Headlines

ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪಶ್ಚಿಮ ಬಂಗಾಳದ ಚುನಾವಣೆ ತಯಾರಿ ಬಗ್ಗೆ ಪ್ರಲ್ಹಾದ್ ಜೋಶಿ ಮಾತು – Kannada News | Union Minister Pralhad Joshi on West Bengal Election Victory in TV9 Podcast 

ಬೆಂಗಳೂರು, ಜೂನ್ 15: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟಿವಿ9 ಜೊತೆಗಿನ ಮಾತುಕತೆಯಲ್ಲಿ ಪಶ್ಚಿಮ ಬಂಗಾಳ ಚುನಾವಣೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷದ ಅಭೂತಪೂರ್ವ ಗೆಲುವಿನ ಕುರಿತು ಮಾತನಾಡಿದ ಪ್ರಲ್ಹಾದ್ ಜೋಶಿ, ಚುನಾವಣಾ ಆಯೋಗವು ಶಾಂತಿಯುತ ಮತದಾನಕ್ಕೆ ಅವಕಾಶ ಕಲ್ಪಿಸಿದ್ದೇ ಪ್ರಮುಖ ಕಾರಣ ಎಂದರು. ಟಿಎಂಸಿ ಸರ್ಕಾರದ ಅವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ, ಕಟ್-ಮನಿ, ಗೂಂಡಾಗಿರಿ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದಿಂದ ಜನರು ಬೇಸತ್ತಿದ್ದರು. ಅಮಿತ್ ಶಾ ಕೇಂದ್ರ ಅರೆಸೇನಾ ಪಡೆಗಳನ್ನು ಅಲ್ಲಿಯೇ ಉಳಿಸುವುದಾಗಿ ಭರವಸೆ ನೀಡಿದ ನಂತರ ಜನರು ನಿರ್ಭಯವಾಗಿ ಮತ ಚಲಾಯಿಸಿದರು. ಇದೀಗ ಟಿಎಂಸಿ ತೊರೆಯುತ್ತಿರುವವರು ಲೂಟಿ ಮಾಡಲು ಅವಕಾಶವಿಲ್ಲದ ಕಾರಣ ಪಕ್ಷ ಬಿಟ್ಟು ಹೋಗುತ್ತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ವಿಶ್ಲೇಷಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಾಧಿಸಿದ ಭರ್ಜರಿ ಗೆಲುವಿನ ಕುರಿತು ಮಾತನಾಡಿದ ಪ್ರಲ್ಹಾದ್ ಜೋಶಿ, ಈ ಬಾರಿಯ ಚುನಾವಣೆಯಲ್ಲಿ ಹಿಂಸಾಚಾರಕ್ಕೆ ಅವಕಾಶ ನೀಡದ ಚುನಾವಣಾ ಆಯೋಗಕ್ಕೆ ಧನ್ಯವಾದ ಸಲ್ಲಿಸಿದರು. “ಜನರು ಟಿಎಂಸಿ ಸರ್ಕಾರದ ಕಟ್-ಮನಿ, ಭ್ರಷ್ಟಾಚಾರ ಮತ್ತು ಗೂಂಡಾಗಿರಿಯಿಂದ ಸಂಪೂರ್ಣವಾಗಿ ಬೇಸತ್ತಿದ್ದರು. ಟಿಎಂಸಿ ಆಡಳಿತದಲ್ಲಿ ಯಾವುದೇ ನಿರ್ಮಾಣಕ್ಕೆ, ಪ್ಲಾಟ್ ಖರೀದಿಗೆ ಅಥವಾ ವಾಹನ ಖರೀದಿಗೂ ಕೂಡ ಟಿಎಂಸಿ ಕಚೇರಿ ಅಥವಾ ಗೂಂಡಾಗಳ ಅನುಮತಿ ಪಡೆಯಬೇಕಿತ್ತು. ಅಮಿತ್ ಶಾ ಕೇಂದ್ರ ಅರೆಸೇನಾ ಪಡೆಗಳನ್ನು 3 ತಿಂಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಉಳಿಸುವುದಾಗಿ ಭರವಸೆ ನೀಡಿದ ನಂತರ, ಜನರು ನಿರ್ಭಯವಾಗಿ ಮತ ಚಲಾಯಿಸಲು ಸಾಧ್ಯವಾಯಿತು. ಇದರಿಂದ ಟಿಎಂಸಿ ಸರ್ಕಾರದ ವಿರುದ್ಧ ಜನ ತಮ್ಮ ಕೋಪವನ್ನು ಮತದಾನದ ಮೂಲಕ ವ್ಯಕ್ತಪಡಿಸಿದರು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *