ದಿನ ಭವಿಷ್ಯ: ಈ ರಾಶಿಯವರು ಇಂದು ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವರು – Kannada News | Horoscope May 10 Sunday 2026; Dina Rashi Bhavishya Today, Checkout the details here

ಮೇಷ ರಾಶಿ:

ಇಷ್ಟದವರ ಭೇಟಿಗೆ ಅವಕಾಶವಿದ್ದರೂ ಆಗದು. ಯಾವುದೇ ನೆಪ ಹೇಳದೆ ಚಟುವಟಿಕೆಯಿಂದ ಇರಲು ಪ್ರಯತ್ನಿಸಿ. ಹೊಸದೊಂದು ಗೆಳೆತನವಾಗಿ. ಅಧ್ಯಯನದಿಂದ ನಿಮ್ಮನ್ನು ಚಂಚಲವಾಗಿಸುವ ಅನಗತ್ಯ ವಾದಗಳನ್ನು ಬಿಡಿ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಯಾವುದೇ ನಿರ್ಬಂಧಗಳನ್ನು ಕೂಡಲೇ ಒಪ್ಪುವುದಿಲ್ಲ.

ವೃಷಭ ರಾಶಿ:

ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ಬಹಳ ಏಕಾಗ್ರತೆಯಿಂದ ಇರಬೇಕು. ಹೊಸಬರ ಜತೆಗೆ ಅತಿಯಾದ ಸಲುಗೆ ಬೇಡ. ನಿಮ್ಮ ಮಿತಿಯನ್ನು ಅರಿತು, ಯಾರಿಗಾದರೂ ಮಾತು ನೀಡಿ. ಕುಟುಂಬ ವ್ಯವಸ್ಥೆ ಸರಿಯಾಗಲು ಕೆಲವನ್ನು ಬಿಟ್ಟುಕೊಡಬೇಕಾದೀತು. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ನಿಮಗಿಂತ ಭಿನ್ನವಾದ ವ್ಯಕ್ತಿಗಳ ಬಗ್ಗೆ ಯೋಚಿಸದೇ ನಿಮ್ಮ ನಿಲುವೇ ಸರಿಯಂತೆ ವರ್ತಿಸುವಿರಿ.

ಮಿಥುನ ರಾಶಿ:

ಮೂಲಸ್ಥಾನದಿಂದ ದೂರ ಹೋಗುವ ಸಾಧ್ಯತೆ ಇದೆ. ಕ್ರೀಡಪಟುಗಳು ತಮ್ಮ ಅವಿರತಶ್ರಮವನ್ನು ನಡೆಸಲಿದ್ದಾರೆ. ತಾಯಿಯಿಂದ ನಿಮಗೆ ಧನವು ಲಾಭವಾಗಬಹುದು. ಸ್ವಾವಲಂಬನೆಯ ಕಾರಣಕ್ಕೆ ನಿಮ್ಮಲ್ಲೊಂದು ಹೊಸ ಆತ್ಮವಿಶ್ವಾಸ ಮೂಡಲಿದೆ. ಆಪ್ತರ ಭೇಟಿಯು ನಿಮಗೆ ಸಂತೋಷವನ್ನು ಕೊಡಲಿದೆ. ಹಿಂದಿನ ಹೂಡಿಕೆಗಳು ಬಹಳ ಆದಾಯವು ಸಿಗಲಿದೆ. ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ.

ಕರ್ಕಾಟಕ ರಾಶಿ:

ನಿಮ್ಮ ಅಂದಿನ ಸ್ಥಿತಿಯನ್ನು ನೆನೆಸಿಕೊಂಡು ಹೆಮ್ಮೆಪಡಲಿದ್ದೀರಿ. ಯಾರಿಗೂ ಹೇಳಿಕೊಳ್ಳಲು ಸಾಧ್ಯವಾಗದಂಥ ಮಾನಸಿಕ ತೊಳಲಾಟಕ್ಕೆ ಸಿಲುಕಿಕೊಳ್ಳುತ್ತೀರಿ. ಶತ್ರುಗಳಿಂದ ನಿಮಗೆ ಸಿಗಬೇಕಾದುದು ಸಿಗಲಿದೆ. ಸಂಗಾತಿ ಜತೆಗೆ ಉತ್ತಮ ಸಮಯ ಕಳೆಯುವಿರಿ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಸಂಗಾತಿಯನ್ನು ನೀವು ಮರೆತು ವ್ಯವಹರಿಸುವಿರಿ. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿ ಇರುವುದು.

