗಿದೆ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಯಾರ ಮೇಲೂ ಹಗುರಾದ ಮನೋಭಾವ ಬೇಡ.
ಮಿಥುನ ರಾಶಿ: ಇಂದು ಹೊಸದಾಗಿ ವೃತ್ತಿಯನ್ನು ಆರಂಭಿಸಿದವರಿಗೆ ತಮ್ಮ ವೃತ್ತಿಜೀವನದ ಬಗ್ಗೆ ಗೊಂದಲದಲ್ಲಿ ಇರುವರು. ಹೊಸ ಕೆಲಸವನ್ನು ತಯಾರಿಸಲು ಉತ್ತಮ ಸಮಯ. ನಿಮ್ಮ ಕೆಲಸದ ಗುಣಮಟ್ಟವನ್ನು ಸುಧಾರಿಸಲು ಪ್ರಯತ್ನಿಸಿ. ಹಿರಿಯರಿಂದ ಮೆಚ್ಚುಗೆ ಸಿಗಬಹುದು. ಹಣಕಾಸಿನ ವ್ಯವಹಾರದಲ್ಲಿ ಮುಂದಾಲೋಚನೆ ಅಗತ್ಯ. ಮನಸ್ಸು ಕೆಲವೊಮ್ಮೆ ಆಳವಾದ ಯೋಚನೆಗಳಲ್ಲಿ ಇಳಿಯಬಹುದು. ಹೃದಯವೈಶಾಲ್ಯದಿಂದ ಪ್ರಶಂಸೆ ಸಿಗುವುದು. ವಾಹನದ ಮೇಲಿನ ವ್ಯಾಮೋಹ ಕಡಿಮೆಯಾಗುವುದು.
ಕರ್ಕಾಟಕ ರಾಶಿ: ಪದೇ ಪದೇ ಆಗಿಹೋದುದರ ಬಗ್ಗೆ ಯೋಚಿಸಿ ಮಾನಸಿಕವಾಗಿ ಹಿಂಸೆ ಮಾಡಿಕೊಳ್ಳುವಿರಿ. ನಿಮ್ಮ ಇಷ್ಟದ ಜನರಿಂದ ನೀವು ಬೆಂಬಲವನ್ನು ಪಡೆಯುತ್ತಿರುವಿರಿ. ನಿಮ್ಮನ್ನು ಬೆರಳು ಮಾಡಿ ತೋರಿಸದಂತೆ ನೋಡಿಕೊಳ್ಳಿ. ದೀರ್ಘ ಪ್ರಯಾಣ ಉತ್ತಮ ದಿನವಲ್ಲ. ಕೆಲಸದ ಸ್ಥಳದಲ್ಲಿ ಒತ್ತಡ ಅಧಿಕವಾಗಬಹುದು. ಪ್ರೇಮವು ಕಾಮವಾಗಿ ಮನಸ್ಸನ್ನು ಕೆಡಿಸುವುದು. ಸಂಬಂಧದಲ್ಲಿನ ಕೆಲವು ಸವಾಲುಗಳನ್ನು ನೀವು ಎದುರಿಸುವುದು ಅನಿವಾರ್ಯವಾದೀತು.
ಸಿಂಹ ರಾಶಿ: ಬಹಳ ದಿನಗಳ ಅನಂತರ ಹೊರಗಿನ ಸುತ್ತಾಟವು ಹಿತವೆನಿಸುವುದು. ಗೊಂದಲ ಬರುವ ವಿಚಾರಕ್ಕೆ ಸಮಾಲೋಚನೆ ಅಗತ್ಯ. ಹಣದ ವಿಚಾರದಲ್ಲಿ ಗೆಲುವು ಇದೆ. ಸ್ನೇಹಿತರಿಂದ ಸಹಾಯ ಸಿಗುವ ಸಾಧ್ಯತೆ. ಸರ್ಕಾರದ ಕೆಲಸಕ್ಕೆ ನಿಯುಕ್ತರಾಗಬಹುದು. ಸದೃಢ ಭವಿಷ್ಯದ ನೆಲೆಗಾಗಿ ಸಣ್ಣ ಸಿದ್ಧತೆ ಆರಂಭವಾಗುತ್ತದೆ. ಕೆಲ ದಿನಗಳಿಂದ ನಿಮ್ಮ ಆರೋಗ್ಯ ಹದಗೆಟ್ಟಿದ್ದು, ಮನಸ್ಸೂ ಸರಿಯಾಗಿರದು. ಎಲ್ಲರ ಜೊತೆ ವಾದಕ್ಕಿಳಿಯುವ ಮನಸ್ಸಿನಲ್ಲಿ ಇರುವಿರಿ. ಶಿಸ್ತಿನಿಂದ ಇಂದಿನ ಕಾರ್ಯವನ್ನು ಮಾಡುವಿರಿ.
