ದಿನ ಭವಿಷ್ಯ: ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ – Kannada News | Days Panchangam and Sankashti Chaturthi Significance by Dr. Basavaraj Guruji

ಇಂದಿನ ದಿನಾಂಕ 05-02-2026 ಗುರುವಾರವಾಗಿದ್ದು, ಇಂದಿನ ದಿನಭವಿಷ್ಯ ಹೇಗಿದೆ ಎಂಬುದನ್ನು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಇದು ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಚತುರ್ಥಿ, ಉತ್ತರಾ ನಕ್ಷತ್ರ, ಸುಕರ್ಮ ಯೋಗ ಮತ್ತು ಬವಕರಣ ಇರುವ ದಿನ. ಈ ದಿನದ ರಾಹುಕಾಲ ಮಧ್ಯಾಹ್ನ 2:00 ಗಂಟೆಯಿಂದ 3:28 ನಿಮಿಷದ ತನಕ ಇರುತ್ತದೆ. ಹಾಗೆಯೇ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು ಮಧ್ಯಾಹ್ನ 12:33 ನಿಮಿಷದಿಂದ 1:59 ನಿಮಿಷದ ತನಕ ಸುಕರ್ಮ ಕಾಲ ರೂಪದಲ್ಲಿ ಇರುತ್ತದೆ. ಗುರುವಾರ ಗುರುಗಳ ಲಹರಿಗಳು ಇರತಕ್ಕಂತಹ ಅದ್ಭುತವಾದ ಮತ್ತು ವಿಶೇಷವಾದ ದಿನ ಇದಾಗಿದೆ. ಕೃಷ್ಣಪಕ್ಷದ ಚತುರ್ಥಿ ಇರುವುದರಿಂದ ಇದನ್ನು ಸಂಕಷ್ಟಿ ಚತುರ್ಥಿ ಎಂದು ಕರೆಯಲಾಗುತ್ತದೆ. ಶುಕ್ಲಪಕ್ಷದ ಚತುರ್ಥಿಯನ್ನು ವಿನಾಯಕಿ ಚತುರ್ಥಿ ಎಂದು ಕರೆಯುತ್ತಾರೆ. ಇಂದು ಸಂಕಷ್ಟ ಚತುರ್ಥಿ ಇರುವ ಕಾರಣ, ಬೆಳಗಿನ ಜಾವ ವಿನಾಯಕನ ಪೂಜೆ ಮಾಡಿ ಉಪವಾಸ ಆಚರಿಸಬೇಕು. ದಿನಪೂರ್ತಿ ವಿನಾಯಕನ ಆರಾಧನೆ ಮಾಡುವುದರಿಂದ ನಮ್ಮ ಸಂಕಲ್ಪಗಳು ಈಡೇರತಕ್ಕಂತಹ ಪರ್ವ ದಿನ ಇದಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *