ಮೇಷ ರಾಶಿ:
ನೀವು ಮಾಡುವ ಕಠಿಣ ಪರಿಶ್ರಮವು ನಿಮಗೆ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಕೃಷಿ ಕಾರ್ಯದಲ್ಲಿ ನೀವು ತೊಡಗುವಿರಿ. ಇದು ನಿಮ್ಮನ್ನು ನೀವು ಅರ್ಥಮಾಡಿಕೊಳ್ಳುವ ಸಮಯ ಕೂಡ. ಇದರಿಂದ ನೀವು ಯಾವುದೇ ಸಮಸ್ಯೆಯನ್ನು ಸುಲಭವಾಗಿ ಪರಿಹರಿಸಲು ಸಾಧ್ಯವಾಗುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಮೇಲ್ಮಟ್ಟಕ್ಕೆ ಹೋಗಲಿದ್ದೀರಿ. ದೂರಪ್ರಯಾಣವನ್ನು ಇಂದು ಇಷ್ಟಪಡುವಿರಿ.
ವೃಷಭ ರಾಶಿ :
ಪ್ರಯೋಜನವಾಗದ ಮಾತುಗಳನ್ನು ಹೇಳುವುದು ಬೇಡ. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಹಣಕಾಸಿನ ವಿಷಯಗಳಲ್ಲಿ ಕೆಲವು ತೊಡಕುಗಳು ಮತ್ತು ಸಮಸ್ಯೆಗಳು ಎದುರಾಗುತ್ತವೆ, ಆದರೆ ನೀವು ಪ್ರತಿಯೊಂದು ಕಷ್ಟವನ್ನು ನಿರ್ಭಯವಾಗಿ ಎದುರಿಸುತ್ತೀರಿ ಮತ್ತು ಪರಿಹಾರವನ್ನೂ ಕಂಡುಕೊಳ್ಳುತ್ತೀರಿ. ಕಲ್ಪನೆಯಲ್ಲಿ ಓಡಾಡುವುದನ್ನು ಕಡಿಮೆ ಮಾಡಿ. ಮಕ್ಕಳಿಂದ ನೀವು ಸ್ವತಂತ್ರರಾಗಲು ಬಯಸುವಿರಿ.
ಮಿಥುನ ರಾಶಿ:
ಹೆಸರಾಂತ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ದೂರಪ್ರಯಾಣದಲ್ಲಿ ನಿಮಗೆ ನಾನಾ ತೊಂದರೆಗಳು ಎದುರಾಗಬಹುದು. ಕೆಲಸಗಳು ಪೂರ್ಣಗೊಳ್ಳುತ್ತವೆ, ಅದು ಸಂತೋಷವನ್ನು ತರುತ್ತದೆ. ಹೊಸ ಆಸ್ತಿಯನ್ನು ಖರೀದಿಸುವ ಯೋಜನೆಗಳಿರುತ್ತವೆ ಮತ್ತು ಕೆಲಸ ವಿಸ್ತರಿಸುತ್ತದೆ. ಮುಂದೆ ಅದೇ ದೊಡ್ಡ ಕಂಟಕವಾದೀತು. ನಂಬಿಕೆಯನ್ನು ಕಳೆದುಕೊಳ್ಳಬೇಕಾಗುವುದು. ನಿಮ್ಮಲ್ಲಿ ಎಷ್ಟೇ ಆತ್ಮವಿಶ್ವಾಸವಿದ್ದರೂ ಕೆಲಸಗಳ ಒತ್ತಡದಲ್ಲಿ ಗೊಂದಲದಲ್ಲಿ ಸಿಕ್ಕಿಕೊಳ್ಳುವಿರಿ.
ಕರ್ಕಾಟಕ ರಾಶಿ:
ಲಲಿತಕಲೆಗಳಲ್ಲಿ ಆಸಕ್ತಿ ಇದ್ದರೆ ನಿಮಗೆ ಗೌರವ, ಸಮ್ಮಾನಗಳು ಸಿಗುವುದು. ಮೇಲಿನಿಂದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ. ಕುಟುಂಬದಲ್ಲಿ ಸಂತೋಷ ಇರುತ್ತದೆ ಮತ್ತು ಒಟ್ಟಿಗೆ ಕೆಲವು ಹೊಸ ಕೆಲಸಗಳನ್ನು ಪ್ರಾರಂಭಿಸುವ ಆಲೋಚನೆ ಇರಬಹುದು. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ಸಮಾಧಾನದಿಂದ ಆಲೋಚಿಸಿ. ಅವಾಚ್ಯ ಶಬ್ದಗಳಿಂದ ಯಾರನ್ನಾದರೂ ನಿಂದಿಸುವಿರಿ. ಅಧಿಕಾರಿಗಳಿಂದ ಆರ್ಥಿಕತೆಯ ಪರಿಶೀಲನೆ ನಡೆಯುವುದು.
