ಕೋಲಾರ, ಜುಲೈ 03: ಜಿಲ್ಲೆಯ ಕುರುಬರಪೇಟೆ ಪ್ರದೇಶದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಆಯೋಗದ ನಿರ್ದಿಷ್ಟ ಸೂಚನೆಗಳಿಗಿಂತ ಭಿನ್ನವಾಗಿ ನಡೆಯುತ್ತಿರುವ ಬಗ್ಗೆ ವರದಿಯಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ಮತದಾರರ ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್ಗಳನ್ನು ಭರ್ತಿ ಮಾಡಬೇಕೆಂಬುದು ಆಯೋಗದ ನಿಯಮ. ಆದರೆ, ಕುರುಬರಪೇಟೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಓಗಳು) ಮತದಾರರನ್ನು ದೇಗುಲದ ಆವರಣಕ್ಕೆ ಕರೆಸಿ, ಅಲ್ಲಿಯೇ ಅರ್ಜಿಗಳನ್ನು ಭರ್ತಿ ಮಾಡುವ ಕೆಲಸ ಮಾಡುತ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