ಕನ್ಯಾ ರಾಶಿ: ಅವಶ್ಯಕ ವಸ್ತುವನ್ನು ಕಣ್ಮರೆ ಮಾಡಿಕೊಳ್ಳುವಿರಿ. ಇಂದು ನಿಮಗೆ ಅನುಕೂಲಕರ ಸಮಯ. ಅನಗತ್ಯ ಮೋಜಿನಲ್ಲಿ ಸಮಯ ವ್ಯರ್ಥ ಮಾಡಬಾರದು. ಹಣಕಾಸು ಪರಿಸ್ಥಿತಿ ಬಲವಾಗಲಿದೆ. ಎಲ್ಲಿಯೂ ಪೂರ್ಣ ಬಲವನ್ನು ಹಾಕಲಾರಿರಿ. ಶಾಂತ ವಾತಾವರಣಕ್ಕಾಗಿ ಮನೆಯಲ್ಲಿ ಸಮಯ ಕಳೆಯಿರಿ. ವ್ಯವಹಾರಕ್ಕೆ ಸಮಯ ಒಳ್ಳೆಯದು. ತಪ್ಪುಗಳನ್ನು ಸರಿ ಮಾಡಿಯೇ ನಿಮಗೆ ಇಂದಿನ ಶ್ರಮವೆಲ್ಲ ವ್ಯರ್ಥವಾಗುವುದು. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ.
ತುಲಾ ರಾಶಿ: ಹೊಸ ಕೆಲಸವನ್ನು ಪ್ರಾರಂಭಿಸುವುದು ನಿಮಗೆ ಸಂತೋಷವನ್ನು ನೀಡುತ್ತದೆಯಾದರೂ ಕ್ರಮಬದ್ಧ ಮಾಡಿಕೊಳ್ಳದಿದ್ದರೆ ಅದೂ ಗೊಂದಲವಾದೀತು. ಕೇಳಿ ಪಡೆದ ಹಣವನ್ನು ಕೇಳದೇ ಕೊಡಿ. ಮನಸ್ಸು ಭಾರವಾಗಿದ್ದರೂ, ಸಾಯಂಕಾಲದವರೆಗೆ ಸ್ಥಿತಿಗತಿಗಳು ಸುಧಾರಿಸುತ್ತವೆ. ನಿಮ್ಮ ಗುರಿಯ ಬಗ್ಗೆ ಅಸ್ಪಷ್ಟತೆ ಇರಲಿ. ದೀರ್ಘಕಾಲದ ವೈರವು ಮುಕ್ತಾಯವಾಗುವುದು. ಮಾತನ್ನು ಚೆನ್ನಾಗಿ ಬಲ್ಲವರಾಗಿದ್ದರು ಕಟುವಾದ ಮಾತುಗಳನ್ನು ಆಡಬೇಡಿ. ಹೊಸ ಉದ್ಯೋಗಿಗಳನ್ನು ನಿಯೋಜಿಸಿಕೊಂಡು ಕಾರ್ಯವನ್ನು ವಿಸ್ತರಿಸಿ.
ವೃಶ್ಚಿಕ ರಾಶಿ; ಇಂದು ಅನವಶ್ಯಕ ಸಮಸ್ಯೆಗಳನ್ನು ಬೇಕೆಂದೇ ಎಳೆದುಕೊಳ್ಳುವಿರಿ. ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲಿ ನಿಮ್ಮ ಆತ್ಮಸ್ಥೈರ್ಯವು ಕುಸಿಯದಂತೆ ಇರಬೇಕಾಗುವುದು. ನಿಮ್ಮನ್ನು ಸಕಾರಾತ್ಮಕವಾಗಿ ಇಟ್ಟುಕೊಂಡು ಮುಂದಾಗಿ. ಕೆಲಸದಲ್ಲಿ ಸಣ್ಣ ಬದಲಾವಣೆಗಳು ಆಗಬಹುದು. ಕೆಲವೊಂದು ವಿಷಯಗಳಲ್ಲಿ ಸಹೋದ್ಯೋಗಿಗಳಿಂದ ಸ್ಪಷ್ಟತೆ ಬೇಕಾಗುತ್ತದೆ. ಹಣದ ಲೆಕ್ಕಾಚಾರದಲ್ಲಿ ತಪ್ಪು ಸಾಧ್ಯ. ಬಹಳ ಚಂಚಲವಾದ ಮನಸ್ಸನ್ನು ಶುಭವಾದ ಕಾರ್ಯದಲ್ಲಿ ಜೋಡಿಸಿ.