ಸಿಂಹ ರಾಶಿ:
ಸಂಗಾತಿಯೊಂದಿಗೆ ಸಂತೋಷದ ಸಮಯ ಕಳೆಯುತ್ತೀರಿ. ಕೆಲವು ಕೆಲಸದ ನಿಮಿತ್ತ ಪ್ರಯಾಣಿಸುವ ಸಾಧ್ಯತೆ ಇದೆ. ನಿಮ್ಮ ಮಕ್ಕಳಿಂದ ನಿಮಗೆ ಲಾಭ ಮತ್ತು ಸಂತೋಷ ಸಿಗುತ್ತದೆ. ನಿಮ್ಮ ವಿರೋಧಿಗಳನ್ನು ಸೋಲಿಸುವಲ್ಲಿಯೂ ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಕಠಿಣ ಪರಿಶ್ರಮದಿಂದ ಮುಂದುವರಿಯುತ್ತೀರಿ. ದುಃಖವನ್ನು ಆಪ್ತರ ಬಳಿ ಮಾತ್ರ ಹಂಚಿಕೊಳ್ಳಿ. ನಿಮ್ಮ ಮಾತಿಗೆ ಕೆಲವರ ಬೆಂಬಲವು ನಿಮಗೆ ಖುಷಿಕೊಡುವುದು. ಶ್ರಮಪಟ್ಟು ಆರಂಭಿಸಿದ ಕಾರ್ಯಗಳಿಗೆ ಪಿತೂರಿ.
ಕನ್ಯಾ ರಾಶಿ:
ಯಾರದೋ ವಸ್ತುವುದು ಕಾಣೆಯಾದ ಕಾರಣ ನಿಮ್ಮ ಮೇಲೆ ಕಳ್ಳತನದ ಅಪವಾದವು ಬರಬಹುದು. ಮನಸ್ಸು ಪ್ರಸನ್ನವಾಗಿರುತ್ತದೆ. ಹಿತಶತ್ರುಗಳ ಮೇಲೆ ಸಂದೇಹ ಬರಬಹುದು. ಕೆಲಸವು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತದೆ ಮತ್ತು ಯೋಜನೆಗಳನ್ನು ಸರಿಯಾಗಿ ಕಾರ್ಯಗತವಾಗುವುದು. ಸಮಯವು ಆರಂಭಿಕ ಯಶಸ್ಸನ್ನು ತರುತ್ತದೆ. ಅನಿರೀಕ್ಷಿತ ಧನಲಾಭವನ್ನು ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ನಿಮ್ಮ ಜಾಣ್ಮೆಯಿಂದ ಆದಾಯವನ್ನು ಅಧಿಕ ಮಾಡಿಕೊಳ್ಳುವಿರಿ.
ತುಲಾ ರಾಶಿ:
ಅಧಿಕ ಸುತ್ತಾಟದ ಸುಸ್ತು ನಿಮ್ಮಲ್ಲಿ ಇದ್ದರೂ ಅದನ್ನು ಲೆಕ್ಕಿಸಲಾರಿರಿ. ಹಿರಿಯರ, ಅನುಭವಿಗಳ ಮಾರ್ಗದರ್ಶನವನ್ನು ಪಡೆಯಿರಿ. ಹಲವು ರೀತಿಯ ಕೆಲಸಗಳಿಗೆ ಗಮನ ಕೊಡಬೇಕಾಗುತ್ತದೆ. ವೈಯಕ್ತಿಕ ಕೆಲಸದ ಹೊರೆ ಇರುತ್ತದೆ. ಕುಟುಂಬದ ಹಿರಿಯ ಸದಸ್ಯರ ಆರೋಗ್ಯದ ಬಗ್ಗೆ ಚಿಂತೆ ಇರುತ್ತದೆ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಷ್ಟವಾದೀತು. ಕೆಲವನ್ನು ನೀವು ಬುದ್ಧಿಪೂರ್ವಕವಾಗಿ ಮಾಡುವಿರಿ.
ವೃಶ್ಚಿಕ ರಾಶಿ:
ಇಂದು ನೀವು ಏನನ್ನಾದರೂ ಪಡೆಯಲು ಹೇಗಾದರೂ ಪ್ರಯತ್ನಿಸಲೇ ಬೇಕು. ಸ್ವಾತಂತ್ರ್ಯವನ್ನು ಪಡೆಯಲು ಹವಣಿಸುವಿರಿ. ಯಶಸ್ಸಿನ ಹೊಸ ಮಾರ್ಗಗಳು ತೆರೆದುಕೊಳ್ಳಬಹುದು. ನಿಮ್ಮ ಕೆಲಸಕ್ಕೆ ಸಂಪೂರ್ಣವಾಗಿ ಸಮರ್ಪಿತರಾಗಿರುತ್ತೀರಿ. ಹಿರಿಯ ಅಧಿಕಾರಿಗಳು ನಿಮ್ಮ ಕಠಿಣ ಪರಿಶ್ರಮವನ್ನು ಮೆಚ್ಚುತ್ತಾರೆ. ತನ್ನವರನ್ನು ಕಳೆದುಕೊಳ್ಳುವ ಹೆದರಿಕೆ ಉಂಟಾಗಲಿದೆ. ಸದಾಚಾರವನ್ನು ರೂಢಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ಅನಾರೋಗ್ಯವು ನಿಮ್ಮ ನಿಷ್ಕಾಳಜಿಯಿಂದ ಹೆಚ್ಚಾಗಲಿದೆ.