ಸಿಂಹ ರಾಶಿ:

ಇಂದು ನಿಮ್ಮಿಂದ ಆದ ಸಹಾಯವನ್ನು ಮಾಡಲಿದ್ದೀರಿ. ಸೋದರಿಯರ ಜತೆಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮಾರ್ಗದರ್ಶನದ ಕೊರತೆಯಿಂದ ನಿಮ್ಮ ದಿಕ್ಕು ತಪ್ಪಲಿದೆ. ಚರ್ಮದ ಸಮಸ್ಯೆ ಇರುವವರು ಆಹಾರ ಸೇವನೆ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ನಿಮ್ಮದಾದ ಚಿಂತನೆ, ಕಾರ್ಯದಿಂದ ಯಶಸ್ಸನ್ನು ಪಡೆಯಲು ನೀವು ಬಹಳ ಸಮಯ ಕಾಯಬೇಕಾಗಬಹುದು.

ಕನ್ಯಾ ರಾಶಿ:

ಇಂದಿನ ನಿಮ್ಮ ಕೆಲಸವು ಶಿಸ್ತಿನಿಂದ ಇದ್ದರೂ ನಿಮ್ಮ ಜೊತೆಗಾರರು ಅದನ್ನು ಮೂದಲಿಸಲಿದ್ದಾರೆ. ಪರಸ್ಪರ ಸಂವಹನದಿಂದ ಮಾನಸಿಕ ಭಿಮ್ನತೆ ದೂರಾಗಬಹುದು. ಸ್ವಾರ್ಥದ ಹಣೆಪಟ್ಟಿ ನಿಮ್ಮ ಹೆಸರಿಗೆ ಬೀಳಬಹುದು. ಯಾವುದೇ ಸ್ಪಷ್ಟನೆ ನೀಡಿದರೂ ಪ್ರಯೋಜನ ಆಗುವುದಿಲ್ಲ. ಅದನ್ನು ಸರಿಯಾಗಿ ಮುಂದುವರಿಸುವುದು ನಿಮ್ಮ ಕೈಯಲ್ಲಿದೆ. ಯಾರ ಮೇಲೂ ಆಪಾದನೆ ಬೇಡ. ಸಂತಾನ ಬಗ್ಗೆ ಕುಟುಂಬದಿಂದ ಒತ್ತಡ ಬರಬಹುದು.

ತುಲಾ ರಾಶಿ:

ಹೊಸತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ವಿಫಲತೆಯನ್ನು ನಕಾರಾತ್ಮಕವಾಗಿ ಸ್ವೀಕರಿಸುವುದು ಬೇಡ. ಯಾವುದೇ ಸಾಲಕ್ಕೆ ಪ್ರಯತ್ನಿಸಿದ್ದಲ್ಲಿ ಅದು ದೊರೆಯುವ ಸಾಧ್ಯತೆಗಳು ಗೋಚರಿಸುತ್ತವೆ. ತೀರಾ ಆಪ್ತರಿಗೆ ಸಹಾಯದ ಅಗತ್ಯ ಬೀಳುತ್ತದೆ. ಹಣಕಾಸು ನಿರ್ವಹಣೆ ಮತ್ತು ಸಕಾರಾತ್ಮಕ ಕ್ರಮಗಳು ಏಳಿಗೆಗೆ ದಾರಿ ಮಾಡಿಕೊಡುತ್ತದೆ. ನಿಮ್ಮ‌ ರಕ್ಷಣೆಯ ಬಗ್ಗೆ ಕಾಳಜಿ ಇರಲಿ.