ಧನು ರಾಶಿ: ನಿಮ್ಮ ವೃತ್ತಿಜೀವನವನ್ನು ಮುನ್ನಡೆಸಲು ಮಾರ್ಗದರ್ಶನವನ್ನು ಪಡೆಯುತ್ತೀರಿ. ಮುಂದಾಳುವಾಗಲು ನಿಮ್ಮನ್ನೇ ದೂಡಬಹುದು. ಹಣದ ವ್ಯವಹಾರದಲ್ಲಿ ನೀವು ತಕ್ಷಣ ವಿಶ್ವಾಸಕ್ಕೆ ಬರಬೇಡಿ. ವ್ಯಾಪಾರದವರು ಹೊಸ ಅವಕಾಶ ಪಡೆಯಬಹುದು. ಕುಟುಂಬದಲ್ಲಿ ಸಂತೋಷದ ಸನ್ನಿವೇಶ. ಮಕ್ಕಳ ಯಶಸ್ಸು ನಿಮಗೆ ಗರಿಮೆ ತರುತ್ತದೆ. ಇಂದು ಶತ್ರುವಿನ ಆಗಲಿಕೆಯಿಂದ ಸಂತೋಷವಾಗುವುದು. ನಿಮ್ಮ ವಿದ್ಯಾಭ್ಯಾಸದ ಸಾಮರ್ಥ್ಯವನ್ನು ತೋರಿಸುವಿರಿ.
ಮಕರ ರಾಶಿ: ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿದರೆ ಉತ್ಸಾಹ ಹೆಚ್ಚಾಗುತ್ತದೆ. ಕಛೇರಿಯ ವಸ್ತುವನ್ನು ಸ್ವಂತ ಖರ್ಚಿನಿಂದ ಮಾಡಿಸುವಿರಿ. ಪ್ರವಾಸದ ಯೋಜನೆ ಕೈಗೊಳ್ಳಬಹುದು. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ಸಿಗಬಹುದು. ವಿವಾದಾತ್ಮಕ ವಿಷಯಗಳಿಂದ ದೂರವಿರುವುದು ಉತ್ತಮ. ಶತ್ರುಗಳು ನಿಮ್ಮ ಸಂಪತ್ತನ್ನು ಕರಗಿಸಲು ತಂತ್ರವನ್ನು ಹೆಣೆಯಬಹುದು. ಚರಾಸ್ತಿಯ ವಿಷಯದಲ್ಲಿ ನೀವು ಅಸ್ವತಂತ್ರರಾಗಿ ಇರುವಿರಿ. ಮನೆಯ ಕಾರ್ಯದಲ್ಲಿ ನಿಮಗೆ ಒತ್ತಡವು ಅಧಿಕವಾಗಿ ಇರಲಿದೆ.
ಕುಂಭ ರಾಶಿ: ಆಧ್ಯಾತ್ಮಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಸ್ವಲ್ಪ ಸಮಯವನ್ನು ಕಳೆದು ನೆಮ್ಮದಿಯನ್ನು ಪಡೆಯುವಿರಿ. ಚಿಂತೆಯ ಸ್ಥಿತಿಯನ್ನು ಸ್ವತಃ ನಿರ್ಮಾಣ ಮಾಡಿಕೊಳ್ಳುವಿರಿ. ಕೆಲವೊಂದು ನಿರ್ಧಾರಗಳನ್ನು ಬದಲಾಯಿಸಬೇಕಾದ ಪರಿಸ್ಥಿತಿ ಇರದು. ಹಳೆಯ ಪರಿಚಯಗಳು ಪುನಃ ಸಂಪರ್ಕಕ್ಕೆ ಬರಲಿವೆ. ಖರ್ಚು ಹೆಚ್ಚು ಆಗುವ ದಿನವಿದು. ಕುಟುಂಬದಲ್ಲಿ ಬೇರೆ ಬೇರೆ ಅಭಿಪ್ರಾಯಗಳು ಮೂಡಬಹುದು. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು.
ಮೀನ ರಾಶಿ: ನಿಮ್ಮ ಯಾರಾದರೂ ಸಾಲವನ್ನು ಕೇಳಿ ಬರಬಹುದು. ನಯವಾಗಿ ತಳ್ಳಿಹಾಕುವಿರಿ. ಕೋಪಗೊಳ್ಳುವ ಬದಲು ಶಾಂತರೀತಿಯಿಂದ ಸಮಸ್ಯೆಯನ್ನು ಪರಿಹರಿಸಿ. ನಿಮ್ಮ ಕೆಲಸದ ಗತಿಯು ಹೆಚ್ಚು ಚುರುಕುಗೊಳ್ಳುವುದು. ಕೌಟುಂಬಿಕ ವಿಚಾರದಲ್ಲಿ ಮಾತುಕತೆ ಗಂಭೀರವಾಗಬಹುದು. ಸ್ನೇಹಿತರಿಂದ ಅಲ್ಪ ನಿರಾಶೆ ಸಿಗಬಹುದು. ಹಣದ ವ್ಯವಹಾರದಲ್ಲಿ ಎಚ್ಚರಿಕೆಯಿಂದಿರಿ. ಅಪಮಾನವಾಗುವ ಘಟನೆಗಳು ನಡೆಯಬಹುದು.
ಲೋಹಿತ್ ಹೆಬ್ಬಾರ್ -8762924271 (what’s app only)