ಧನು ರಾಶಿ:
ಹೊಸ ಅಭ್ಯಾಸವನ್ನು ಕಲಿಯಲು ಪ್ರಯತ್ನಿಸುವಿರಿ. ನಿಮ್ಮ ಬೆಂಬಲದಿಂದ ಮನೆಯ ವಾತಾವರಣ ಇನ್ನಷ್ಟು ಸುಂದರವಾಗುತ್ತದೆ. ಹಣದ ವಿಷಯದಲ್ಲಿ ದಿನವು ಉತ್ತಮವಾಗಿದೆ, ಈ ದಿನ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ. ನಿಮ್ಮ ಕೆಲಸದಲ್ಲಿ ದಕ್ಷತೆಯನ್ನು ಪ್ರದರ್ಶಿಸುವಿರಿ. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಲಿದ್ದಾರೆ. ನೀರಿನ ವಿಚಾರದಲ್ಲಿ ಜಾಗರೂಕತೆ ಬೇಕು. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಪ್ರಯತ್ನವು ನಡೆಯುವುದು.
ಮಕರ ರಾಶಿ:
ಹಳೆಯ ಕಾರ್ಯವನ್ನು ಮಾಡಲು ಯೋಜನೆಯನ್ನು ಹೊಸ ಉತ್ಸಾಹದಿಂದ ರೂಪಿಸಿ. ಆಹಾರದ ಅಭಾವವು ನಿಮಗೆ ಆಗಲಿದೆ. ಸಂಯಮದಿಂದ ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಿ. ಇತರ ಕೆಲಸಗಳಲ್ಲಿ ನಿರತರಾಗಿರುವುದರಿಂದ ನಿಮ್ಮ ವೈಯಕ್ತಿಕ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುವುದಿಲ್ಲ. ನಿಮ್ಮ ಭಾವನೆಗಳನ್ನು ನಿಯಂತ್ರಿಸಿ, ತುಂಬಾ ಭಾವನಾತ್ಮಕವಾಗಿರುವುದು ಒಳ್ಳೆಯದಲ್ಲ. ಅಲ್ಪ ಆದಾಯದಲ್ಲಿ ತೃಪ್ತಿ ಹೊಂದಬೇಕಾದೀತು. ಹೆಚ್ಚಿನ ಆದಾಯದಿಂದ ದುರಭ್ಯಾಸವು ಹೆಚ್ಚಾಗಬಹುದು.
ಕುಂಭ ರಾಶಿ:
ಅತಿಯಾದ ನಿದ್ರೆಯಯನ್ನು ಮಾಡುವ ಮನಸ್ಸು ಮಾಡುವಿರಿ. ನಿಕಟ ಸಂಬಂಧಿಯ ಸಹಾಯದಿಂದ, ನಿಮ್ಮ ಯೋಜನೆಗಳನ್ನು ಪೂರೈಸಲು ನಿಮಗೆ ಸಾಧ್ಯವಾಗುತ್ತದೆ. ನಿಮ್ಮ ದಕ್ಷತೆಯಿಂದ ನೀವು ತೊಂದರೆಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸಲಿದೆ. ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶಗಳಿದ್ದರೂ ಕಾರ್ಯದ ಒತ್ತಡದಿಂದ ಸಾಧ್ಯ.
ಮೀನ ರಾಶಿ:
ತಪ್ಪುಗಳ ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಮ್ಮ ವ್ಯವಹಾರದಲ್ಲಿ ಪ್ರಸ್ತುತ ನಡೆಯುತ್ತಿರುವ ಕೆಲಸವನ್ನು ಸರಿಯಾಗಿ ಮಾಡಿ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಆತುರಪಡಬೇಡಿ. ಹೊಸ ಕೆಲಸವನ್ನು ಯೋಚಿಸಲು ಮತ್ತು ಅರ್ಥಮಾಡಿಕೊಳ್ಳಲು ಹೆಚ್ಚು ಸಮಯ ಕಳೆಯಿರಿ. ಕೆಲವು ಸಂಗತಿಗಳನ್ನು ನಿರೀಕ್ಷಿಸದೇ ಬರಬಹುದು. ನಿಮ್ಮನ್ನು ಕೆಲವರು ಅನಾದರ ಮಾಡಿದಂತೆ ಕಾಣಿಸೀತು. ನೀವು ವರ್ಗಾವಣೆಗೆ ಒತ್ತಡವನ್ನು ತರುವಿರಿ.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಪರಿಘ, ಕರಣ : ವಣಿಜ, ಸೂರ್ಯೋದಯ – 06 – 02 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:37 – 09:12, ಯಮಗಂಡ ಕಾಲ 10:47 – 12:21, ಗುಳಿಕ ಕಾಲ 13:56 – 15:31
-ಲೋಹಿತ ಹೆಬ್ಬಾರ್ – 8762924271 (what’s app only)