ವೃಶ್ಚಿಕ ರಾಶಿ:

ನಿಮ್ಮ ಸಾಮರ್ಥ್ಯದಿಂದ ವ್ಯವಹಾರದಲ್ಲಿ ದೊಡ್ಡ ಪ್ರಮಾಣದ ನಷ್ಟವನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಮಾತಿನ ಮೂಲಕ ಇತರರನ್ನು ಮೋಡಿ ಮಾಡಲಿದ್ದೀರಿ. ಯಾರನ್ನೂ ಮಟ್ಟಹಾಕುವ ಕೆಲಸಕ್ಕಿಂತ ನಿಮ್ಮ ಬೆಳವಣಿಗೆಯ ಬಗ್ಗೆ ಒತ್ತು ಇರಲಿ. ಗೊತ್ತಿರಬೇಕಾದ ಎಷ್ಟೋ ವಿಚಾರಗಳು ಗೊತ್ತಲ್ಲವೆಂದು ಬೇಸರ ಪಡಬೇಕಾಗಿಬರಬಹುದು. ನಿಮ್ಮ ಕೆಲಸವಾಗಲು ಯಾರನ್ನಾದರೂ ದೂರ ಮಾಡುವಿರಿ. ನಿಮ್ಮ ಆಲಸ್ಯವನ್ನು ಹಿತಶತ್ರುಗಳು ಅವಕಾಶವಾಗಿ ತೆಗೆದುಕೊಳ್ಳುವರು.

ಧನು ರಾಶಿ:

ನಿಮ್ಮ ಅಗತ್ಯತೆಗಳ ಯಾದಿಯು ತುಂಬಾ ದೊಡ್ಡದಿದ್ದು ಅದನ್ನು ಪೂರೈಸಲು ಸತತ ಪ್ರಯತ್ನವನ್ನು ಮಾಡುವಿರಿ. ಹಿಂದೆ ಸಹಾಯ ಮಾಡಿದ ವ್ಯಕ್ತಿಗಳು ಈಗ ನಿಮ್ಮ ನೆರವಿಗೆ ಬರಲಿದ್ದಾರೆ. ನಿಮ್ಮ ಶಕ್ತಿಯ ಪ್ರದರ್ಶನವನ್ನು ಇಂದು ಮಾಡುವಿರಿ. ಹಗಲಿರುಳು ದುಡಿಯುವ ನಿಮ್ಮ ಗುಣ ಮೇಲಧಿಕಾರಿಗಳ ಗಮನಕ್ಕೆ ಬಂದು, ಮೆಚ್ಚುಗೆಯ ಮಾತುಗಳನ್ನಾಡಲಿದ್ದಾರೆ. ಇಂದು ನಿಮ್ಮ ಶತ್ರುಗಳು ಅಸಮಾಧಾನಗೊಳ್ಳುವರು. ಇಂದು ಪೋಷಕರ ಬಗ್ಗೆ ವಿಶೇಷ ಕಾಳಜಿ ವಹಿಸಿ.

ಮಕರ ರಾಶಿ:

ಹಗುರವಾದ ಮಾತುಗಳು ನಿಮಗೆ ಅಪಮಾನವನ್ನು ಮಾಡುವುದು. ನಿದ್ರೆಯಿಲ್ಲದೇ ಮನಸ್ಸು ಕಿರಿಕಿರಿಯನ್ನು ಅನುಭವಿಸುವುದು. ಎಲ್ಲವೂ ಸರಿಯಾಗಿ ಇರಬೇಕು ಎಂಬ ಪ್ರಯತ್ನ ಸರಿ. ಆದರೆ ಅದಕ್ಕಾಗಿ ಎಲ್ಲರನ್ನೂ ದೂಷಿಸುವುದು ಉತ್ತಮ ನಾಯಕತ್ವವಾಗದು. ವಿಷಾದದ ವಾತಾವರಣದಿಂದ ಹೊರಬರಲು ಕಷ್ಟವಾಗುವುದು. ಏನನ್ನೂ ಹೇಳದೇ ನಿಮ್ಮಷ್ಟಕ್ಕೆ ಗಮನಿಸಿ. ಇಂದು ಅನಗತ್ಯ ವಸ್ತುಗಳಿಗಾಗಿ ವ್ಯರ್ಥವಾಗಿ ಖರ್ಚಾಗಬಹುದು. ಅದನ್ನು ತಪ್ಪಿಸಿಕೊಳ್ಳುವುದು ಉತ್ತಮ.

ಕುಂಭ ರಾಶಿ:

ಇಂದು ನಿರುದ್ಯೋಗಿಗಳ ದುಃಖ ದೂರಾಗಲಿದೆ. ಸರ್ಕಾರಿ ಕಾಗದ ಪತ್ರಗಳನ್ನು ಯಾರಿಗೆ ತೋರಿಸುವ ಮುನ್ನ ಒಮ್ಮೆ ಅದರಲ್ಲಿರುವ ಅಂಶಗಳನ್ನು ಕೇಳುತ್ತಿರುವ ವ್ಯಕ್ತಿಗಳ ಹಿನ್ನೆಲೆ ತಿಳಿದುಕೊಳ್ಳಿ. ನಿಮ್ಮ ಅತ್ಯುತ್ಸಾಹದಿಂದ ಮಹತ್ತರ ಮಾಹಿತಿಗಳು ಅಪಾತ್ರರಿಗೆ ಹಂಚಿಕೆಯಾಗಲಿದೆ. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ. ಯಾರೂ ಇರದ ಪ್ರದೇಶದಲ್ಲಿ ನೀವೇ ದೊಡ್ಡವರಾಗುವಿರಿ. ಎಂದೋ ಸ್ಥಗಿತಗೊಂಡ ಕೆಲಸವನ್ನು ಪೂರ್ಣ ಮಾಡುವಿರಿ.

ಮೀನ ರಾಶಿ:

ಹೊಸ ಯೋಜನೆಗಳಲ್ಲಿ ವಿಘ್ನ ಕಂಡುಬರುತ್ತಿದೆ. ನಿಶ್ಚಿತ ಆದಾಯದಲ್ಲಿ ಗಣನೀಯ ಇಳಿಕೆಯಾಗಿ, ಚಿಂತೆಗೆ ಕಾರಣವಾಗುತ್ತದೆ. ಅಲಂಕಾರಕ್ಕೆ ಸಮಯವನ್ನು ಕೊಡುವಿರಿ. ದೇವಾಲಯದ ಪಾರುಪತ್ತೆದಾರರಿಗೆ ಹೊಸ ಸವಾಲುಗಳು ಎದುರಾಗಲಿವೆ. ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ದ್ವಂದ್ವ ಎದುರಾಗುವುದು. ರಾಜಕಾರಣಿಗಳು ಸಮಾರಂಭಗಳಿಗೆ ಭಾಗವಹಿಸುವರು. ಸರ್ಕಾರದ ಕಡೆಯಿಂದ ಆಗುವ ನಿಮ್ಮ ಕೆಲಸವನ್ನು ಪ್ರಭಾವಿ ವ್ಯಕ್ತಿಗಳ ಮೂಲಕ ಮುನ್ನಡೆಸುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಬ್ರಹ್ಮ, ಕರಣ : ತೈತಿಲ, ಸೂರ್ಯೋದಯ – 05 – 59 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:07 – 18:42, ಯಮಗಂಡ ಕಾಲ 12:21 – 13:56, ಗುಳಿಕ ಕಾಲ 15:31 – 17:07

-ಲೋಹಿತ ಹೆಬ್ಬಾರ್ – 8762924271 (what’s app only)

Source link

Leave a Reply

Your email address will not be published. Required fields are marked *